Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಕ್ಕಳಗೆ ಉತ್ಕೃಷ್ಟ-ವೈಜ್ಞಾನಿಕ ಶಿಕ್ಷಣ ನೀಡುವುದು ಪ್ರಧಾನಿ ಕನಸು : ಸುರೇಶ ಬಟವಾಡಿ
    ಊರ್ಮನೆ ಸಮಾಚಾರ

    ಮಕ್ಕಳಗೆ ಉತ್ಕೃಷ್ಟ-ವೈಜ್ಞಾನಿಕ ಶಿಕ್ಷಣ ನೀಡುವುದು ಪ್ರಧಾನಿ ಕನಸು : ಸುರೇಶ ಬಟವಾಡಿ

    Updated:09/03/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ರಾಷ್ಟ್ರೀಯ ಆವಿಷ್ಕಾರ ಅಭಿಯಾನವು ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾದ ಒಂದು ಭಾಗವಾಗಿದ್ದು, ಮಕ್ಕಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳ ಕಲಿಕಾ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಈ ಯೋಜನೆ ಜಾರಿಮಾಡಿದೆ ಎಂದು ಜಿಪಂ ಸದಸ್ಯ ಸುರೇಶ ಬಟವಾಡಿ ಹೇಳಿದರು.

    Click Here

    Call us

    Click Here

    ಇಲ್ಲಿನ ಮೇಲ್ಪಂಗ್ತಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಸರ್ವ ಶಿಕ್ಷಣ ಅಭಿಯಾನದ ಆಶ್ರಯದಲ್ಲಿ ರಾಷ್ಟ್ರೀಯ ಆವಿಷ್ಕಾರ ಅಭಿಯಾನ-2016 ಯೋಜನೆಯ ಶಿರೂರು ಕ್ಲಸ್ಟರ್ ವಿಭಾಗದ ವಿಜ್ಞಾನ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಹೊಸ ಆವಿಷ್ಕಾರ ಮತ್ತು ಪ್ರಯೋಗಗಳ ಮೂಲಕ ಪ್ರಾಥಮಿಕ ಹಂತದಿಂದಲೇ ಉತ್ಕೃತ ಮಟ್ಟದ ಶಿಕ್ಷಣ ಎಲ್ಲಾ ಮಕ್ಕಳಿಗೂ ನೀಡಬೇಕೆನ್ನುವ ಹಾಗೂ ವೈಜ್ಞಾನಿಕವಾಗಿ ಮಕ್ಕಳು ಬೆಳೆಯಬೇಕೆಂಬ ಪ್ರಧಾನಿ ಮೋದಿಯವರ ಕನಸು ಈ ರೀತಿಯಲ್ಲಿ ಕಾರ್ಯರೂಪಕ್ಕೆ ಬಂದಿದೆ ಎಂದರು.

    ವೈಜ್ಞಾನಿಕ ಮನೋಭಾವನೆ, ಹೊಸ ಚಿಂತನೆಗಳನ್ನು ಮಕ್ಕಳ ಮನಸ್ಸಿಗೆ ನಾಟುವಂತೆ ಶಿಕ್ಷಕರು ಪ್ರೇರಣೆ ನೀಡಬೇಕು. ಒಂದು ಶಾಲೆ ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಕ್ಷೇತ್ರಗಳಲ್ಲಿ ಅಭಿವೃದ್ದಿ ಸಾಧಿಸಬೇಕಾದರೆ ಅದು ಕ್ರೀಯಾಶಿಲ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದ ಬಟವಾಡಿ, ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಲ್ಲಿ ಪ್ರಾಮಾಣಿಕವಾಗಿ ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

    ಸ್ಥಳೀಯ ತಾಪಂ ಸದಸ್ಯ ಪುಷ್ಪರಾಜ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಪ್ರಯೋಗಾಲಯಕ್ಕೆ ಪೀಠೋಪಕರಣ ನೀಡಿದ ಉದ್ಯಮಿ ಮಣೆಗಾರ್ ಅಬ್ದುಲ್ ರೆಹಮಾನ್ ಇವರು ಸಿ.ವಿ.ರಾಮನ್ ಪ್ರಯೋಗಾಲಯ ಹಾಗೂ ಶಿರೂರು ಹೊಸ್ಮನೆ ದಯಾನಂದ ಆರ್. ಶೆಟ್ಟಿ ತಮ್ಮ ತಾಯಿಯ ಸ್ಮರಣಾರ್ಥ ನೀಡಿದ ಕುಡಿಯುವ ನೀರಿನ ಘಟಕವನ್ನು ಕುಟುಂಬ ಸದಸ್ಯ ಸತೀಶ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು.

    ಶಿರೂರು ಗ್ರಾಪಂ ಸದಸ್ಯೆ ಸರಳಾ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಹರೀಶ್ ಕೆ., ಪ್ರಭಾಕರ ಬಿಲ್ಲವ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಶಂಕರ್ ಸ್ವಾಗತಿಸಿ, ಸಶಿಅ ಉಪ ಯೋಜನಾಧಿಕಾರಿ ಚಂದ್ರ ನಾಯ್ಕ್ ಪ್ರಾಸ್ತಾವಿಸಿದರು. ಶಿಕ್ಷಕ ಸೋಮರಾಯ ಜನ್ನು ನಿರೂಪಿಸಿ, ಸಿ.ಎನ್.ಬಿಲ್ಲವ ವಂದಿಸಿದರು.

    Click here

    Click here

    Click here

    Click Here

    Call us

    Call us

    Suresh Batwadi inaugurated science exhibition at Shiruru govt school (2)

    Suresh Batwadi
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    eleven − eight =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.