Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿಂದೂಗಳು ಜಾಗೃತರಾದರೇ ಮಾತ್ರ ಸವಾಲುಗಳಿಗೆ ಉತ್ತರ ನಿಡಲು ಸಾಧ್ಯ: ಚೈತ್ರಾ ಕುಂದಾಪುರ
    ಊರ್ಮನೆ ಸಮಾಚಾರ

    ಹಿಂದೂಗಳು ಜಾಗೃತರಾದರೇ ಮಾತ್ರ ಸವಾಲುಗಳಿಗೆ ಉತ್ತರ ನಿಡಲು ಸಾಧ್ಯ: ಚೈತ್ರಾ ಕುಂದಾಪುರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ಭಾರತೀಯ ಸಂಸ್ಕೃತಿ, ಪರಂಪರೆಗೆ ವಿಶ್ವದಲ್ಲೇ ವಿಶಿಷ್ಟ ಸ್ಥಾನಮಾನವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ನಾವು ಮೈಮರೆತಿರುವುದರಿಂದ ಬಲಿಷ್ಠ ಹಿಂದು ಸಮಾಜದ ಮೇಲೆ ವ್ಯವಸ್ಥಿತ ರೀತಿಯಲ್ಲಿ ಷಡ್ಯಂತ್ರಗಳು ನಡೆಯುತ್ತಿದೆ. ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಮತಾಂತರ ಮೊದಲಾದವುಗಳು ನಿರಂತರವಾಗಿ ನಮ್ಮ ಸಮಾಜದ ಬುಡಕ್ಕೆ ಕೈಹಾಕಿದೆ. ಸಮಸ್ತ ಹಿಂದುಗಳು ಜಾಗೃತರಾದರೆ ಮಾತ್ರ ಇಂತಹ ಸವಾಲುಗಳಿಗೆ ಉತ್ತರ ನೀಡಲು ಸಾಧ್ಯವಿದೆ. ಹಿಂದು ಸಮಾಜದ ಮೇಲೆ ಆಕ್ರಮಣಗಳು ನಡೆದಾಗ ಸಮಸ್ತ ಹಿಂದು ಸಮಾಜ ಜಾತಿ ಮತ ಬೇಧವಿಲ್ಲದೆ ಎಚ್ಚೆತ್ತುಕೊಳ್ಳಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನ ಕೇಂದ್ರ ಕಾರ್ಯಕಾರಿಣಿ ಚೈತ್ರಾ ಕುಂದಾಪುರ ಹೇಳಿದರು.

    Click Here

    Call us

    Click Here

    ಅವರು ಪರಶುರಾಮ ಘಟಕ ಮಲ್ಯರಬೆಟ್ಟು ಗಂಗೊಳ್ಳಿ ಇವರ ಆಶ್ರಯದಲ್ಲಿ ಮಲ್ಯರಬೆಟ್ಟು ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಭಾರತ ಮಾತಾ ಪೂಜನ ಮತ್ತು ರಾಷ್ಟ್ರ ಚಿಂತನಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.

    ಭಾರತ ಮಾತೆಯ ಸೇವೆಗೆ, ದೇಶದ ರಕ್ಷಣೆಗೆ ಸಿದ್ಧರಾಗಿರುವ ಯುವ ಜನರು ಪ್ರೋತ್ಸಾಹಿಸುವ ಕೆಲಸ ನಡೆಯಬೇಕು. ಇತ್ತೀಚಿನ ವರದಿಗಳ ಪ್ರಕಾರ ಕಾಸರಗೋಡು ಮತ್ತು ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಸುಮಾರು ೩೨ ಸಾವಿರ ಮಂದಿ ಮಹಿಳೆಯರು ನಾಪತ್ತೆಯಾಗಿದ್ದು, ಈ ಮಹಿಳೆಯರನ್ನು ಯುವತಿಯರನ್ನು ಲವ್ ಜಿಹಾದ್ ಮತಾಂತರದ ಬಲೆಗೆ ಬೀಳಿಸಿರುವ ಶಂಕೆ ವ್ಯಕ್ತವಾಗುತ್ತಿದೆ. ಹೀಗಾಗಿ ಲವ್ ಜಿಹಾದ್, ಮತಾಂತರ ಮೊದಲಾದವುಗಳನ್ನು ತಡೆಯಲು ಮಹಿಳೆಯರು ಸನ್ನದ್ಧರಾಗಿರಬೇಕು. ನಾವು ನಮ್ಮತನವನ್ನು ಕಳೆದುಕೊಂಡಿರುವುದರಿಂದ ಮತ್ತು ತಾಯಂದಿರು ಹೆಣ್ಣುಮಕ್ಕಳಿಗೆ ಹೇಗೆ ಬದುಕಬೇಕು ಎಂಬುದನ್ನು ಹೇಳಿಕೊಡದೇ ಇರುವುದರಿಂದ ಇಂದು ಹೆಣ್ಣುಮಕ್ಕಳು ಕಂಡ ಕಂಡವರ ಪಾಲಾಗುತ್ತಿದ್ದಾರೆ. ನಮ್ಮತನವನ್ನು ನಾವು ಒಪ್ಪಿಕೊಂಡಾಗ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಅವರು ಹೇಳಿದರು.

