Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊಸಾಡು: ಬಾಲವೃಂದ ಧ್ವನಿಮುದ್ರಣ ಸಂಪನ್ನ
    ಊರ್ಮನೆ ಸಮಾಚಾರ

    ಹೊಸಾಡು: ಬಾಲವೃಂದ ಧ್ವನಿಮುದ್ರಣ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಆಕಾಶವಾಣಿಯಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳು ಇಂದಿಗೂ ಜನಪ್ರಿಯವಾಗಿವೆ. ಗ್ರಾಮೀಣ ಮಕ್ಕಳ ಸಾಂಸ್ಕೃತಿಕ ಮತ್ತು ಕಲಾ ಪ್ರತಿಭೆಯನ್ನು ಆಕಾಶವಾಣಿಯ ಮೂಲಕ ಕೇಳುಗರಿಗೆ ತಲುಪಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹಕಾರ ಆವಶ್ಯಕ ಎಂದು ಮಂಗಳೂರು ಆಕಾಶವಾಣಿ ಬಾಲವೃಂದ ವಿಭಾಗದ ನಿರ್ದೇಶಕಿ ಶುಭದಾ ಅವರು ಹೇಳಿದರು.

    Click Here

    Call us

    Click Here

    ಮಂಗಳೂರು ಆಕಾಶವಾಣಿ ಸಹಯೋಗದೊಂದಿಗೆ ಹೊಸಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಜರಗಿದ ಸಮುದಾಯದತ್ತ ಶಾಲೆ ಮತ್ತು ಆಕಾಶವಾಣಿಯಲ್ಲಿ ಪ್ರತೀ ರವಿವಾರ ಪ್ರಸಾರವಾಗುವ ಚಿಣ್ಣರ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮ ಬಾಲವೃಂದ ಧ್ವನಿಮುದ್ರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸುಕುಮಾರ ದೇವಾಡಿಗ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಮಕ್ಕಳ ಪ್ರತಿಭೆಯನ್ನು ಬೆಳಕಿಗೆ ತಂದು ಪ್ರಸಾರಗೊಳಿಸುವ ಆಕಾಶವಾಣಿಯ ಕಾರ್ಯ ಪ್ರಶಂಸನೀಯ ಎಂದರು.

    ಮುಖ್ಯ ಅತಿಥಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಮಲತಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮೂಹ ಸಂಪನ್ಮೂಲ ವ್ಯಕ್ತಿ ನಾರಾಯಣ ದೇವಾಡಿಗ, ಸುರೇಂದ್ರ, ಶಿಕ್ಷಕರ ಸಂಘದ ಸದಸ್ಯೆ ಗಿರಿಜಾ, ಸಮುದಾಯದತ್ತ ಶಾಲಾ ಕಾರ್ಯಕ್ರಮದ ಮೇಲ್ವಿಚಾರಕ ಕೃಷ್ಣಮೂರ್ತಿ, ಹಕ್ಲಾಡಿ ಶಾಲಾ ಶಿಕ್ಷಕ ಸಂಜೀವ, ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ, ಶಿಕ್ಷಕಿ ಉಷಾ ಕಾರಂತ ಮೊದಲಾದವರು ಉಪಸ್ಥಿತರಿದ್ದರು.

    ಮುಖ್ಯಶಿಕ್ಷಕಿ ನಿರ್ಮಲಾದೇವಿ ಅವರು ಸ್ವಾಗತಿಸಿದರು. ಬಾರಂದಾಡಿ ಶಾಲಾ ಸಹಶಿಕ್ಷಕ ಕೇಶವ ಶ್ಯಾನುಭೋಗ್ ಎಲ್ಲಂಗಳ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಜಯರಾಮ ಪಟಗಾರ ಅವರು ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಸಂತೋಷ ಖಾರ್ವಿ ಅವರು ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಬಾರಂದಾಡಿ, ಹಕ್ಲಾಡಿ, ಹೊಸಾಡು ಮತ್ತು ಕಟ್ಟಿನಮಕ್ಕಿ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳ ಬಾಲವೃಂದ ಧ್ವನಿಮುದ್ರಣ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    sixteen − 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.