Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಸಾಪ ನಿಕಟಪೂರ್ವಾಧ್ಯಕ್ಷ, ಅಪ್ರತಿಮ ಸಂಘಟಕ ಪುಂಡಲೀಕ ಹಾಲಂಬಿ ಇನ್ನಿಲ್ಲ
    ಊರ್ಮನೆ ಸಮಾಚಾರ

    ಕಸಾಪ ನಿಕಟಪೂರ್ವಾಧ್ಯಕ್ಷ, ಅಪ್ರತಿಮ ಸಂಘಟಕ ಪುಂಡಲೀಕ ಹಾಲಂಬಿ ಇನ್ನಿಲ್ಲ

    Updated:24/04/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ. ಎ.24: ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವಾಧ್ಯಕ್ಷ ಪುಂಡಲೀಕ ಹಾಲಂಬಿ (65) ಇಂದು ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ  ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾಗಿದ್ದಾರೆ. ಮೃತರು ಮಡದಿ ಹಾಗೂ ಈರ್ವ ಗಂಡು ಮಕ್ಕಳನ್ನು ಅಗಲಿದ್ದಾರೆ. ಹಾಲಂಬಿ ಅವರ ನಿಧನಕ್ಕೆ ನಾಡಿನ ಗಣ್ಯರು, ಸಾಹಿತಿಗಳು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿಸಿದ್ದಾರೆ.

    Click Here

    Call us

    Click Here

    ಸರಳ ವ್ಯಕ್ತಿತ್ವ, ಸ್ಪುಟವಾದ ಮಾತುಗಾರಿಕೆ, ಸ್ನೇಹಪರತೆ, ಸೇವಾ ಮನೋಭಾವ, ಕ್ರೀಯಾಶೀಲತೆ, ಅಭಿವೃದ್ಧಿ ಪರ ಚಿಂತನೆ, ಸಂಘಟನಾ ಕೌಶಲ್ಯ, ಹೋರಾಟದ ಹಾದಿ ಇವೇ ಮುಂತಾದ ಗುಣಗಳ ಮೂಲಕ ಕನ್ನಡ ನಾಡಿನಲ್ಲಿ ಚಿರಸ್ಥಾಯಿಯಾಗಿ ಉಳಿದವರು ಪುಂಡಲೀಕ ಹಾಲಂಬಿಯವರು.

    ಹಾಲಂಬಿ ನಡೆದ ಹಾದಿ
    ಕನ್ನಡ ಸಾಹಿತ್ಯ ಪರಿಚಾರಿಕೆಯ ಮೂಲಕ ಗುರುತಿಸಿಕೊಂಡಿದ್ದ ಹಾಲಂಬಿಯವರು ಸಂಘಟನೆ, ಆಡಳಿತ ನಿರ್ವಹಣೆಯ ಮೂಲಕ ತನ್ನದೇ ಆದ ಛಾಪು ಮೂಡಿಸಿದವರು. ಕಸಾಪ ನಿಟಕಪೂರ್ವ ಅಧ್ಯಕ್ಷರಾಗಿ, ಹತ್ತಾರು ವರ್ಷಗಳ ಕಾಲ ಕಸಾಪದ ವಿವಿಧ ಹುದ್ದೆಗಳನ್ನಲಂಕರಿಸಿ ನಾಡಿನಾದ್ಯಂತ ಕನ್ನಡ ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಂಡವರು ಹಾಲಂಬಿಯವರು. ಸ್ವತಃ ಸಾಹಿತಿಯಲ್ಲದಿದ್ದರೂ ನಾಡು-ನುಡಿಯ ಬಗೆಗೆ ಅಪಾರ ಅನುಭವವನ್ನು ಹೊಂದಿದವರು. ಕನ್ನಡ ನಾಡು ನುಡಿ ಮತ್ತು ಕನ್ನಡಿಗರ ಧಕ್ಕೆಯಾದರೆ ಹೋರಾಟಕ್ಕೆ ಸಿದ್ಧ ಎನ್ನುವ ಹಾಲಂಬಿಯವರ ದಿಟ್ಟ ನಿಲುವು ಮತ್ತು ಸಂಘಟನಾ ಚತುರತೆ ಅವರನ್ನು ಪರಿಷತ್ತನ ಅತ್ಯುನ್ನತ ಹುದ್ದೆಗೇರಿಸಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಕುಂದಾಪುರ ತಾಲೂಕಿನ ಹಾಲಾಡಿ ಹಾಲಂಬಿಯವರ ಹುಟ್ಟೂರು. ತಂದೆ ಚಂದ್ರಶೇಖರ ಹಾಲಂಬಿ. ತಾಯಿ ವಾಸಂತಿ. ತನ್ನ ಪ್ರಾಥಮಿಕ ಶಿಕ್ಷಣವನ್ನು ಕೋಡೇರಿ, ಅರಕಲುಗೋಡು ಹಾಗೂ ಖಂಬದಕೋಣೆಯಲ್ಲಿ, 9ನೇ ತರಗತಿಯನ್ನು ಕುಂದಾಪುರದ ಬೋರ್ಡ ಹೈಸ್ಕೂಲ್ನಲ್ಲಿ ಹಾಗೂ ಎಸ್.ಎಸ್.ಎಲ್.ಸಿ ಯನ್ನು ಖಂಬದಕೋಣೆ ಪ್ರೌಡಶಾಲೆಯಲ್ಲಿ ಪೂರೈಸಿದರು. ಮುಂದೆ ಬೆಂಗಳೂರಿನಲ್ಲಿ ಶಿಕ್ಷಣ ಮುಂದುವರಿಸಿ ಸೆಂಟ್ರಲ್ ಕಾಲೇಜಿನಲ್ಲಿ ಎಂ.ಎ ಪದವಿ ಪಡೆದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಬೆಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಂಗ ವಿಭಾಗದಲ್ಲಿ ಸಮನ್ವಯಕಾರರಾಗಿ ಅವರು ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಎರಡು ಅವಧಿಲ್ಲಿ ಕಸಾಪದ ಕಾರ್ಯದರ್ಶಿ ಮತ್ತು ಕೋಶಾಧ್ಯಕ್ಷರಾಗಿ, 24ನೇ ಅಧ್ಯಕ್ಷರಾಗಿ ಪರಿಷತ್ತಿನ ಅಭಿವೃದ್ಧಿಗಾಗಿ ದುಡಿದಿದವರು. ಹೋಟೆಲ್ ಉದ್ದಿಮೆದಾರರ ಸಹಕಾರಿ ಬ್ಯಾಂಕನ ಬೆನ್ನೆಲುಬಾಗಿರುವ ಹಾಲಂಬಿ ಬ್ಯಾಂಕಿನ ಬೆಳವಣಿಗೆಯಲ್ಲಿ ಕ್ರೀಯಾಶೀಲ ಪಾತ್ರವಹಿಸಿದ್ದರು. ಮಾತ್ರವಲ್ಲದೆ ಇನ್ನೂ ಅನೇಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    Click here

    Click here

    Click here

    Call us

    Call us

    Pundalika halambi (2)

    KASAPA Pundalika Halambi
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    four + 14 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.