Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯರುಕೋಣೆ ಶ್ರೀ ಮರ್ಲುಚಿಕ್ಕು ಮತ್ತು ಸಪರಿವಾರ ದೈವಸ್ಥಾನ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
    ಊರ್ಮನೆ ಸಮಾಚಾರ

    ಯರುಕೋಣೆ ಶ್ರೀ ಮರ್ಲುಚಿಕ್ಕು ಮತ್ತು ಸಪರಿವಾರ ದೈವಸ್ಥಾನ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಧಾರ್ಮಿಕತೆಯ ಭಾವನೆಗಳು ಹೆಚ್ಚುತ್ತಿರುವುದರಿಂದ ಧಾರ್ಮಿಕ ಕೇಂದ್ರಗಳು ಅಭಿವೃದ್ದಿ ಪಥದತ್ತ ಸಾಗುತ್ತಿದೆ. ನಮ್ಮಲ್ಲಿರುವ ದೈವೀಕ ಭಾವನೆಗಳನ್ನು ಉದ್ದೀಪನೆಗೊಳಿಸುವ ಮೂಲಕ ಶ್ರದ್ದಾ, ಭಕ್ತಿಯಿಂದ ಆರಾಧಿಸಿದರೆ ಭಗವಂತನ ಸಾಕ್ಷಾತ್ಕಾರ ಸಾಧ್ಯ ಎಂದು ವಿಹಿಂಪ ದಕ್ಷಿಣ ಕನ್ನಡ ಪ್ರಾಂತ ಮಠಮಂದಿರಗಳ ಸಂಪರ್ಕ ಪ್ರಮುಖ್ ಹೆಚ್. ಪ್ರೇಮಾನಂದ ಶೆಟ್ಟಿ ಹೇಳಿದರು.

    Click Here

    Call us

    Click Here

    ಹೇರೂರು ಗ್ರಾಮದ ಪಡುಬೆಟ್ಟು ಯರುಕೋಣೆ ಶ್ರೀ ಮರ್ಲುಚಿಕ್ಕು ಮತ್ತು ಸಪರಿವಾರ ದೈವಸ್ಥಾನದ ನೂತನ ಗುಡಿಸಮರ್ಪಣೆ ಮತ್ತು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಶುಕ್ರವಾರ ನಡೆದ ಧಾರ್ಮಿಕ ಸಭೆಯಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು.

    ಭಕ್ತಿಯಿಂದ ದೇವರ ಪ್ರೀತಿಗಳಿಸಲು ಸಾಧ್ಯವಿದೆ. ಭಕ್ತಿ, ಶ್ರದ್ಧೆ ಹಾಗೂ ಪ್ರಾಮಾಣಿಕತೆಗೆ ದೇವರು ಒಲಿಯುತ್ತಾನೆ. ನಮ್ಮಲ್ಲಿ ಕರುಣೆ, ಮಿತೃತ್ವ ಭಾವನೆ ಇರಬೇಕು. ಯಾರೊಬ್ಬರನ್ನು ದ್ವೇಷಿಸದೆ ಎಲ್ಲರನ್ನೂ ಪ್ರೀತಿಯಿಂದ ನಾವೆಲ್ಲರೂ ಒಂದೇ ಎಂಬ ಭಾವದಿಂದ ನೋಡಬೇಕು. ನಮ್ಮಲ್ಲಿನ ಕೀಳರಿಮೆಯನ್ನು ಹೋಗಲಾಡಿಸಿಕೊಂಡು ಸಮಾಜದಲ್ಲಿ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಬೆಳೆಯಬೇಕು ಎಂದ ಅವರು ಜಾತಿ, ಧರ್ಮದ ವಿಷಬೀಜ ಬಿತ್ತಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದು ವಿಷಾದನೀಯ ಎಂದರು.

    ಇಂದು ಸಮಾಜದಲ್ಲಿ ಹಿರಿಯರು ವಿಕೃತ ವಿಚಾರಗಳು ಹೆಚ್ಚು ಪ್ರಕಟಮಾಡುತ್ತಿರುವ ಹಿನ್ನೆಲೆಯಲ್ಲಿ ಬಾಲ್ಯದಲ್ಲಿಯೇ ಮಕ್ಕಳ ಮಗ್ಧ ಮನಸುಗಳು ಇಂತಹ ಕೃತ್ಯಗಳಿಂದ ಆಕರ್ಷಿತರಾಗಿ ಮುಂದೆ ತಪ್ಪುದಾರಿಯಲ್ಲಿ ಸಾಗುವುದರ ಮೂಲಕ ರಾಷ್ಟ್ರವಿರೋಧಿಯಾಗಿ ಬಿಂಬಿಸಲ್ಪಡುತ್ತಾನೆ. ಮತಾಂತರಗಳು ಹೆಚ್ಚಾಗಿ ಆಂತರಿಕ ಜಗಳ ಹೆಚ್ಚುತ್ತಿರುವ ಬಗ್ಗೆಯೂ ಕೂಡಾ ಪ್ರಾರಂಭದಲ್ಲಿ ಜಾಗೃತೆವಹಿಸಬೇಕು ಎಂದು ಸಲಹೆ ನೀಡಿದರು.

    ದೈವಸ್ಥಾನದ ಸಮಿತಿಯ ಗೌರವಾಧ್ಯಕ್ಷ ಶಿವರಾಮ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಶುಭಹಾರೈಸಿದರು. ಅರ್ಚಕ ಹಾಗೂ ಪುರೋಹಿತ ಎಂ. ಕೃಷ್ಣ ಭಟ್, ದೈವಸ್ಥಾನದ ಅಧ್ಯಕ್ಷ ವೈ. ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಾಧ್ಯಕ್ಷ ಎ. ಭಾಸ್ಕರ್ ಶೆಟ್ಟಿ ಸ್ವಾಗತಿಸಿ, ಎಂ. ವಿಶ್ವನಾಥ ಶೆಟ್ಟಿ ನಿರೂಪಿಸಿದರು. ನಂತರ ಶಿವಮೊಗ್ಗ ಯಕ್ಷಕೂಟ ಮಹಿಳಾ ಸದಸ್ಯೆಯರಿಂದ ಯಕ್ಷಗಾನ ಬಯಲಾಟ ನಡೆಯಿತು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026
    Leave A Reply Cancel Reply

    one × 2 =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.