ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಸಮೀಪದ ಕೊಡೇರಿ ಎಡಮಾವಿನ ಹೊಳೆಯಲ್ಲಿ ಮಹಿಳೆಯೋರ್ವಳ ಶವ ಪತ್ತೆಯಾಗಿದ್ದು ಮೃತರನ್ನು ಮುತ್ತು ದೇವಾಡಿಗ (50) ಎಂದು ಗುರುತಿಸಿಲಾಗಿದೆ.
ಶುಕ್ರವಾರ ಸಂಜೆ ಕೊಡೇರಿಯಿಂದ ಮರವಂತೆಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಹೋಗಲು ನಡೆದುಕೊಂಡು ಬರುತ್ತಿದ್ದ ವೇಳೆ ಕಾಲು ಜಾರಿ ಎಡಮಾವಿನ ಹೊಳೆಗೆ ಬಿದ್ದು ಸ್ಥಳದಲ್ಲಿಯೇ ಮೃತಟ್ಟಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳದಲ್ಲಿ ದೊರೆತ ಘಟನಾ ಸ್ಥಳದಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಮದ್ಯದ ಬಾಟೆಲ್ ಹಾಗೂ ಮೊಬೈಲ್ ದೊರೆದಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.