Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು : ರೈಲ್ವೆ ಮೇಲ್ಸೆತುವೆಗಾಗಿ ಸಾರ್ವಜನಿಕರ ಪ್ರತಿಭಟನೆ
    ಊರ್ಮನೆ ಸಮಾಚಾರ

    ಬೈಂದೂರು : ರೈಲ್ವೆ ಮೇಲ್ಸೆತುವೆಗಾಗಿ ಸಾರ್ವಜನಿಕರ ಪ್ರತಿಭಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಬೈಂದೂರು-ಗಂಗನಾಡು ರಸ್ತೆ ಎಲ್.ಸಿ. ೭೩ ರೈಲ್ವೆಗೇಟ್ ಬಳಿ ಮೇಲ್ಸೆತುವೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಬೈಂದೂರು ತಾಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿ ನೇತೃತ್ವದಲ್ಲಿ ಸಾರ್ವಜನಿಕರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

    Click Here

    Call us

    Click Here

    ತಾಲೂಕು ಕೇಂದ್ರದ ಹೊಸ್ತಿಲಲ್ಲಿರುವ ಬೈಂದೂರು ಅಭಿವೃದ್ಧಿಯತ್ತ ಹೆಜ್ಜೆ ಹಾಕುತ್ತಿದ್ದು, ಇಲ್ಲಿಗೆ ಸೂರ‍್ಕುಂದ, ಕಲ್ಮಕ್ಕಿ, ಗಂಗನಾಡು, ಮೊದಲಾದ ಭಾಗದ ಜನರು ತೆರಳಬೇಕಾದರೆ ರೈಲು ಮಾರ್ಗವನ್ನು ಹಾದುಹೋಗಬೇಕಾಗಿದೆ. ಆದರೆ ಇಲ್ಲಿ ರೈಲುಗೇಟ್ ಅಳವಡಿಸಿದ್ದು, ಪ್ರತಿದಿನ ಹತ್ತಾರು ರೈಲುಗಳು ಈ ಮಾರ್ಗವಾಗಿ ಸಂಚರಿಸತ್ತಿರುತ್ತವೆ. ಆದರೆ ಇಲ್ಲಿ ಓಡಾಡುವ ಜನರಿಗೆ ಹಾಗೂ ವಾಹನಗಳ ಸಂಚಾರಕ್ಕೆ ರೈಲ್ವೆಗೇಟ್ ಅಡ್ಡಿಯಾಗಿದೆ. ಶೀಘ್ರವಾಗಿ ಮೇಲ್ಸೇತುವೆ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಾರೆ.

    ಅಲ್ಲದೇ ಈಗ ಕೊಂಕಣ ರೈಲ್ವೆ ನಿಗಮವು ಈ ರೈಲ್ವೆ ಮಾರ್ಗದಲ್ಲಿ ದ್ವಿಪಥ(ಎರಡು ಹಳಿಗಳನ್ನು) ನಿರ್ಮಿಸುವ ಯೋಜನೆಗೆ ಚಾಲನೆ ನೀಡಿದ್ದು, ಮುಂದಿನ ದಿನದಲ್ಲಿ ಈ ಮಾರ್ಗವಾಗಿ ರೈಲುಗಳ ಓಡಾಟ ಹೆಚ್ಚಾಗಲಿದೆ. ಇದರಿಂದಾಗಿ ವಿದ್ಯಾರ್ಥಿಗಳು, ನೌಕರಸ್ಥರು, ರೋಗಿಗಳು, ಕೂಲಿ ಕಾರ್ಮಿಕರ ಓಡಾಟ ದುಸ್ತರವಾಗುತ್ತದೆ. ಹೀಗಾಗಿ ಕೊಂಕಣ ರೈಲ್ವೆ ನಿಗಮವು ಈಗಾಗಲೇ ವಶಪಡಿಸಿಕೊಂಡಿರುವ ಭೂಮಿಯನ್ನೇ ಬಳಸಿಕೊಂಡು ಆದಷ್ಟು ಶೀಘ್ರದಲ್ಲಿ ಈ ರೈಲ್ವೆಗೇಟಿಗೆ ಪರ್ಯಾಯವಾಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದರು.

    ಪ್ರತಿಭಟನಾ ಸ್ಥಳಕ್ಕಾಗಮಿಸಿದ ಕೊಂಕಣ ರೈಲ್ವೆನಿಗಮದ ಎಇಎನ್ ಗೋಪಾಲಕೃಷ್ಣ, ಈ ಕೆಲಸ ತನ್ನ ಕಾರ್ಯವ್ಯಾಪ್ತಿಯ ಹೊರಗಿದ್ದು ನಾನು ಭರವಸೆ ಕೊಡಲು ಸಾಧ್ಯವಿಲ್ಲ. ನಿಮ್ಮ ಮನವಿಯನ್ನು ಮೇಲಾಧಿಕಾರಿಗೆ ತಲುಪಿಸಿ ವಸ್ತುಸ್ಥಿತಿಯನ್ನು ಮನದಟ್ಟು ಮಾಡುವ ಕೆಲಸ ಮಾಡುತ್ತೇನೆ ಎಂದರು. ಅವರಿಗೆ ಮಾತನಾಡಲೂ ಬಿಡದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದರು. ನಂತರ ಶಾಸಕ ಕೆ. ಗೋಪಾಲ ಪೂಜಾರಿ ಪ್ರತತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.

    ಎಲ್‌ಕೆಜಿ, ಯುಕೆಜಿ, ಒಂದು-ಎರಡು ಕ್ಲಾಸಿನ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಮೂರು ವಿವಿಧ ಖಾಸಗಿ ಶಾಲಾವಾಹನಗಳನ್ನು ಪ್ರಭಟನಾಕಾರರು ಗೇಟ್ ಬಳಿ ತಡೆಹಿಡಿದ ಪರಿಣಾಮ ಚಿಕ್ಕ ಮಕ್ಕಳು ತಮಗೇನೂ ತಿಳಿಯಲಿಲ್ಲವೆಂಬ ಹಾಗೆ ಬಸ್ಸಿನಲ್ಲಿಯೆ ಆಟವಾಡಿದರು. ಈ ವಿಷಯ ತಿಳಿಯುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ ಮಕ್ಕಳಿಗೆ ಪರ್ಯಾಯ ವಾಹನದ ವ್ಯವಸ್ಥೆಯೊಂದಿಗೆ ಶಾಲೆಗೆ ಕಳುಹಿಸಿದರು.

    Click here

    Click here

    Click here

    Click Here

    Call us

    Call us

    ಹಿರಿಯ ನಾಗರಿಕಾ ವೇದಿಕೆ ಅಧ್ಯಕ್ಷ ವಸಂತ ಹೆಗ್ಡೆ, ಕನ್ನಡ ಸಂಘದ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್, ಬಾಡ ಭಾಸ್ಕರ ಶೆಟ್ಟಿ ಸೇರಿದಂತೆ ಈ ಭಾಗದ ನೂರಾರು ಜನ ಪ್ರತಿಭಟನೆಯಲ್ಲಿ ಹಾಜರಿದ್ದರು. ಅಹಿತಕರ ಘಟನೆ ನಡೆಯದಂತೆ ಬೈಂದೂರು ಠಾಣಾಧಿಕಾರಿ ಸಂತೋಷ್ ಆನಂದ್ ಕಾಯ್ಕಿಣಿ ತಂಡ ಹಾಗೂ ರೈಲ್ವೆ ಪೋಲಿಸ್ ಬಿಗು ಬಂದೋಬಸ್ತ್ ಏರ್ಪಡಿಸಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    six + 4 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.