Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಿಳಿಯಾರು: ಹೊಳೆಯ ಪಕ್ಕದ ಹಡಿಲು ಭೂಮಿಗೆ ಅಕ್ರಮವಾಗಿ ಮಣ್ಣು ತುಂಬಿಸುತ್ತಿದ್ದ ಲಾರಿ ತಡೆದು ಪ್ರತಿಭಟನೆ
    ಊರ್ಮನೆ ಸಮಾಚಾರ

    ಗಿಳಿಯಾರು: ಹೊಳೆಯ ಪಕ್ಕದ ಹಡಿಲು ಭೂಮಿಗೆ ಅಕ್ರಮವಾಗಿ ಮಣ್ಣು ತುಂಬಿಸುತ್ತಿದ್ದ ಲಾರಿ ತಡೆದು ಪ್ರತಿಭಟನೆ

    Updated:08/05/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕೋಟ ಪಂಚಾಯಿತಿ ವ್ಯಾಪ್ತಿಯ ಗಿಳಿಯಾರು ಪರಿಸರದಲ್ಲಿರುವ ಹರಿಯುವ ನೀರಿನ ಸೂಲಡ್ಪು ಹೊಳೆಯ ಪಕ್ಕದಲ್ಲಿ ಸುಮಾರು 8 ಎಕರೆ ಹಡಿಲು ಭೂಮಿಯಲ್ಲಿ ಕಳೆದ ಕೆಲವು ದಿನಗಳಿಂದ ವಾಣಿಜ್ಯ ಉದ್ದೇಶಕ್ಕೆ ಮಣ್ಣು ತುಂಬಿಸಿ ಎತ್ತರಿಸುವ ನಡೆಸುತ್ತಿದ್ದು, ಇದರಿಂದ ನೆರೆ ಹಾವಳಿ ಮತ್ತಿತರ ಪ್ರಾಕೃತಿಕ ಸಮಸ್ಯೆಗಳು ಮುಂದೆ ಎದುರಾಗಲಿದೆ ಎಂದು ಗಿಳಿಯಾರಿನ ಸ್ಥಳೀಯರು ಹಡೋಲಿಗೆ ಮಣ್ಣು ತುಂಬಿಸುತ್ತಿದ್ದ ಲಾರಿಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರು.

    Click Here

    Call us

    Click Here

    ಕಳೆದ ಎರಡು ವಾರಗಳಿಂದ ಗಿಳಿಯಾರಿನ ಸೂಲಡ್ಪು ಹೊಳೆಯ ಹಡಿಲಿ ಭೂಮಿಯಲ್ಲಿ ನಿರಂತರವಾಗಿ ಮಣ್ಣು ತುಂಬಿಸುವ ಕಾರ‍್ಯ ನಡೆಯುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿ ಕೋಟ ಪಂಚಾಯಿತಿ ಮಾಹಿತಿ ನೀಡಿದ್ದರು. ಆ ಸಂದರ್ಭ ಕೋಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಭಾಷ್ ಖಾರ್ವಿ, ಜಿಲ್ಲಾ ಪಂಚಾಯಿತಿ ಸದಸ್ಯ ರಾಘವೇಂದ್ರ ಕಾಂಚನ್ ಅವರು ಸ್ಥಳೀಯರೊಂದಿಗೆ ಆಗಮಿಸಿ ಕಾಮಗಾರಿಯ ಬಗ್ಗೆ ಮಾಹಿತಿ ಕೇಳಿದ್ದರು. ಸ್ಥಳ ಖರೀದಿಸಿ ಮಣ್ಣು ತುಂಬಿಸುತ್ತಿರುವ ಮಾಲಕರು ಹೊಳೆಯ ನೀರು ಹೋಗಲು ಸಮಸ್ಯೆಯಾಗದಂತೆ, ನೆರೆ ಹಾವಳಿಯಾಗದಂತೆ ವ್ಯವಸ್ಥೆ ಕಲ್ಪಿಸಿ ಮುಂದೆ ಕಾಮಗಾರಿ ಮಾಡುವುದಾಗಿ ತಿಳಿಸಿ, ಸೂಕ್ತ ದಾಖಲೆ ಒದಗಿಸುವುದಾಗಿ ತಿಳಿಸಿದ ಬಳಿಕ ಒಂದು ವಾರಗಳ ಕಾಲ ಕಾಲಾವಕಾಶ ನೀಡಲಾಗಿತ್ತು.

