ಕುಂದಾಪ್ರ ಡಾಟ್ ಕಾಂ ಸುದ್ದಿ.
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕ್ಯಾಂಪಸ್ನಲ್ಲಿ ನಿತೀಶ್ ಪಿ ಬೈಂದೂರು ಇವರ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನವನ್ನು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಕೆ.ಭೈರಪ್ಪ ಅವರು ಉದ್ಘಾಟಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ತುಳು ಚಿತ್ರನಟ ದೇವಿದಾಸ್ ಕಾಪಿಕಾಡ್, ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಾರುಕೂರು ಉದಯ, ಛಾಯಾಗ್ರಾಹಕ ನಿತೀಶ್ ಪಿ ಬೈಂದೂರು ಉಪಸ್ಥಿತರಿದ್ದರು. ಛಾಯಾಚಿತ್ರ ಪ್ರದರ್ಶನವು ದಿನಾಂಕ ೨೨ರವರೆಗೂ ನಡೆಯಲಿರುವುದು