Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಜೆಪಿಗರಿಗೆ ಸೋಲಿನ ಭಯ. ಹಾಗಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದೆ: ರಾಜು ಪೂಜಾರಿ
    ಊರ್ಮನೆ ಸಮಾಚಾರ

    ಬಿಜೆಪಿಗರಿಗೆ ಸೋಲಿನ ಭಯ. ಹಾಗಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದೆ: ರಾಜು ಪೂಜಾರಿ

    Updated:17/02/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು ಬಿಜೆಪಿ ಅಧ್ಯಕ್ಷರ ಹುರುಳಿಲ್ಲದ ಆರೋಪ ನೋವುಂಟುಮಾಡಿದೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ

    ಬೈಂದೂರು: ಚುನಾವಣೆಯಲ್ಲಿ ಸೋಲಿನ ಸುಳಿವು ದೊರೆತ ಭಾಜಪ ಅಭ್ಯರ್ಥಿಗಳ ಕಡೆಯವರು ಸುಳ್ಳು ಪ್ರಚಾರ ಮಾಡುವುದರಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಇಂತಹ ಅಪಪ್ರಚಾರಗಳಿಗೆ ಹೆದರುವುದಿಲ್ಲ. ಬಿಜೆಪಿ ಎಷ್ಟೇ ಪ್ರಯತ್ನ ಪಟ್ಟರೂ ಮತದಾರರ ಮನಸ್ಸನ್ನು ಗೆಲ್ಲಲಾಗಲಿಲ್ಲ. ಹಾಗಾಗಿ ಚುನಾವಣೆ ಘೋಷಣೆ ಯಾದಾಗಿನಿಂದಲೂ ನನ್ನ ವಿರುದ್ದ ಕೆಲವು ಮಾಧ್ಯಮಗಳ ಮೂಲಕ ಅಪಪ್ರಚಾರ ಮಾಡುತ್ತಲೇ ಬಂದಿದ್ದಾರೆ ಎಂದು ಬೈಂದೂರು ಜಿಲ್ಲಾ ಪಂಚಾಯತ್ ಅಭ್ಯರ್ಥಿ ರಾಜು ಪೂಜಾರಿ ಆರೋಪಿಸಿದರು.

    ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ನಿರಂತರ ತೇಜೋವಧೆ ಮಾಡಿ, ಸುಳ್ಳಿನ ಕಂತೆ ಹಣೆದರೆ ಗೆಲುವು ಸಾಧ್ಯ ಎಂದು ಬಿಜೆಪಿ ಪಕ್ಷದವರು ತಿಳಿದಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲಲು ಸರಿಯಾದ ಮಾರ್ಗಗಳಿವೆ. ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು , ಜನರಿಗೆ ಸರಕಾರದಿಂದ ದೊರೆತ ಸೌಲಭ್ಯಗಳು, ಶಾಸಕ ಕೆ. ಗೋಪಾಲ ಪೂಜಾರಿ ಯವರ ಸಾಧನೆಗಳು ಗೆಲುವಿಗೆ ಪೂರಕವಾಗಿದೆ. ಅದು ಬಿಟ್ಟು ಅನ್ಯ ಮಾರ್ಗದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಬೇಕಾಗಿಲ್ಲ ತಿರುಗೇಟು ನೀಡಿದ್ದಾರೆ.  ಕುಂದಾಪ್ರ ಡಾಟ್ ಕಾಂ ಸುದ್ದಿ

