Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಜಿಪಂ ಕ್ಷೇತ್ರ: ಆಗಬೇಕಾದ ಕೆಲಸ ಸಾಕಷ್ಟಿದೆ. ಅಭ್ಯರ್ಥಿಗೆ ಅಭಿವೃದ್ಧಿಯೊಂದೇ ಸವಾಲು
    ವಿಶೇಷ ವರದಿ

    ಬೈಂದೂರು ಜಿಪಂ ಕ್ಷೇತ್ರ: ಆಗಬೇಕಾದ ಕೆಲಸ ಸಾಕಷ್ಟಿದೆ. ಅಭ್ಯರ್ಥಿಗೆ ಅಭಿವೃದ್ಧಿಯೊಂದೇ ಸವಾಲು

    Updated:17/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ
    ಬೈಂದೂರು: ಉಡುಪಿ ಜಿಲ್ಲೆಯ ನೈಸರ್ಗಿಕ ಸೊಬಗಿನ ತವರೂರಾದ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ಹೆಗ್ಗಳಿಕೆ ಇಲ್ಲಿನದ್ದು. ಬಿಂದುಋಷಿ ಎಂಬ ಮುನಿಯು ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ಊರಿನ ಹಿಂದಿನ ಐತಿಹ್ಯ.

    Click Here

    Call us

    Click Here

    post-election-Byndoorಪಶ್ಚಿಮದ ಅರಬ್ಬಿ ಸಮುದ್ರ, ಪೂರ್ವದ ಪಶ್ಚಿಮ ಘಟ್ಟಗಳ ಸಾಲು ಬೈಂದೂರಿನ ನೈಸರ್ಗಿಕ ಸೌಂದರ್ಯವನ್ನು ಇಮ್ಮುಡಿಗೊಳಿಸಿದ್ದರೇ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ಬೈಂದೂರು ಶ್ರೀ ಸೇನೇಶ್ವರ ಸೇರಿದಂತೆ ಹತ್ತಾರು ದೇವಾಲಯಗಳು, ಜಾಮೀಯಾ ಮಸೀದಿ, ಹೋಲಿ ಕ್ರಾಸ್ ಚಚ್ ಇವೇ ಮುಂತಾದವುಗಳು ಬೈಂದೂರಿನ ಧಾರ್ಮಿಕ ಶಕ್ತಿಕೇಂದ್ರಗಳಾಗಿ ಭಕ್ತರನ್ನು ಕರುಣಿಸಿವೆ. ಬೈಂದೂರು ನಗರವನ್ನು ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳು; ಮೂಕಾಂಬಿಕಾ ರೋಡ್ ಬೈಂದೂರು, ಶಿರೂರು, ಬಿಜೂರು ರೈಲ್ವೇ ನಿಲ್ದಾಣಗಳು; ಕೊಡೇರಿ, ಅಳ್ವೆಕೋಡಿ ಕಿರುಬಂದರು ನಗರಕ್ಕೆ ರಾಷ್ಟ್ರವ್ಯಾಪಿ ಸದೃಢ ಸಂಪರ್ಕವನ್ನು ಕಲ್ಪಿಸಿದ್ದರೇ, ಲಾವಣ್ಯ, ಸುರಭಿ, ಯುನೆಸ್ಕೊ, ರೋಟರಿ ಬೈಂದೂರು, ಜೆಸಿಐ, ಮುಂತಾದವುಗಳು ಇಲ್ಲಿನ ಕಲಾ ಸಾಂಸ್ಕೃತಿಕ ಸಿರಿವಂತಿಕೆಯನ್ನು ಎತ್ತಿ ಹಿಡಿದಿವೆ. ಕುಂದಾಪ್ರ ಡಾಟ್ ಕಾಂ ವರದಿ ಒತ್ತಿನಣೆ ಪ್ರದೇಶದಲ್ಲಿರುವ ಮ್ಯಾಂಗನೀಸ್ ನಿಕ್ಷೇಪಗಳು ರಾಷ್ಟ್ರೀಯ ಸಂಪತ್ತಿನ ಸೂಚಕವಾದರೆ, ಮರವಂತೆ, ಉಪ್ಪುಂದ, ಸೋಮೇಶ್ವರ, ಅಳ್ವೆಗದ್ದೆ ಕಡಲತೀರ, ಒತ್ತಿನಣೆ ಕ್ಷೀತಿಜ ನೇಸರಧಾಮ, ಕೂಸಳ್ಳಿ ಜಲಪಾತ, ಆನೆಝರಿ ಸೇರಿದಂತೆ ಬೈಂದೂರು ಸುತ್ತಲಿನ ಹತ್ತು ಹಲವು ತಾಣಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ.

