ಉಪ್ಪಿನಕುದ್ರು: ಪತ್ರಕರ್ತ ಸಂತೋಷ್ ಕೋಣಿ ಅವರಿಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ ವಾರ್ಷಿಕೋತ್ಸವ ಹಾಗೂ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪತ್ರಿಕೋದ್ಯಮ ಹಾಗೂ ಸಾಮಾಜಿಕ ರಂಗದ ಸೇವೆಯನ್ನು ಗುರುತಿಸಿ ಕುಂದಾಪುರ ಸುದ್ದಿಮನೆ ವಾರಪತ್ರಿಕೆ ಸಂಪಾದಕ ಸಂತೋಷ ಕೋಣಿ ಅವರನ್ನು ಸನ್ಮಾನಿಸಲಾಯಿತು.

Call us

Click Here

ಈ ಸಂದರ್ಭದಲ್ಲಿ ಕರ್ನಾಟಕ ಜನಪದ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಚಿನ್ನಪ್ಪ ಗೌಡ, ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಪುರಸ್ಕೃತ ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕ ಶ್ರೀಧರ್ ಹಂದೆ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಸಿನಿಯರ್ ಮ್ಯಾನೆಜರ್ ಬಾಬುರಾಯ್ ಶೆಣೈ, ಕುಂದಾಪುರದ ಚಾರ್ಟೆಟ್ ಅಕೌಂಟೆಂಟ್ ಪಿ. ಪ್ರಭಾಕರ ಮಯ್ಯ, ಹಿರಿಯ ಪತ್ರಕರ್ತ ಎಸ್. ಜನಾರ್ಧನ, ಉದ್ಯಮಿ ನಾರಾಯಣ ಮೇಲಾಡ್, ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

Leave a Reply