    ನಾನು ಗ್ರಾಮ ಪಂಚಾಯತ್ ಸದಸ್ಯನಾಗಿ, ಜಿಲ್ಲಾ ಪಂಚಾಯತ್ ಸದಸ್ಯನಾಗಿ, ತಾಲೂಕು ಪಂಚಾಯತ್ ಸದಸ್ಯನಾಗಿ, ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ಕಳೆದ ೨೫ ವರ್ಷಗಳಿಂದ ರಾಜಕೀಯ, ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡಿದ್ದೇನೆ. ಜನಪರ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದೇನೆ. ನನ್ನ ಗೆಲುವಿಗೆ ಕಾಂಗ್ರೆಸ್ ಪಕ್ಷವಿದೆ, ಮತದಾರರಿದ್ದಾರೆ. ಹಗಲು ರಾತ್ರಿ ದುಡಿಯುವ ಕಾರ್ಯಕರ್ತ ರಿದ್ದಾರೆ. ಜನರ ನಿರಂತರ ಒಡನಾಟವಿದೆ. ಅದು ಬಿಟ್ಟು ಅನ್ಯ ಮಾರ್ಗಗಳಲ್ಲಿ ನನಗೆ ಮತಗಳಿಸಬೇಕಾದ ಅಗತ್ಯತೆಗಳಿಲ್ಲ ಎಂದರು.

    Click here

    Click here

    Click here

    Call us

    Call us

    ಸಮವಸ್ತ್ರಕ್ಕೂ ನನಗೂ ಸಂಬಂಧವಿಲ್ಲ:
    ಬೈಂದೂರಿನಲ್ಲಿ ದೊರೆತ ಸಮವಸ್ತ್ರ ಪ್ರಕರಣವನ್ನು ನಾನು ಮಾಡಿದ್ದು ಎಂದು ಹೇಳುವ ಬಿಜೆಪಿಯವರು ಸರಿಯಾಗಿ ತಿಳಿದು ಹೇಳಬೇಕು. ಅದು ನವೋದಯ ಗುಂಪಿನ ಸಮವಸ್ತ್ರ. ರಾಜಕಾರಣದಲ್ಲಿ ಸುಳ್ಳಿನ ಸರಮಾಲೆ ಸೃಷ್ಟಿಸುವುದು ಬಿಜೆಪಿಯ ಅಭ್ಯಾಸ. ಅದು ಬಿಟ್ಟರೆ ಬೇರೆ ವಿಷಯಗಳೆ ಇಲ್ಲ. ಚುನಾವಣೆಯ ಆರಂಭದಿಂದಲೆ ಇಂತಹ ಅಪಪ್ರಚಾರ ಮಾಡುತ್ತಾ ಬಂದಿದ್ದಾರೆ. ಬಿಜೆಪಿಯ ಕಾರ್ಯಕರ್ತನೊಬ್ಬ ಆರೋಪ ಮಾಡಿದ್ದರೇ ಅಷ್ಟು ಪರಿಗಣಿಸುತ್ತಿರಲಿಲ್ಲ. ಆದರೆ ನನ್ನ ಬಗ್ಗೆ ತಿಳಿದಿರುವ ಬೈಂದೂರು ಬಿಜೆಪಿ ಅಧ್ಯಕ್ಷ ಸುಕುಮಾರ ಶೆಟ್ಟಿ ಅವರು ಇಂತಹ ವಿಚಾರ ಹೇಳಿರುವುದು ಬೇಸರ ತರಿಸಿದೆ ಎಂದರು. ನಿರಂತರ ಜನಸಂಪರ್ಕವಿರುವ ನನಗೆ ಮತದಾರರ ಬಗ್ಗೆ ತಿಳಿದಿದೆ. ಮತದಾರರು ಈ ಬಗ್ಗೆ ಗಮನ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ

    ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಗಾಣಿಗ, ಕಾರ್ಯದರ್ಶಿ ನಾಗರಾಜ ಗಾಣಿಗ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮಾರ್ಟಿನ್ ಡಯಾಸ್, ಕಾಂಗ್ರೆಸ್ ಹಿಂದೂಳಿದ ಘಟಕದ ಅಧ್ಯಕ್ಷ ಮಂಜುನಾಥ ಖಾರ್ವಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    _MG_1107

    TP ZP Election Zilla Panchayat Election
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.