Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಣ, ಚಿನ್ನಕ್ಕಾಗಿ ಸಂಬಂಧಿಯ ಕೊಲೆ. ಆರೋಪಿ ನರಸಿಂಹ ನಾಯ್ಕ್ ಬಂಧನ
    Recent post

    ಹಣ, ಚಿನ್ನಕ್ಕಾಗಿ ಸಂಬಂಧಿಯ ಕೊಲೆ. ಆರೋಪಿ ನರಸಿಂಹ ನಾಯ್ಕ್ ಬಂಧನ

    Updated:22/03/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ

    Click Here

    Call us

    Click Here

    ಕುಂದಾಪುರ: ತಾಲೂಕಿನ ನಾವುಂದ ಗ್ರಾಮದ ಪಡುವಾಯಿನ ಮನೆ ಎಂಬಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದ ಮಾಧವ ಪೂಜಾರಿ ಎಂಬುವವರನ್ನು ಕಡಿದು ಕೊಲೆಗೈದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಧವ ಪೂಜಾರಿ ಅವರ ಸಂಬಂಧಿ ನರಸಿಂಹ ನಾಯ್ಕ್ (45) ಕೊಲೆಗೈದು ಈಗ ಪೊಲೀಸರ ಅತಿಥಿಯಾಗಿದ್ದಾನೆ.

    ಘಟನೆಯ ವಿವರ:
    ನಾವುಂದ ಪಡುವಾಯಿನ ಮನೆ ಎಂಬಲ್ಲಿ ಕಳೆದ ೩ ವರ್ಷಗಳಿಂದ ಒಬ್ಬಂಟಿಯಾಗಿ ನೆಲೆಸಿದ್ದ ಮಾಧವ ಪೂಜಾರಿ ಎಂಬುವವರು ಮೈಸೂರಿನಿಂದ ಮಗಳು ಬರುವ ವೇಳೆಗೆ ಮನೆಯಲ್ಲಿಯೇ ಕೊಲೆಯಾಗಿ ಬಿದ್ದಿದ್ದರು. ಈ ಆಘಾತಕಾರಿ ಪ್ರಕರಣದಿಂದಾಗಿ ಜನತೆಗೆ ನಡುಕ ಹುಟ್ಟಿಸಿದ್ದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಅಧಿಕಾರಿಗಳು ಮೂರು ದಿನದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಏನಾಗಿತ್ತು?
    ಅಂದುರಾತ್ರಿ ೯:೩೦ರ ಸುಮಾರಿಗೆ ಮಾಧವ ಪೂಜಾರಿ ಮನೆಗೆ ತೆರಳಿದ್ದ ಆರೋಪಿ ಹಣಕ್ಕಾಗಿ ಅವರ ಹಲ್ಲೆ ನಡೆಸಿದ್ದಾರೆ. ಹೊಡೆತದಿಂದ ನೆಲಕ್ಕುರುಳಿತ ಅವರನ್ನು ಕತ್ತಿಯಿಂದ ಕಡಿದು ಬಳಿಕ ಹಣ, ಒಡವೆಗಾಗಿ ಮನೆಯನ್ನು ತಡಕಾಡಿದ್ದಾನೆ. ಕೊನೆಗೆ ಏನೂ ಸಿಗದಿದ್ದಾಗ, ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಉಂಗುರ ಹಾಗೂ ಒಂದಿಷ್ಟು ಚಿಲ್ಲರೆ ಹಣವನ್ನು ತೆಗೆದುಕೊಂಡು, ಮೊಬೈಲ್, ವಾಚ್‌ಗಳನ್ನು ಮನೆಯ ಹತ್ತಿರವೇ ಹೂತಿಟ್ಟು ಬಳಿಕ ಎದುರಿನ ಬಾಗಿಲಿಗೆ ಬೀಗ ಜಡಿದಿದ್ದಾನೆ. ಬೀಗದ ಕೈಯನ್ನು ಒಳಗಿನಿಂದ ತಂದಿದ್ದ ಪರ್ಸ್ ಒಳಗೆ ಹಾಕಿ ಬಾವಿಗೆ ಎಸೆದು, ತನ್ನ ರಕ್ತಸಿಕ್ತ ಅಂಗಿಯನ್ನು ಅಲ್ಲಿಯೇ ನೀರಿನಲ್ಲಿ ತೊಳೆದುಕೊಂಡು ಮನೆಗೆ ತೆರಳಿದ್ದಾನೆ. ಪ್ರಕರಣದ ಹಾದಿ ತಪ್ಪಿಸುವ ಸಲುವಾಗಿ ಎಣ್ಣೆಯನ್ನು ಚಲ್ಲಿ ಹೋಗಿದ್ದ. ಕುಂದಾಪ್ರ ಡಾಟ್ ಕಾಂ ಸುದ್ದಿ

