Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಕಾರದಲ್ಲಿ ತಾಯಿ ಮನಸ್ಸಿನ ಬದಲಾಗಿ ಕ್ರೌರ್ಯ ತುಂಬಿಕೊಂಡಿದೆ: ಮೇ ದಿನಾಚರಣೆಯಲ್ಲಿ ವರಲಕ್ಷ್ಮೀ
    ಕುಂದಾಪ್ರದ್ ಸುದ್ಧಿ

    ಸರಕಾರದಲ್ಲಿ ತಾಯಿ ಮನಸ್ಸಿನ ಬದಲಾಗಿ ಕ್ರೌರ್ಯ ತುಂಬಿಕೊಂಡಿದೆ: ಮೇ ದಿನಾಚರಣೆಯಲ್ಲಿ ವರಲಕ್ಷ್ಮೀ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸಮಾನತೆ ನೀಡಬೇಕೆಂಬ ಉದ್ದೇಶದಿಂದ ನಮ್ಮ ಹಿರಿಯರು ಸ್ವಾತಂತ್ರ್ಯವನ್ನು ತಂದುಕೊಟ್ಟರು. ಆದರೆ ನಾವು ಇಂದಿಗೂ ಸಂಘಗಳನ್ನು ಕಟ್ಟಿಕೊಂಡು ಕನಿಷ್ಠ ಕೂಲಿಗಾಗಿ ಬೇಡಿಕೆಯಿಡುವ ದುಸ್ಥಿತಿಯಲ್ಲಿದ್ದೇವೆ ಎಂದು ಸಿಐಟಿಯು ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ವರಲಕ್ಷ್ಮೀ ವಿಷಾದ ವ್ಯಕ್ತಪಡಿಸಿದರು.

    Click Here

    Call us

    Click Here

    ಅವರು ಶಾಸ್ತ್ರೀ ವೃತ್ತದ ಬಳಿ ಸಿಐಟಿಯು ಕುಂದಾಪುರ ತಾಲೂಕು ಸಮಿತಿ ಮೇ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  ಇಂದು ಸರಕಾರ ಹಾಗೂ ಸ್ವಾತಂತ್ರ್ಯದ ವ್ಯಾಖ್ಯಾನ ಕೂಡ ಬದಲಾಗುತ್ತಿದೆ. ಭಾರತದಲ್ಲಿ ಗುತ್ತಿಗೆ ಪದ್ದತಿಯಡಿ ನಿಯಮಗಳನ್ನು ಗಾಳಿಗೆ ತೂರಿ ಕೆಲಸಗಾರರನ್ನು ಜಾಗತಿಕ ಒತ್ತೆಯಾಳಾಗಿಸುವ ಹುನ್ನಾರ ನಿರಂತರವಾಗಿ ಸಾಗಿದೆ. ಬೆಲೆಏರಿಕೆಯನ್ನು ಮಾಡುವ ಸರಕಾರಗಳು ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸುವ ಬಗ್ಗೆ ಒಮ್ಮೆಯೂ ಚಿಂತಿಸಿಲ್ಲ. ಪ್ರಜೆಗಳ ಕಷ್ಟ, ನಷ್ಟಗಳಿಗೆ ಸ್ಪಂದಿಸಬೇಕಾದ ಸರಕಾರಕ್ಕೆ ತಾಯಿ ಮನಸ್ಸು ದೂರವಾಗಿ ಕ್ರೌರ್ಯ ತುಂಬಿಕೊಂಡಿದೆ ಎಂದರು.

    ಸಿಐಟಿಯು ಕುಂದಾಪುರ ತಾಲೂಕು ಸಮಿತಿ ಅಧ್ಯಕ್ಷ ಎಚ್. ನರಸಿಂಹ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಹೆಂಚು ಕಾರ್ಮಿಕರ ಸಂಘದ ಅಧ್ಯಕ್ಷ ವಿ. ನರಸಿಂಹ, ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಯು. ದಾಸ್ ಭಂಡಾರಿ, ಬಿಡಿ ವರ್ಕರ್ಸ್ ಯುನಿಯನ್ ಅಧ್ಯಕ್ಷ ಮಹಾಬಲ ವಡೇರಹೊಬಳಿ, ಕಾರ್ಯದರ್ಶಿ ಬಲ್ಕಸ್, ಆಟೋ ರಿಕ್ಷಾ ಮತ್ತು ವಾಹನ ಚಾಲಕರ ಸಂಘದ ಅಧ್ಯಕ್ಷ ಲಕ್ಷ್ಮಣ ಬರೆಕಟ್ಟು, ಅಂಗನವಾಡಿ ನೌಕರರ ಸಂಘದ ತಾಲೂಕು ಸಮಿತಿ ಅಧ್ಯಕ್ಷೆ ರತಿ ಶೆಟ್ಟಿ, ಅಕ್ಷರದಾಸೋಹ ನೌಕರರ ಸಂಘದ ಅಧ್ಯಕ್ಷೆ ಲತಾ, ಕಾರ್ಯದರ್ಶಿ ಸುಶೀಲಾ ನಾಡ, ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಶೀಲಾವತಿ, ಕೆಲಸಗಾರರ ಸಂಘದ ಅಧ್ಯಕ್ಷೆ ಜ್ಯೋತಿ, ನಾಗರತ್ನ ನಾಡ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕು ಸಮಿತಿ ಅಧ್ಯಕ್ಷ ರಾಜೀವ ಪಡುಕೋಣೆ ಮೊದಲಾದವರು ಉಪಸ್ಥಿತರಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಸಿಐಟಿಯು ಅಧ್ಯಕ್ಷ ನರಸಿಂಹ ಎಚ್. ಸ್ವಾಗತಿಸಿ, ಕಾರ್ಯದರ್ಶಿ ವೆಂಕಟೇಶ ಕೋಣಿ ವಂದಿಸಿದರು. ಉಪಾಧ್ಯಕ್ಷ ಸುರೇಶ್ ಕಲ್ಲಾಗರ್ ನಿರೂಪಿಸಿದರು. ಬಹಿರಂಗ ಸಭೆಗೂ ಮೊದಲು ಕಾರ್ಮಿಕರು, ರೈತರು, ಕೃಷಿ ಕೂಲಿಕಾರರಿಂದ ಬೃಹತ್ ಮೆರವಣಿಗೆ ನಡೆಯಿತು.

    May Day in Kundapura CITU (2) May Day in Kundapura CITU (3) May Day in Kundapura CITU (4)

    Click here

    Click here

    Click here

    Call us

    Call us

    Like this:

    Like Loading...

    Related

    CITU
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d