Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ನಾಡದೋಣಿ ಭವನ ಲೋಕಾರ್ಪಣೆ
    ಊರ್ಮನೆ ಸಮಾಚಾರ

    ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ನಾಡದೋಣಿ ಭವನ ಲೋಕಾರ್ಪಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸಮಾಜದ ಅತಿ ನಂಬಿಕಸ್ಥರು ಎಂದೆನಿಸಿಕೊಂಡಿರುವ ಮೀನುಗಾರಿಕೆ ನಡೆಸುತ್ತಿರುವ ಸಮುದಾಯವು ಇತರ ಸಮುದಾಯಗಳಿಗಿಂತ ಆರ್ಥಿಕವಾಗಿ ಹಿಂದುಳಿದಿದ್ದು, ಸರಕಾರ ಸವಲತ್ತುಗಳನ್ನು ಈ ಸಮುದಾಯಗಳಿಗೆ ಒದಗಿಸುವ ಸಲುವಾಗಿ ಈ ಸಮುದಾಯವನ್ನು ಪಂಗಡಕ್ಕೆ ಸೇರಿಸುವ ಬಗ್ಗೆ ಸರಕಾರಕ್ಕೆ ಶಿಪಾರಸ್ಸು ಮಾಡಲಾಗಿದೆ ಎಂದು ರಾಜ್ಯ ಬಂದರು ಮತ್ತು ಜವಳಿ ಖಾತೆ ಸಚಿವ ಬಾಬೂರಾವ್ ಚಿಂಚನಸೂರ್ ಹೇಳಿದರು.

    Click Here

    Call us

    Click Here

    ಉಪ್ಪುಂದ-ಅಂಬಾಗಿಲು ಗ್ರಾಮ ಪಂಚಾಯತ್ ಮೈದಾನದಲ್ಲಿ ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ನಾಡದೋಣಿ ಭವನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೀನುಗಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಲ್ಲಿ ಕಳೆದ 40 ವರ್ಷಗಳಿಂದ ಸತತ ಹೋರಾಟ ಮಾಡುತ್ತಿದ್ದೇನೆ. ಮೀನುಗಾರಿಕೆಯನ್ನು ನೆಚ್ಚಿಕೊಂಡಿರುವ ಖಾರ್ವಿ, ಗಂಗಾಪುತ್ರರು ಮೊದಲಾದ ಸಮಾಜದ ಕೆಳಮಟ್ಟದಲ್ಲಿರುವ ಜನಾಂಗದವರನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕೆನ್ನುವ ನೆಲೆಯಲ್ಲಿ ಈಗಾಗಲೇ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಿದರು.

    ಯುವಜನ ಸೇವೆ, ಕ್ರೀಡೆ ಮತ್ತು ಮೀನುಗಾರಿಕಾ ರಾಜ್ಯ ಸಚಿವ ಅಭಯ್‌ಚಂದ್ರ ಜೈನ್ ನಾಡದೋಣಿ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ ಕಳೆದ ಮೂರು ವರ್ಷದಿಂದ ಮೀನುಗಾರಿಕಾ ರಸ್ತೆ ದುರಸ್ತಿಗಾಗಿ ನಬಾರ್ಡ್ ಮೂಲಕ ಪ್ರತಿವರ್ಷ ಕರಾವಳಿ ಭಾಗದ ಅಭಿವೃದ್ಧಿಗೆ ತಲಾ ಒಂದು ಕೋಟಿ ಅನುದಾನ ಹಾಗೂ ಪ್ರತಿವರ್ಷ ನೂರು ಮೀನುಗಾರಿಕಾ ಮನೆಗಳನ್ನು ಒದಗಿಸಲಾಗುತ್ತಿದೆ. ಇಂದು ನಾಡದೋಣಿ ಮೀನುಗಾರರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಮುಖ್ಯಮಂತ್ರಿ ಬಳಿ ತೆರಳಿ ಅವರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಚಿದರು.

    ಉಪ್ಪುಂದ ಗ್ರಾಪಂ ಅಧ್ಯಕ್ಷೆ ದುರ್ಗಮ್ಮ ಸ್ಥಳೀಯ ಅಂಗನವಾಡಿಗೆ ಹೊಸದಾಗಿ ಅಳವಡಿಸಲಾದ ನೆಲಹಾಸು ಉದ್ಘಾಟಿಸಿದರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ವಲಯ ನಾಡದೋಣಿ ಮೀನುಗಾರರ ಸಂಘದ ಎಲ್ಲಾ ಮಾಜಿ ಅಧ್ಯಕ್ಷರನ್ನು ಗೌರವಿಸಲಾಯಿತು. ಸಂಘದ ಗೌರವಾಧ್ಯಕ್ಷ ಎಸ್. ಮದನ್‌ಕುಮಾರ್ ಶುಭಾಸಂಶನೆಗೈದರು. ಜಿಪಂ ಸದಸ್ಯ ಸುರೇಶ ಬಟವಾಡಿ, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಕೇಶವ ಕುಂದರ್, ತಾಪಂ ಸದಸ್ಯೆ ಪ್ರಮೀಳಾ ದೇವಾಡಿಗ, ಸಂಘದ ಅಧ್ಯಕ್ಷ ಕುಮಾರ್ ಖಾರ್ವಿ ಬಿಹೆಚ್‌ಕೆ, ಗೌರವಾಧ್ಯಕ್ಷ ಪ್ರಭಾಕರ ಖಾರ್ವಿ, ಇಲಾಖಾಧಿಕಾರಿಗಳಾದ ಟಿ. ಎಸ್. ರಾಥೋಡ್, ಜಂಬಾವಳಿ, ನಾಗರಾಜ್, ಪಾರ್ಶ್ವನಾಥ್ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಗೌರವಾಧ್ಯಕ್ಷ ನವೀನ್‌ಚಂದ್ರ ಉಪ್ಪುಂದ ತಮ್ಮ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಶೇಖರ್ ಖಾರ್ವಿ ಸ್ವಾಗತಿಸಿ, ಕೋಶಾಧಿಕಾರಿ ಅಣ್ಣಯ್ಯ ಖಾರ್ವಿ ವಂದಿಸಿದರು. ಪ್ರಸನ್ನಕುಮಾರ್ ನಿರೂಪಿಸಿದರು.

    Uppunda Nadadoni Minugarara Bhavana (1) Uppunda Nadadoni Minugarara Bhavana (3)

    Click here

    Click here

    Click here

    Click Here

    Call us

    Call us

    Byndoor Valaya Nadadoni Munugarara Sanga
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    17 + five =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.