    ಪ್ರಕರಣ ಬೆಳಕಿಗೆ ಬಂದದ್ದು ಹೇಗೆ?
    ಮೂಲತಃ ಸಿರಸಿಯವನಾದ ನರಸಿಂಹ ನಾವುಂದದ ಹೆಂಡತಿ ಮನೆಯಲ್ಲಿಯೇ ವಾಸವಿದ್ದು, ಕೆಲಸಕಾರ್ಯವಿಲ್ಲದೇ ತಿರುಗಾಡುತ್ತಿದ್ದ. ಹಾಗಾಗಿ ಒಬ್ಬಂಟಿಯಾಗಿದ್ದ ಮಾಧವ ಪೂಜಾರಿ ಅವರಿಂದ ಹಣ ಎಗರಾಯಿಸಬಹುದು ಎಂಬ ಆಲೋಚನೆಯಿಂದ ರಾತ್ರಿ ಅವರ ಮನೆಗೆ ತೆರಳಿ ಈ ಕುಕೃತ್ಯ ಎಸಗಿದ್ದಾನೆ, ಮಾಧವ ಪೂಜಾರಿ ಅವರ ಮೇಲೆ ಹಲ್ಲೆಮಾಡಲು ಹೋದಾಗ ನರಸಿಂಹನ ಮುಖದ ಹಾಗೂ ಮೈಮೇಲೆ ಉಗುರಿನಿಂದ ಪರಚಿದ್ದ ಗಾಯವಾಗಿತ್ತು. ಇದನ್ನು ಗಮನಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ನರಸಿಂಹನ ಹೇಳಿಗೆಗೂ ಹಾಗೂ ಅವರ ಮನೆಯವರ ಹೇಳಿಕೆಗೂ ವ್ಯತ್ಯಾಸ ಕಂಡುಬಂದಿತ್ತು. ಅದಲೇ ಸಂಶಯ ಬಲಗೊಂಡದ್ದರಿಂದ ತೀವ್ರ ವಿಚಾರಣೆಗೊಳಪಡಿಸಿದಾಗ ಆರೋಪಿ ಸತ್ಯ ಒಪ್ಪಿಕೊಂಡಿದ್ದ. ಕುಂದಾಪ್ರ ಡಾಟ್ ಕಾಂ ಸುದ್ದಿ

    Click here

    Click here

    Click here

    Click Here

    Call us

    Call us

    ಅನೈತಿಕ ಸಂಬಂಧವಿತ್ತೆ?
    ಈ ನಡುವೆ ನಾವುಂದದಲ್ಲಿ ಒಬ್ಬಂಟಿಯಾಗಿದ್ದ ಮೃತ ಮಾಧವ ಪೂಜಾರಿಗೆ ಹೆಂಗಸೋರ್ವಳೊಂದಿಗೆ ಅನೈತಿಕ ಸಂಬಂಧವಿತ್ತೆ ಎಂಬ ಸಂಶಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಇದನ್ನು ತಿಳಿದಿದ್ದ ನರಸಿಂಹ ಅದೇ ವಿಚಾರದಲ್ಲಿ ಮಾಧವ ಪೂಜಾರಿ ಅವರೊಂದಿಗೆ ಜಗಳಕ್ಕಿಳಿದಿದ್ದ ಎಂಬ ಮಾತುಗಳೂ ಕೇಳಿಬರುತ್ತಿದೆ. ಘಟನೆ ನಡೆದಾಗ ಶವ ದೊರೆತ ಸ್ಥಿತಿಯೂ ಇದನ್ನು ಪುಷ್ಠಿಕರಿಸುವಂತಿತ್ತು. ಆದರೆ ಈ ವಿಚಾರ ಅಧಿಕೃತವಾಗಿ ಎಲ್ಲಿಯೂ ಬಹಿರಂಗವಾಗಿಲ್ಲ.

    ಉಡುಪಿ ಪೋಲಿಸ್ ವರಿಷ್ಟಾಧಿಕಾರಿ ಅಣ್ಣಾಮಲೈ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ಡಿವೈಎಸ್ಪಿ ಮಂಜುನಾಥ ಶೆಟ್ಟಿ ನೇತೃತ್ವದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ್, ಬೈಂದೂರುಠಾಣಾಧಿಕಾರಿ ಸಂತೋಷಕಾಯ್ಕಿಣಿ, ಗಂಗೊಳ್ಳಿ ಠಾಣಾಧಿಕಾರಿ ಸುಬ್ಬಣ್ಣ ಅವರನ್ನೊಳಗೊಂಡ ತಂಡವನ್ನು ಕ್ಷಿಪ್ರಗತಿಯಲ್ಲಿ ತನಿಕೆ ನಡೆಸಿ ಆರೋಪಿಯನ್ನು ಬಂಧಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

    ಇದನ್ನೂ ಓದಿ: ನಾವುಂದ: ಮಾರಕಾಯುಧಗಳಿಂದ ಹೊಡೆದು ವ್ಯಕ್ತಿಯ ಕೊಲೆ – http://kundapraa.com/?p=12283

    Navunda Madav Poojary murder case Aquest arrested (4)Navunda Madav Poojary murder case Aquest arrested (1) Navunda Madav Poojary murder case Aquest arrested (2) Navunda Madav Poojary murder case Aquest arrested (3)

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    ten − one =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.