Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಂಡ್ಸೆ: ಜಿ.ಪಂ.ಸದಸ್ಯ ಬಾಬು ಶೆಟ್ಟರಿಗೆ ಸನ್ಮಾನ, ಕಛೇರಿ ಉದ್ಘಾಟನೆ
    ಊರ್ಮನೆ ಸಮಾಚಾರ

    ವಂಡ್ಸೆ: ಜಿ.ಪಂ.ಸದಸ್ಯ ಬಾಬು ಶೆಟ್ಟರಿಗೆ ಸನ್ಮಾನ, ಕಛೇರಿ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ: ಚುನಾವಣೆಯಿಂದ ಚುನಾವಣೆಗೆ ಬದಲಾವಣೆಗಳನ್ನು ಕಾಣುತ್ತಿದ್ದೇವೆ. ಈ ಸನ್ನಿವೇಶದಲ್ಲಿ ಕಾರ್ಯಕರ್ತರುಗಳು ಕೂಡಾ ಚಿಂತಿಸಬೇಕಾದ ಅವಶ್ಯಕತೆ ಇದೆ. ಈ ಬಾರಿಯ ಚುನಾವಣೆಯಲ್ಲಿ ಎಲ್ಲರ ಸಾಂಘಿಕ ಪರಿಶ್ರಮದಿಂದ ಜಯ ಲಭಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷವನ್ನು ಈ ಭಾಗದಲ್ಲಿ ಇನ್ನಷ್ಟು ಬಲಿಷ್ಠಗೊಳಿಸುವಲ್ಲಿ ಮುತುವರ್ಜಿ ವಹಿಸಿಕೊಂಡು ಮುಂದಿನ ವಿಧಾನ ಸಭಾ ಚುನಾವಣೆಗೆ ಸಿದ್ಧರಾಗಬೇಕಾಗಿದೆ ಎಂದರು.

    Click Here

    Call us

    Click Here

    ಅವರು ವಂಡ್ಸೆಯ ವಿ.ಕೆ.ಶಿವರಾಮ ಶೆಟ್ಟಿ ಅವರ ಕಟ್ಟಡದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರ ವಂಡ್ಸೆ ಕಚೇರಿ ಉದ್ಘಾಟನೆ ಕಾರ್ಯಕ್ರಮದ ವಂಡ್ಸೆ ಭಾಗದ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಪ್ರತೀ ಶುಕ್ರವಾರ ಬೆಳಿಗ್ಗೆ10 ಗಂಟೆಯಿಂದ 12 ಗಂಟೆಯ ತನಕ ವಂಡ್ಸೆಯ ಕಛೇರಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತೇನೆ. ಈ ಭಾಗದಲ್ಲಿ ಜಿ.ಪಂ.ನಿಂದ ಆಗಬೇಕಾದ ಕೆಲಸಗಳಿಗೆ ಸ್ಪಂದಿಸುತ್ತೇನೆ. ಜನರು ನಮ್ಮನ್ನು ಹುಡುಕಿಕೊಂಡು ಬರಬಾರದು, ಜನರಿದ್ದಲ್ಲಿಗೆ ನಾವು ಬರುತ್ತೇವೆ ಎಂದರು.

    ಜಿ.ಪಂ.ಸದಸ್ಯರ ವಂಡ್ಸೆ ಕಛೇರಿಯನ್ನು ಉದ್ಘಾಟಿಸಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ಎಂ.ಸುಕುಮಾರ್ ಶೆಟ್ಟಿ ಮಾತನಾಡಿ, ವಂಡ್ಸೆ ವಿಶಿಷ್ಠವಾದ ಜಿ.ಪಂ.ಕ್ಷೇತ್ರ. ಇಲ್ಲಿ ಇನ್ನೂ ಹೆಚ್ಚಿನ ಅಂತರದಲ್ಲಿ ನಾವು ಗೆಲುವು ಸಾಧಿಸಬೇಕಿತ್ತು. ಮರವಂತೆ ಹಾಗೂ ವಂಡ್ಸೆ ತಾಲೂಕು ಪಂಚಾಯತ್‌ನಲ್ಲಿ ಗೆಲುವಿನ ನಿರೀಕ್ಷೆ ಹೊಂದಿದ್ದೇವು. ಆದರೆ ಅದು ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಈ ಕ್ಷೇತ್ರವನ್ನು ಗೆಲ್ಲುತ್ತೇವೆ ಎನ್ನುವ ಭರವಸೆ ಇದೆ. ಬೈಂದೂರು ಕ್ಷೇತ್ರದಲ್ಲಿ ಅದ್ಬುತ ಗೆಲುವು ಸಾಧಿಸಿದ್ದೇವೆ. ಈ ಸಂದರ್ಭದಲ್ಲಿ ಮತಗಳ ಅಂತರದಲ್ಲಿ ಕಡಿಮೆಯಾದ ಬಗ್ಗೆ ಕಾರ್ಯಕರ್ತ, ಸ್ಥಳೀಯ ಮುಖಂಡರುಗಳು ಅವಲೋಕನ ಮಾಡಿ ಸರಿಪಡಿಸುವ ಅಗತ್ಯತೆ ಇದೆ ಎಂದರು.

    ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಪಡುವರಿ, ಬಿಜೆಪಿ ಮುಖಂಡರಾದ ಡಾ.ಅತುಲ್ ಕುಮಾರ್ ಶೆಟ್ಟಿ, ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ರಾಮಚಂದ್ರ ಮಂಜರು ಮಾರಣಕಟ್ಟೆ, ಬಿಜೆಪಿ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ಮುತ್ತಾಲಿ, ವಂಡ್ಸೆ ತಾ.ಪಂ.ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಚಂದ್ರಯ್ಯ ಆಚಾರ್ ಕಳಿ, ನಾಡ ಕ್ಷೇತ್ರದ ತಾ.ಪಂ.ಸದಸ್ಯ ಪ್ರವೀಣ ಕುಮಾರ್ ಶೆಟ್ಟಿ ಕಡ್ಕೆ, ಬೈಂದೂರು ಕ್ಷೇತ್ರ ಯುವ ಮೋರ್ಚಾದ ಅಧ್ಯಕ್ಷ ರಾಘವೆಂದ್ರ ನೆಂಪು, ಬೈಂದೂರು ಬ್ಲಾಕ್ ಮಾಜಿ ಅಧ್ಯಕ್ಷ ಪ್ರಣಯ ಕುಮಾರ್ ಶೆಟ್ಟಿ, ವಂಡ್ಸೆ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ವಿ.ಕೆ.ಶಿವರಾಮ ಶೆಟ್ಟಿ ಹಾಗೂ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು. ರವಿರಾಜ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಪ್ರವೀಣ ವಂದಿಸಿದರು.

    Babu Shetty Thaggarse
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    seven + 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.