    ವಾರ ಕಳೆದರು ಹಡೋಲಿನಲ್ಲಿ ಮಣ್ಣು ತುಂಬಿಸುವ ಕೆಲಸ ನಡೆಸುತ್ತಿದ್ದವರಿಂದ ಯಾವುದೇ ಪೂರಕ ಪ್ರತಿಕ್ರಿಯೆ ಬಾರದ ಹಿನ್ನಲೆಯಲ್ಲಿ ಸ್ಥಳೀಯರು ಸ್ಥಳ ಪರಿಶೀಲನೆ ನಡೆಸಿದಾಗ, ಹೊಳೆ ಪಕ್ಕದ ಹಡೋಲಿನಲ್ಲಿರುವ ಕೆರೆ ಮತ್ತು ಸೂಲಡ್ಪು ಹೊಳೆಗೆ ಮಣ್ಣು ತುಂಬಿಸಿರುವುದನ್ನು ಗಮನಿಸಿ ಸ್ಥಳೀಯರು ಶುಕ್ರವಾರದಂದು ಮುಂಜಾನೆಯೇ ಗಿಳಿಯಾರು ಹಡೋಲಿನಲ್ಲಿ ಜಮಾಯಿಸಿ, ಜಾಗಕ್ಕೆ ಮಣ್ಣು ತುಂಬಿಸುತ್ತಿದ್ದ ಲಾರಿಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರು. ಅಲ್ಲದೇ ಹಡೋಲಿನಲ್ಲಿರುವ ಸರಕಾರಿ ಜಾಗ ಮತ್ತು ವಾಣಿಜ್ಯ ಉದ್ದೇಶಕ್ಕೆ ಮಣ್ಣು ತಂಬಿಸುತ್ತಿರುವವರು ಖರೀದಿಸಿದ ಜಾಗದ ನಕ್ಷೆ ನೀಡಬೇಕು. ನೂತನ ಎನ್‌ಜಿಟಿ ತೀರ್ಪಿನ ಅನ್ವಯ ನಿಯಮಗಳನ್ನು ಪಾಲಿಸಿ, ಹೊಳೆಯ ಸುತ್ತ ಬಫರ್ ಝೋನ್ ನಿರ್ಮಿಸಬೇಕು. ನಿರಂತರ ನೆರೆ ಹಾವಳಿಯುಂಟಾಗುವು ಪ್ರದೇಶದಲ್ಲಿ ಮಣ್ಣು ತುಂಬಿಸುದರಿಂದ ಮುಂದೆ ಆಗುವ ಸಮಸ್ಯೆಗಳಿಗೆ ಜವಾಬ್ದಾರರಾಗಬೇಕು ಎನ್ನುವ ಮನವಿಯನ್ನು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ರಾಘವೇಂದ್ರ ಕಾಂಚನ್ ಅವರಿಗೆ ಹಸ್ತಾಂತರಿಸಿದರು.

    ಈ ಸಂದರ್ಭ ಕೋಟ ಪಂಚಾಯಿತಿ ಉಪಾಧ್ಯಕ್ಷ ರಾಜಾರಾಮ್ ಶೆಟ್ಟಿ, ಸದಸ್ಯರಾದ ಅಜಿತ್ ದೇವಾಡಿಗ, ಸಂತೋಷ ಪ್ರಭು, ಪಾಂಡು, ತ್ರಿಶೂಲ್ ಅಸೋಸಿಯೇಟ್ಸ್ ನ ವಸಂತ್ ಗಿಳಿಯಾರ್, ಅರುಣ್ ಶೆಟ್ಟಿ ಪಡುಮನೆ, ಅಶೋಕ್ ಶೆಟ್ಟಿ ಬನ್ನಾಡಿ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಭರತ್ ಕುಮಾರ್ ಶೆಟ್ಟಿ, ಶಂಕರ್ ನಾರಾಯಣ ಹೇರ್ಳೆ, ಪ್ರಸಾದ್ ಶೆಟ್ಟಿ ಪಡುಮನೆ, ರಾಘವೇಂದ್ರ ಶೆಟ್ಟಿ ಹಂಡಿಕೆರೆ ಮನೆ, ಸತೀಶ್ ಶೆಟ್ಟಿ ಬಡಾಮನೆ, ಹರಿದಾಸ ಮಯ್ಯ, ಕುಮಾರ್ ದೇವಾಡಿಗ, ಪ್ರಕಾಶ್ ಹೇರ್ಳೆ, ಸುಬ್ರಹ್ಮಣ್ಯ ಹೇರ್ಳೆ, ಸುರೇಶ್ ಪೂಜಾರಿ, ಸುಭಾಸ್ ಪೂಜಾರಿ, ಯೋಗಾನಂದ ಹೆಗ್ಡೆ, ನಿತೀಶ್ ಕಾಂಚನ್,ಯೋಗಾನಂದ ಪೂಜಾರಿ, ರಾಘವೇಂದ್ರ ದೇವಾಡಿಗ, ದಯಾನಂದ ದೇವಾಡಿಗ, ಮಹೇಶ್ ದೇವಾಡಿಗ, ವಿನೀಶ್ ಅಜೀಲ, ಶ್ರವಣ್ ಕುಮಾರ್ ಶೆಟ್ಟಿ, ರಾಘವೇಂದ್ರ ಪೂಜಾರಿ, ಸುಭಾಸ್ ಹೇರ್ಳೆಬೆಟ್ಟು, ರವಿ ಗಿಳಿಯಾರು, ಸಂತೋಷ್ ಶೆಟ್ಟಿ ಹಂಡಿಕೆರೆಮನೆ, ಅರುಣ್ ಕುಮಾರ್ ಶೆಟ್ಟಿ ಮಠೀನ್ ಕೆರೆಮನೆ, ಶಂಕರ್ ದೇವಾಡಿಗ, ರಜತ್ ತೆಕ್ಕಟ್ಟೆ, ದಿನೇಶ್ ಪೂಜಾರಿ ಚಾರ್ಕೂರು ಮನೆ, ರಾಜಾರಾಮ್ ಶೆಟ್ಟಿ, ಮಿಥುನ್ ಶೆಟ್ಟಿ ಪಡುಮನೆ, ಪಾಂಡು ಪೂಜಾರಿ ಹಾಡಿಕೆರೆ, ಕಿರಣ್ ಆಚಾರ್ಯ, ಸುಧೀರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    ಅಶ್ವತ್ ಆಚಾರ್ಯ

    Click here

    Click here

    Click here

    Call us

    Call us

    Giliyaru (2) Giliyaru (3) Giliyaru (1)

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.