Kundapra.com ಕುಂದಾಪ್ರ ಡಾಟ್ ಕಾಂ

ಕ್ರಿಕೆಟ್ ಪಂದ್ಯಾಟ: ಭಂಡಾರ್ಕಾರ್ಸ್ ಕಾಲೇಜು ಸಿಬ್ಬಂದಿ ಸಂಘಕ್ಕೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಕ್ಕೊಳಪಟ್ಟ ಮೂಡಬಿದ್ರೆಯ ಮಹಾವೀರ ಕಾಲೇಜು ಸಿಬ್ಬಂದಿ ಸಂಘ ಆಯೋಜಿಸಿದ ಅಂತರ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಟದಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಸಿಬ್ಬಂದಿಗಳ ತಂಡ ಜಯ ಗಳಿಸಿದೆ. ಅಂತಿಮ ಪಂದ್ಯದಲ್ಲಿ ಎದುರಾಳಿ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜು ಸಿಬ್ಬಂದಿಗಳ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಭಂಡಾರ್ಕಾರ್ಸ್ ಕಾಲೇಜಿನ ಉಪನ್ಯಾಸಕ ಶರಣ್ ಅವರು ಉತ್ತಮ ಬ್ಯಾಟ್ಸಮನ್ ಮತ್ತು ಅನಂತ ಪೈ ಉತ್ತಮ ಬೌಲರ್ ಪ್ರಶಸ್ತಿಯನ್ನು ಪಡೆದುಕೊಂಡರು.

Exit mobile version