    [quote font_size=”16″ bgcolor=”#ffffff” bcolor=”#dd9933″ arrow=”yes” align=”right”]

    ಕುತೂಹಲದ ಕ್ಷೇತ್ರ:
    ಬೈಂದೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದಿಂದ ರಾಜು ಪೂಜಾರಿ ಸ್ವರ್ಧಿಸುತ್ತಿದ್ದರೇ, ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಶಂಕರ ಪೂಜಾರಿ ಕಣದಲ್ಲಿದ್ದಾರೆ. ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿರುವ ರಾಜು ಪೂಜಾರಿ ಅವರಿಗೆ ಈ ಹಿಂದೆ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಪರಾವಭಗೊಂಡಿದ್ದ ಶಂಕರ ಪೂಜಾರಿ ಅವರು ಪ್ರಬಲ ಸ್ವರ್ಧೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಒಟ್ಟಿನಲ್ಲಿ ಸಾಕಷ್ಟು ಕುತೂಹಲ ಕೆರಳಿಸಿರುವ ಕ್ಷೇತ್ರದಲ್ಲಿ ಅದೃಷ್ಟ ಲಕ್ಷ್ಮಿ ಯಾರಿಗೆ ಒಲಿಯಲಿದ್ದಾಳೆ ಎಂದು ಕಾದು ನೋಡಬೇಕಿದೆ. [/quote]

    ಯಡ್ತರೆ ಮಂಜಯ್ಯ ಶೆಟ್ಟಿಯಂತಹ ಧೀಮಂತ ರಾಜಕಾರಣಿ ಮೊದಲ ಬಾರಿಗೆ ವಿಧಾನ ಸಭೆಯನ್ನು, ಮಹಾಬಲ ಶೆಟ್ಟಿಯಂತಹ ರಾಜಕಾರಣಿ ಬೈಂದೂರು ಪುರಸಭೆಯನ್ನು ಪ್ರವೇಶಿಸಿ ಇಲ್ಲಿನ ಭಾಗದ ಜನರ ರಾಜಕೀಯ ಪ್ರತಿನಿಧಿಯಾಗಿ ಹೆಸರು ಮಾಡಿದ್ದರೇ, ಕವಿ ಅಡಿಗರು, ಅವರ ಸಾಲಿನಲ್ಲಿ ಹತ್ತಾರು ಹಿರಿಕಿರಿಯ ಸಾಹಿತಿಗಳು, ಚಿತ್ರನಟರು, ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಕಲಾವಿದರು, ಸಂಘಟಕರು, ವ್ಯಾಪಾರಿಗಳು ಬೈಂದೂರಿನ ಕೀರ್ತಿಯನ್ನು ಜಗದಗಲ ಪಸರಿಸುವಲ್ಲಿ ವಿಶಿಷ್ಟ ಕೊಡುಗೆಯನ್ನು ನೀಡಿದ್ದಾರೆ. ಕುಂದಾಪ್ರ ಡಾಟ್ ಕಾಂ ವರದಿ

