ಯುವ ಪತ್ರಕರ್ತ ಹೈಮದ್ ಹುಸೇನ್ ಹೃದಯಾಘಾತದಿಂದ ನಿಧನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮಂಗಳೂರು: ಯುವ ಪತ್ರಕರ್ತ, ಪ್ರಜಾವಾಣಿಯ ಮಂಗಳೂರು ವರದಿಗಾರ ಹೈಮದ್ ಹುಸೇನ್(28) ಇಂದು ಮಧ್ಯಾಹ್ನ ಹೃದಯಾಘಾತದಿಂದ ಚಾರ್ಮಾಡಿಯಲ್ಲಿ ನಿಧನ ಹೊಂದಿದ್ದಾರೆ.

Call us

Click Here

ಯುಗಾದಿಯ ಪ್ರಯುಕ್ತ ಕಛೇರಿಗೆ ರಜೆ ಇದ್ದ ಕಾರಣ ಸಹ್ಯಾದ್ರಿ ಸಂಚಯ ಸಮಿತಿ ಆಯೋಜಿಸಿದ್ದ ಅಧ್ಯಯನ ಪ್ರವಾಸಕ್ಕೆಂದು ತೆರಳಿದ್ದ ಅವರಿಗೆ ಹೃದಯಾಘಾತವಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹೈಮದ್ ಮೂಲತಃ ರಾಯಚೂರಿನವರಾಗಿದ್ದು, ಮೈಸೂರು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದು ಮಂಗಳೂರು ಪ್ರಜಾವಾಣಿಯ ವರದಿಗಾರರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಇನ್ನು ಕೆಲವೇ ದಿನಗಳಲ್ಲಿ ಮದುವೆಯಾಗುವವರಿದ್ದರಲ್ಲದೇ, ಹಾವೇರಿ ಕಛೇರಿಗೆ ವರ್ಗವಾಗುವವರಿದ್ದರು.

ಹೈಮದ್ ಅವರ ನಿಧನಕ್ಕೆ ‘ಕುಂದಾಪ್ರ ಡಾಟ್ ಕಾಂ’ ಬಳಗ ಸಂತಾಪ ಸೂಚಿಸುತ್ತದೆ.

Leave a Reply