Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊರಗರ ಅಭಿವೃದ್ಧಿಗೆ ಕ್ರಮ : ನಿಗಮ ಅಧ್ಯಕ್ಷ ಬಸವರಾಜು ಭರವಸೆ
    ಊರ್ಮನೆ ಸಮಾಚಾರ

    ಕೊರಗರ ಅಭಿವೃದ್ಧಿಗೆ ಕ್ರಮ : ನಿಗಮ ಅಧ್ಯಕ್ಷ ಬಸವರಾಜು ಭರವಸೆ

    Updated:07/04/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಮುಂದಿನ ವರ್ಷ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮಕ್ಕೆ ರೂ ೧೨೦ ಕೋಟಿ ಅನುದಾನದ ಪ್ರಸ್ತಾವನೆ ಸಲ್ಲಿಸಿದ್ದು, ಕನಿಷ್ಠ ರೂ 100 ಕೋಟಿ ದೊರೆಯುವ ಭರವಸೆ ಇದೆ. ಅದರಲ್ಲಿ ಕೊರಗರ ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾದ ಮೊತ್ತದಿಂದ ಅವರ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ಸಿ. ಬಸವರಾಜು ಹೇಳಿದರು.

    Click Here

    Call us

    Click Here

    ಅವರು ಮರವಂತೆಯ ಕೊರಗರ ಕಾಲನಿಗೆ ಭೇಟಿ ನಿಡಿದ್ದ ಸಂದರ್ಭದಲ್ಲಿ ಮಾತನಾಡಿದರು. ಕೊರಗರು ಶತಮಾನದಿಂದ ನೆಲಸಿದ್ದ ನಿವೇಶನವನ್ನು ಅದರ ಭೂಮಾಲೀಕರಿಂದ ಖರೀದಿಸಿ, ಕೊರಗ ಕುಟುಂಬಗಳಿಗೆ ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಂಡ ಅವರನ್ನು ಮತ್ತು ಉಡುಪಿ ಜಿಲ್ಲಾ ವ್ಯವಸ್ಥಾಪಕ ದೇವರಾಜ್ ಅವರನ್ನು ಕೊರಗ ಸಮುದಾಯದವರು ಸಾಂಪ್ರದಾಯಿಕವಾಗಿ ಸ್ವಾಗತಿಸಿ, ಸನ್ಮಾನಿಸಿದರು.

    ತಾಲೂಕು ಕೊರಗ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಗಣೇಶ ವಿ. ಸ್ವಾಗತಿಸಿದರು. ಶೇಖರ ಮರವಂತೆ ನಿವೇಶನದ ಹಕ್ಕು ಪಡೆಯಲು 1998ರಿಂದ ನಡೆಸಿದ್ದ ಪ್ರಯತ್ನಗಳನ್ನು ವಿವರಿಸಿ, ನಿವೇಶನ ಖರೀದಿಗೆ ನಿಗಮ ನೀಡಿದ್ದ ನೆರವಿನಲ್ಲಿ ಅರ್ಧಾಂಶ ಸಾಲವಾಗಿದ್ದು ಇದನ್ನು ಮನ್ನಾ ಮಾಡಬೇಕೆಂದು ಮನವಿ ಸಲ್ಲಿಸಿದರು. ಉತ್ತರಿಸಿದ ಬಸವರಾಜು ರಾಜ್ಯ ಸರಕಾರ ಪರಿಶಿಷ್ಟ ಪಂಗಡದವರಿಗೆ ನೀಡಿದ್ದ ೯೬ ಕೋಟಿ ಮೊತ್ತದ ಸಾಲವನ್ನು ಮನ್ನಾ ಮಾಡಿರುವುದರಿಂದ ಇನ್ನೊಮ್ಮೆ ಸಾಲ ಮನ್ನಾ ಅಸಾಧ್ಯ. ಬದಲಾಗಿ ಮರವಂತೆಯ ಕೊರಗರಿಗೆ ಅನ್ಯ ನೆರವು ಒದಗಿಸುವ ಭರವಸೆಯಿತ್ತರು. ಗಣೇಶ ಬಾರ್ಕೂರು ವಂದಿಸಿದರು.

    ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಬಾಲಾಜಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ, ಉಪಾಧ್ಯಕ್ಷ ಗಣೇಶ ಪೂಜಾರಿ, ಸದಸ್ಯೆ ಸುಗುಣಾ, ಮಾಜಿ ಅಧ್ಯಕ್ಷ ಎಸ್. ಜನಾರ್ದನ, ಮಾಜಿ ಸದಸ್ಯೆ ಗೌರಿ, ಕಾರ್ಯದರ್ಶಿ ಹರಿಶ್ಚಂದ್ರ ಆಚಾರ್, ಲಕ್ಷ್ಮಣ ಬೈಂದೂರು, ಇತರರು ಉಪಸ್ಥಿತರಿದ್ದರು./

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    4 × 4 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.