    Click here

    Click here

    Click here

    Call us

    Call us

    ತನ್ನದೇ ಆದ ವೈಶಿಷ್ಟ್ಯತೆಗಳಿಂದ ಗುರುತಿಸಿಕೊಂಡಿರುವ ಬೈಂದೂರು ಅಭಿವೃದ್ಧಿಯ ದೃಷ್ಟಿಯಲ್ಲಿ ಸಾಕಷ್ಟು ಹಿಂದೆ ಬಿದ್ದಿದೆ ಎಂಬುದನ್ನು ಒಪ್ಪಿಕೊಳ್ಳಬೇಕು. ಕ್ಷೇತ್ರದ ಅಭಿವೃದ್ಧಿಗೆ ವಿಪುಲವಾದ ಅವಕಾಶಗಳಿದ್ದರೂ ಅದು ನಿರೀಕ್ಷಿತ ಮಟ್ಟದಲ್ಲಿ ಸದ್ಬಳಕೆಗೊಂಡಿಲ್ಲ. ಇದನ್ನು ಗಮನದಲ್ಲಿರಿಸಿಕೊಂಡು ರಾಮಕೃಷ್ಣ ಹೆಗಡೆಯವರ ಕಾಲದಿಂದಲೂ ಬೈಂದೂರು ತಾಲೂಕಾಗಬೇಕೆಂಬುದನ್ನು ಅನೇಕ ವರದಿಗಳು ಶಿಫಾರಸ್ಸು ಮಾಡಿದ್ದರೂ, ಹೋರಾಟ ನಡೆಸುತ್ತಿದ್ದರೂ ಅದು ಮೂರು ದಶಕಗಳೇ ಕಳೆದರೂ ಈಡೇರಿಲ್ಲ. ಅಂದಿನಿಂದ ಈ ತನಕ ಬೈಂದೂರು ತಾಲೂಕಾಗಬೇಕೆಂದು ಹೋರಾಟಗಳು ನಡೆಯುತ್ತಲೇ ಇದೆ. ಪ್ರವಾಸೋದ್ಯಮ ದೃಷ್ಠಿಯಿಂದಲೂ ವಿಪುಲವಾದ ಅವಕಾಶ ಹೊಂದಿರುವ ಬೈಂದೂರಿನಲ್ಲಿ ನಿಸರ್ಗದತ್ತವಾಗಿರುವ ರಾಷ್ಟ್ರವ್ಯಾಪಿ ಗುರುತಿಸಬಹುದಾದ ಪ್ರವಾಸಿ ತಾಣಗಳಿವೆಯಾದರೂ, ಅದು ಮೂಲಭೂತ ಸೌಕರ್ಯ ಹಾಗೂ ಮಾಹಿತಿ ಕೊರತೆಯಿಂದ ಹಿಂದುಳಿದಿದೆ. ಕುಂದಾಪ್ರ ಡಾಟ್ ಕಾಂ ವರದಿ

    ಸಮಸ್ಯೆ-ಬೇಡಿಕೆ:

    * ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ತಲೆದೂರುವುದು ಸಾಮಾನ್ಯವಾಗಿದ್ದು ಅದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಲಾಗಲಿಲ್ಲ.

    * ಕೆಲವೆಡೆ ರಸ್ತೆ, ಬೀದಿದೀಪ, ಕಿಂಡಿಅಣೆಕಟ್ಟು ಅಭಿವೃಧ್ಧಿಗಳೊಳ್ಳಬೇಕಿದೆ.

    * ಹಲವು ವರ್ಷಗಳಿಂದಲೂ ಬೇಡಿಕೆಯಲ್ಲಿರುವ ಬೈಂದೂರು ತಾಲೂಕು ಕನಸು ನನಸಾಗಬೇಕಿದೆ. ಮತ್ತು ಬೈಂದೂರು ಪಟ್ಟಣವೇ ತಾಲೂಕಾಗಬೇಕಿದೆ.
    * ಕುಮ್ಕಿ ಭೂಮಿ ಹಕ್ಕು, ಕಸ್ತೂರಿ ರಂಗನ್ ವರದಿಯ ಗೊಂದಲ ನಿವಾರಣೆಯಾಗಬೇಕಿದೆ.

    ಚುನಾವಣಾ ಕ್ಷೇತ್ರಗಳು
    ಯಡ್ತರೆ,, ಬೈಂದೂರು, ಕೊಲ್ಲೂರು, ಕಾಲ್ತೋಡು, ಗೋಳಿಹೊಳೆ, ಜಡ್ಕಲ್ ಮುದೂರು

    ಕಾಂಗ್ರೆಸ್ ಬೆಂಬಲಿತ ಪಂಚಾಯತ್: ಬೈಂದೂರು ಯಡ್ತರೆ, ಕಾಲ್ತೋಡು, ಕೊಲ್ಲೂರು
    ಬಿಜೆಪಿ ಬೆಂಬಲಿತ ಪಂಚಾಯತ್: ಗೋಳಿಹೊಳೆ, ಜಡ್ಕಲ್, ಮುದೂರು

    Byndoor TP ZP Election Zilla Panchayat Election
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಂಗಭೂಮಿಯಿಂದ ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    15/12/2025

    ಡಿ.14ರಿಂದ 08 ದಿನಗಳ ಕಾಲ ಬೈಂದೂರಿನಲ್ಲಿ ರಾಜ್ಯ ಮಟ್ಟದ ನಾಟಕ ಸ್ಪರ್ಧೆ: ಆನಂದ ಮದ್ದೋಡಿ

    12/12/2025

    ಡಿ.25ರಂದು ಮಿಯ್ಯಾಣಿ ಕಾಡಿನತಾರು ಸೂರ್ಯ ಕಂಬಳೋತ್ಸವ

    12/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.