Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೇರೂರು: ತ್ಯಾಜ್ಯ ತಿಂದ ದನಗಳ ಸಾವು, ಹಲವು ಅಸ್ವಸ್ಥ
    ಊರ್ಮನೆ ಸಮಾಚಾರ

    ಹೇರೂರು: ತ್ಯಾಜ್ಯ ತಿಂದ ದನಗಳ ಸಾವು, ಹಲವು ಅಸ್ವಸ್ಥ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಸಮೀಪದ ಹೇರೂರು ಗ್ರಾಮದ ಮಡ್ಲಗೇರಿ ಎಂಬಲ್ಲಿನ ತುಂಬಿಕೆರೆ ಬಳಿ ಎಸೆಯಲಾಗುತ್ತಿರುವ ಕೋಳಿ ಮತ್ತು ಪ್ರಾಣಿಗಳ ತ್ಯಾಜ್ಯ ತಿಂದ ಏಳು ದನಗಳು ಅಸುನೀಗಿದ್ದು, ಇನ್ನೂ ಆರು ಸಾವಿನ ಅಂಚಿನಲ್ಲಿವೆ. ಹಲವು ಅಸ್ವಸ್ಥವಾಗಿದ್ದು, ಅವುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸತ್ತ ಮತ್ತು ಅಸ್ವಸ್ಥ ದನಗಳು ಮಡ್ಲಗೇರಿಯ ಬಾಬು ಆಚಾರಿ, ಹಿತ್ಲುಮನೆ ಗಿರಿಜಾ ಪೂಜಾರಿ, ಸುಬ್ರಾಯ ಆಚಾರಿ ಮತ್ತು ಸಾಧು ಪೂಜಾರಿ ಎಂಬವರಿಗೆ ಸೇರಿವೆ.

    Click Here

    Call us

    Click Here

    ತುಂಬಿಕೆರೆ ಅರಣ್ಯ ಇಲಾಖೆಗೆ ಸೇರಿದ ಗೇರುತೋಟದ ನಡುವೆ ಇದೆ. ನಾವುಂದ ಹೇರೂರು ಮಾರ್ಗದಿಂದ ಇಲ್ಲಿಗೆ ಹೋಗಲು ಮಣ್ಣಿನ ರಸ್ತೆ ಇದೆ. ಯಾವುದೋ ಮಂಸಾಹಾರಿ ಹೋಟೆಲ್‌ಗಳ ಕೋಳಿ ಮತ್ತು ಪ್ರಾಣಿಗಳ ತ್ಯಾಜ್ಯವನ್ನು ಚೀಲಕ್ಕೆ ತುಂಬಿಸಿ, ವಾಹನದಲ್ಲಿ ತಂದು ಇಲ್ಲಿ ಎಸೆಯಲಾಗುತ್ತಿದೆ. ಪರಿಸರದ ದನಗಳು ಇಲ್ಲಿಗೆ ಮೇಯಲು ಬರುತ್ತಿದ್ದು, ಹಸಿ ಒಣಗಿ ಮೇವು ಇಲ್ಲವಾದುದರಿಂದ ಅವು ಈ ತ್ಯಾಜ್ಯ ತಿನ್ನುತ್ತಿವೆ. ಇದು ದನಗಳು ಸಾಯಲು ಮತ್ತು ಅಸ್ವಸ್ಥವಾಗಲು ಕಾರಣ ಎಂದು ಜನರು ಹೇಳುತ್ತಿದ್ದಾರೆ. ಪಶು ವೈದ್ಯರು ಇದನ್ನು ಅಲ್ಲಗಳೆಯುತ್ತಿಲ್ಲ.

    ಹೇರೂರು ಗ್ರಾಮ ಪಂಚಾಯತ್ ನೀಡಿದ ಮಾಹಿತಿ ಅನುಸರಿಸಿ ಕಿರಿಮಂಜೇಶ್ವರದ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ನಾಗರಾಜ ಮರವಂತೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರಲ್ಲದೆ ಅಸ್ವಸ್ಥ ದನಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಮಂಗಳೂರಿನ ಪ್ರಾದೇಶಕ ಸಂಶೋಧನಾ ಕೇಂದ್ರದ ಡಾ. ವಸಂತ ಶೆಟ್ಟಿ ಆಗಮಿಸಿ ತ್ಯಾಜ್ಯದ ಮಾದರಿ ಮತ್ತು ಅಸ್ವಸ್ಥ ದನದ ರಕ್ತ ಸಂಗ್ರಹಿಸಿದ್ದಾರೆ. ಪರಿಶೀಲನೆಯ ಬಳಿಕ ದನಗಳ ಸಾವಿನ ನೈಜ ಕಾರಣ ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.

    ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜುಪೂಜಾರಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ಬೈಂದೂರು ವಿಶೇಷ ತಹಸಿಲ್ದಾರ್ ಕಿರಣ್ ಗೌರಯ್ಯ, ಗ್ರಾಮ ಕರಣಿಕರಾದ ಮಂಜು, ಲಕ್ಷ್ಮೀ ತ್ಯಾಜ್ಯ ಎಸೆಯುತ್ತಿರುವ ಸ್ಥಳ ಮತ್ತು ಸಂತ್ರಸ್ತ ಕುಟುಂಬಗಳ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾಕು, ಸದಸ್ಯರಾದ ಸತೀಶಕುಮಾರ ಶೆಟ್ಟಿ, ಶ್ರೀನಿವಾಸ ಪೂಜಾರಿ, ವೆಂಕಟು, ಅಭಿವೃದ್ಧಿ ಅಧಿಕಾರಿ ಗಿರಿಜಾ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. ಈ ದುರ‍್ಘಟನೆ ಕೆಲವು ವರ್ಷಗಳ ಹಿಂದೆ ಬೈಂದೂರು ಸಮೀಪದ ಹೇನಬೇರಿನಲ್ಲಿ ತ್ಯಾಜ್ಯ ಸೇವಿಸಿ ನಡೆದ ದನಗಳ ಮಾರಣ ಹೋಮವನ್ನು ನೆನಪಿಸುತ್ತಿದೆ. ಇಲ್ಲಿ ತ್ಯಾಜ್ಯ ಎಸೆಯುವ ಪ್ರವೃತ್ತಿಗೆ ಕಡಿವಾಣ ಬೀಳದಿದ್ದರೆ ಅಲ್ಲಿನ ಸರಣಿ ಜಾನುವಾರು ಸಾವು ಇಲ್ಲಿ ಮರುಕಳಿಸುವ ಸಾಧ್ಯತೆ ಇದೆ. ದನ ಕಳೆದುಕೊಂಡ ಜನರು ಸೂಕ್ತ ಪರಿಹಾರಕ್ಕೆ ಆಗ್ರಹಿಸುತ್ತಿದ್ದಾರೆ. ಜನರು ದನಗಳನ್ನು ಇಲ್ಲಿ ಮೇಯಲು ಬಿಡಬಾರದು ಮತ್ತು ದನಗಳು ಅಸ್ವಸ್ಥವಾದ ತಕ್ಷಣ ತಮ್ಮ ಗಮನಕ್ಕೆ ತರಬೇಕು ಎಂದು ಡಾ. ನಾಗರಾಜ್ ವಿನಂತಿಸಿದ್ದಾರೆ.

    Maravanthe A 27-2 Maravanthe A 27-3

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    4 + 9 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.