Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಾ ಶಿವರಾತ್ರಿ: ಮಹಿಮೆ ಮತ್ತು ಜಾಗರಣೆ
    ತನ್ನಿಮಿತ್ತ

    ಮಹಾ ಶಿವರಾತ್ರಿ: ಮಹಿಮೆ ಮತ್ತು ಜಾಗರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ ಮಂಗಳಕರ ರಾತ್ರಿ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ ಶಿವನ ಕೃಪೆಗೆ ಪಾತ್ರವಾಗುವ ಶುಭ ದಿನ. ಈ ದಿನ ಶಿವನನ್ನು ಭಕ್ತಿಯಿಂದ ಪೂಜಿಸಿದರೆ, ತಾವು ಮಾಡಿದ ಪಾಪಗಳೆಲ್ಲವೂ ಪರಿಹಾರವಾಗಿ, ಮೋಕ್ಷ ಪ್ರಾಪ್ತವಾಗುತ್ತದೆ ಎಂಬುದು ಭಕ್ತರ ಬಲವಾದ ನಂಬಿಕೆ. ಮದುವೆಯಾಗದ ಹೆಣ್ಣುಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ, ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸುವುದು ಸಂಪ್ರದಾಯ. ಶಿವರಾತ್ರಿಯಂದು ಶಿವನನ್ನು ಪೂಜಿಸಿದರೆ, ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ ಆಸ್ತಿಕರದು.

    Click Here

    Call us

    Click Here

    ಶಿವರಾತ್ರಿಯ ಮಹಿಮೆ:
    ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ ಮಹೋತ್ಸವದ ದಿನವಿದು ಎಂಬುದು ವಿಶೇಷ. ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡಿ ಶಿವನಾಮ ಪಠಿಸುತ್ತಾ, ತಪಸ್ಸು ಮಾಡಿ, ಶಿವನನ್ನು ಮೆಚ್ಚಿಸಿ, ವಿವಾಹವಾದಳೆಂಬುದು ಪ್ರತೀತಿ. ಶಿವ ರುದ್ರತಾಂಡವನಾಡಿದ ರಾತ್ರಿಯೂ ಇಂದೇ ಎನ್ನಲಾಗುತ್ತದೆ.

    ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ. ಹಾಗಾಗಿ, ಭಕ್ತರು ಇಡೀ ರಾತ್ರಿ ಎಚ್ಚರವಿದ್ದು, ನೀಲಕಂಠನನ್ನು ಸ್ತುತಿಸುತ್ತಾರೆ. ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಲಿಂಗಪುರಾಣದ ಪ್ರಕಾರ, ಲಿಂಗ ರೂಪಿಯಾಗಿ ಭಕ್ತರಿಗೆ ಅನುಗ್ರಹ ನೀಡಿದ ದಿನವಿದು. ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ.

    ಜಾಗರಣೆಯ ವೈಜ್ಞಾನಿಕ ವಿಶ್ಲೇಷಣೆ:
    ಮಾನವನ ಬದುಕಿನ ಚಕ್ರ ಸೃಷ್ಟಿ, ಸ್ಥಿತಿ ಹಾಗೂ ಲಯಗಳನ್ನು ಅವಲಂಬಿಸಿದೆ. ಜಲ, ನೆಲ, ಗಾಳಿ, ಬೆಂಕಿ, ಆಕಾಶಗಳೆಂಬ ಪಂಚಭೂತಗಳಿಂದ ಆದ ಮಾನವ ಪ್ರಕೃತಿ ನಿಯಮಗಳಿಗೆ ಒಳಪಟ್ಟಿದ್ದಾನೆ. ಪ್ರಕೃತಿಗೂ ಒಂದು ನಿಯಮಿತ ನಿಯಮ, ಚಲನೆ ಇದೆ. ಭೂಮಿಯ ಸುತ್ತ ಚಲಿಸುವ ಚಂದ್ರ ಒಂದು ದಿನದಲ್ಲಿ 12 ಡಿಗ್ರಿಗಳಷ್ಟು ಸಂಚರಿಸುತ್ತಾನೆ. ಇದಕ್ಕೆ ತಿಥಿ (ಪಾಡ್ಯ, ಬಿದಿಗೆ…..) ಎನ್ನುತ್ತಾರೆ. ಭೂಮಿಯ ಒಂದು ನಿಗದಿತ ಕೋನಕ್ಕೆ ಚಂದ್ರನು ಬಂದಾಗ ಆತನ ಪ್ರಭಾವ ಹೆಚ್ಚಾಗಿರುತ್ತದೆ. ಚಂದ್ರನು ಭೂಮಿಯ 180 ಡಿಗ್ರಿ ಕೇಂದ್ರ- ಕೋನಕ್ಕೆ ಬಂದಾಗ ಆಕರ್ಷಣೆ ಅಧಿಕವಾಗಿರುತ್ತದೆ. ಹೀಗಾಗೇ ಸಮುದ್ರದ ಅಲೆಗಳ ಮೊರೆತವೂ ಹೆಚ್ಚುತ್ತದೆ. ಮಿಗಿಲಾಗಿ ಶೇಕಡಾ 80ರಷ್ಟು ಜಲವರ್ಗಕ್ಕೆ ಸೇರಿದ ಮನುಷ್ಯನ ಮೆದುಳು, ಜೀರ್ಣಾಂಗ, ಪಿತ್ತಕೋಶ ಹಾಗೂ ಮೂತ್ರ ಜನಕಾಂಗಳ ಮೇಲೂ ಚಂದ್ರನ ಪ್ರಭಾವ ಈ ಅವಧಿಯಲ್ಲಿ ತೀಕ್ಷ್ಣವಾಗಿರುತ್ತದಂತೆ. ಅದಕ್ಕೆ ಅಮಾವಾಸ್ಯೆ ಮತ್ತು ಪೂರ್ಣಿಮೆಯಲ್ಲಿ ಮಾನಸಿಕ ರೋಗಿಗಳಿಗೆ ಉದ್ರೇಕ ಹೆಚ್ಚುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞರು. ಮಾಘ ಮಾಸದ ಚತುರ್ದಶಿಯಂದು ಕ್ಷೀಣ ಚಂದ್ರನ ಪ್ರಭಾವ ಇರುವುದರಿಂದ ಅಂದು ಜಾಗರೂಕರಾಗಿದ್ದು, ಜಾಗರಣೆ ಮಾಡಿದರೆ (ನಿದ್ದೆ ಮಾಡದೆ ಎಚ್ಚರ ಸ್ಥಿತಿ) ಮಾನವನಲ್ಲಿ ಉತ್ಸಾಹ ಹೆಚ್ಚಿ, ಆತನ ಚಿಂತನೆ ವೃದ್ಧಿಸುತ್ತದೆ.

    Maha Shivaratri

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶರನ್ನವರಾತ್ರಿ: ದೇವಿಯ ಒಂಭತ್ತು ಸ್ವರೂಪಗಳ ಮಹತ್ವ

    22/09/2025

    ಬೆಳಕ ಚಿತ್ರಿಸಿದ ಕ್ಷಣಗಳ ಹಬ್ಬ – ವಿಶ್ವ ಛಾಯಾಗ್ರಹಣ ದಿನ

    19/08/2025

    ಮುಖದ ಸೌಂದರ್ಯ ಹೆಚ್ಚಿಸಲು ಫೇಶಿಯಲ್‌ ಯೋಗ ಎಂಬ ಟ್ರೆಂಡ್

    11/04/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d