ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿಗೆ ಸಮೀಪದ ಪ್ರಸಿದ್ಧ ಕೂಸಳ್ಳಿ ಫಾಲ್ಸ್ಗೆ ಸಾಗುವ ಮಾರ್ಗದಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಠಿಯಿಂದ ಎಚ್ಚರಿಕೆ ಫಲಕ ಅಳವಡಿಸಲಾಯಿತು. ಉಡುಪಿ ಜಿಲ್ಲಾ ಪೊಲೀಸ್ ಹಾಗೂ 24×7 ಆಪತ್ಬಾಂಧವ ಅಂಬ್ಯುಲೆನ್ಸ್ ಗಂಗೊಳ್ಳಿ ಜಂಟಿಯಾಗಿ ಫಲಕ ಅಳವಡಿಸಿದೆ.
ಈ ಸಂದರ್ಭದಲ್ಲಿ ಬೈಂದೂರು ಪೊಲೀಸ್ ಠಾಣಾಧಿಕಾರಿ ಸಂತೋಷ್ ಕಾಯ್ಕಿಣಿ, ಪೇದೆ ಗುರುಪ್ರದಾಸ್, 24×7 ಆಪತ್ಬಾಂದವದ ನಿರ್ವಾಹಕ ಮೊಹಮ್ಮದ್ ಇಬ್ರಾಹಿಂ ಗಂಗೊಳ್ಳಿ ಮೊದಲಾದವರು ಉಪಸ್ಥಿತರಿದ್ದರು.
ಕೂಸಳ್ಳಿಯಲ್ಲಿ 2 ದಿನದ ಹಿಂದಷ್ಟೇ ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಈವರೆಗೆ ಮೂವರು ಮೃತಪಟ್ಟಿದ್ದರು. ಇದನ್ನರಿತ ಸಮಾಜ ಸೇವಕ ಇಬ್ರಾಹಿಂ ಫಲಕ ಅಳವಡಿಸಲು ಇಲಾಖೆಯೊಂದಿಗೆ ಮುಂದಾಗಿದ್ದಾರೆ.