    ಇತ್ತೀಚಿನ ದಿನಗಳಲ್ಲಿ ಲ್ಯಾಂಡ್ ಜಿಹಾದ್ ಎಂಬ ಭೂತ ಕಾಣಿಸಿಕೊಂಡಿದ್ದು, ಲ್ಯಾಂಡ್ ಜಿಹಾದ್ ಮೂಲಕ ಕರಾವಳಿ ಜಿಲ್ಲೆಗಳನ್ನು ಇನ್ನೊಂದು ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ನಮ್ಮಲ್ಲಿನ ಭೂಮಿಯನ್ನು ೧೦ ಪಟ್ಟು ಹೆಚ್ಚು ಬೆಲೆ ನೀಡಿ ಖರೀದಿಸುವ ಜಾವ ಕಾರ್ಯನಿರ್ವಹಿಸುತ್ತಿದ್ದು, ಇದರ ಹಿಂದಿನ ಉದ್ದೇಶವನ್ನು ಹಿಂದುಗಳು ಅರ್ಥ ಮಾಡಿಕೊಳ್ಳಬೇಕಿದೆ. ಹಿಂದುಗಳು ಬದುಕಿನ ಅನಿವಾರ್ಯತೆಗಾಗಿ, ಹಣದ ಆಸೆಗೆ ಬಲಿ ಬಿದ್ದು ಪವಿತ್ರವಾದ ಈ ಭೂಮಿಯನ್ನು ಬೇರೆಯವರಿಗೆ ಮಾರಾಟ ಮಾಡುತ್ತಿದ್ದಾರೆ. ಇದೇ ರೀತಿಯಾದರೆ ಮುಂದೊಂದು ದಿನ ಕರಾವಳಿ ಜಿಲ್ಲೆಗಳು ಮತ್ತೊಂದು ಪಾಕಿಸ್ತಾನವಾಗುಬ ಭೀತಿ ಸೃಷ್ಟಿಯಾಗಿದೆ ಎಂದರು.

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿಂಜಾವೇ ಜಿಲ್ಲಾ ಕಾರ್ಯಕಾರಣಿ ಸದಸ್ಯ ಧನಂಜಯ್ ಕೋಟೇಶ್ವರ ಹಿಂದು ಸಮಾಜದ ಮೇಲೆ ಅನೇಕ ರೀತಿಯ ದಾಳಿಗಳು ಆಕ್ರಮಣಗಳು ನಡೆದಿದ್ದರೂ ಹಿಂದು ಧರ್ಮವು ಎಲ್ಲಾ ಧರ್ಮಗಳನ್ನು ಮೀರಿ ಭದ್ರವಾಗಿ ನೆಲೆ ನಿಂತಿದೆ ಎಂದರು.

    Click here

    Click here

    Click here

    Click Here

    Call us

    Call us

    ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಜಿ.ಟಿ.ಮಂಜುನಾಥ, ಮತ್ಸ್ಯೋದ್ಯಮಿ ಜಿ.ಪುರುಷೋತ್ತಮ ಆರ್ಕಾಟಿ, ಗಂಗೊಳ್ಳಿ ಶ್ರೀ ಗ್ರಾಮ ಜಟ್ಟಿಗೇಶ್ವರ ದೇವಸ್ಥಾನದ ಅಧ್ಯಕ್ಷ ಮಡಿಕಲ್ ಜನಾರ್ದನ ಖಾರ್ವಿ, ಗಂಗೊಳ್ಳಿ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷ ಸತೀಶ ಜಿ., ಮಹೇಶ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ನಿತಿನ್ ಖಾರ್ವಿ ಸ್ವಾಗತಿಸಿದರು. ಸುಂದರ ಜಿ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಭಾರತ ಅಂದು-ಇಂದು ಜೊತೆಯಲ್ಲಿ ಸನಾತನ ಸಂಸ್ಕೃತಿಯ ಅಳಿವು-ಉಳಿವು ಕುರಿತು ಚಿಂತನ ಮಂಥನ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    14 − ten =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.