Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬುಡಕಟ್ಟು ಮಕ್ಕಳಿಗೆ ಭೋಧಿಸುವ ಶಿಕ್ಷಕರಿಗೆ ವಿಶೇಷ ಸಾಮರ್ಥ್ಯ ಬೇಕು
    ಊರ್ಮನೆ ಸಮಾಚಾರ

    ಬುಡಕಟ್ಟು ಮಕ್ಕಳಿಗೆ ಭೋಧಿಸುವ ಶಿಕ್ಷಕರಿಗೆ ವಿಶೇಷ ಸಾಮರ್ಥ್ಯ ಬೇಕು

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸಾಂಪ್ರದಾಯಿಕ ಶಿಕ್ಷಣದಲ್ಲಿ ಶಿಕ್ಷಕರ ಬೋಧನಾ ನಿರ್ವಹಣೆ ಸರಳ ಸ್ವರೂಪದ್ದಾಗಿರುತ್ತದೆ. ಅವರಿಗೆ ಸಿದ್ಧ ಪಠ್ಯ ಮತ್ತು ಸ್ವೀಕೃತ ಕಲಿಕಾ-ಬೋಧನಾ ವಿಧಾನದ ನೆರವು ಇರುತ್ತದೆ. ಆದರೆ ಬುಡಕಟ್ಟು ಮಕ್ಕಳಿಗೆ ಅವರ ಬದುಕಿನ ವಿಧಾನಗಳನ್ನೇ ಆಕರವಾಗಿ ಬಳಸಬೇಕಾಗಿರುವುದರಿಂದ ಅವರ ಶಿಕ್ಷಕರಿಗೆ ಅದು ದೊಡ್ಡ ಸವಾಲಾಗಿ ಪರಿಣಮಿಸುತ್ತದೆ. ಅದಕ್ಕೆ ವಿಶೇಷ ಸಾಮರ್ಥ್ಯ ಅಗತ್ಯ. ಆ ಸಾಮರ್ಥ್ಯ ಪ್ರಸಕ್ತ ತರಬೇತಿಯಲ್ಲಿ ಅವರು ಸಂಪಾದಿಸಲಿ ಎಂದು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಆಶಿಸಿದರು.

    Click Here

    Call us

    Click Here

    ಇಂಡಿಯ ಫೌಂಡೇಶನ್ ಫಾರ್ ಆರ್ಟ್ಸ್ ಟೈಟನ್ ಕಂಪನಿಯ ಪ್ರಾಯೋಜಕತ್ವದಲ್ಲಿ ಕನ್ಯಾನದ ನಮ್ಮಭೂಮಿಯಲ್ಲಿ ನಡೆಸುತ್ತಿರುವ ನಾಲ್ಕು ದಿನಗಳ ’ಪಠ್ಯಕ್ರಮದಲ್ಲಿ ಸ್ಥಳೀಯ ಸಂವೇದನೆಗಳ ಸಮನ್ವಯ’ ಕುರಿತಾದ ’ಕಲಿ-ಕಲಿಸು’ ತರಬೇತಿ ಶಿಬಿರವನ್ನು ಅವರು ಉದ್ಘಾಟಿಸಿದ ಬಳಿಕ ಮಾತನಾಡಿದರು.

    ಆರಂಭಿಕ ನುಡಿಗಳನ್ನಾಡಿದ ಶಿಬಿರದ ನಿರ್ದೇಶಕ, ಫೌಂಡೇಶನ್‌ನ ಕಲಾ ಶಿಕ್ಷಣ ವಿಭಾಗದ ಕಾರ್ಯಕ್ರಮ ನಿರ್ವಾಹಕ ಟಿ. ಎನ್. ಕೃಷ್ಣಮೂರ್ತಿ ’ಕಲಿ-ಕಲಿಸು’ ತರಬೇತಿಯ ವಿನ್ಯಾಸವನ್ನು ವಿವರಿಸಿದರು. ಮೈಸೂರು ಜಿಲ್ಲೆಯ ಬುಡಕಟ್ಟು ವಿದ್ಯಾರ್ಥಿಗಳು ಕಲಿಯುತ್ತಿರುವ ಶಾಲೆಗಳಲ್ಲಿ ದುಡಿಯುತ್ತಿರುವ ೫೦ ಶಿಕ್ಷಕರು ಶಿಬಿರದಲ್ಲಿ ಭಾಗವಹಿಸಿದ್ದಾರೆ. ಬುಡಕಟ್ಟುಗಳ ಸಂಪ್ರದಾಯ, ಆಚರಣೆ, ತಾಂತ್ರಿಕತೆ ಪಠ್ಯಕ್ರಮದ ಭಾಗವಾದಾಗ ಶ್ರೀಮಂತ ಕಲಿಕಾ ವಾತಾವರಣ ಸೃಷ್ಟಿಯಾಗುತ್ತದೆ ಎಂಬ ಕಾರಣದಿಂದ ಮೊದಲ ಹಂತದ ತರಬೇತಿಯಲ್ಲಿ ಸ್ಥಳೀಯ ಕಲೆಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳುವ ಕೌಶಲವನ್ನು ಶಿಕ್ಷಕರಿಗೆ ಕಲಿಸಲಾಗುತ್ತದೆ. ಶಿಕ್ಷಕರ ಆಸಕ್ತಿಗೆ ಅನುಗುಣವಾಗಿ ಅವರಿಗೆ ರಂಗಭೂಮಿ, ಮಕ್ಕಳ ಸಾಹಿತ್ಯ, ಕರಕುಶಲ ಕಲೆ, ಬುಡಕಟ್ಟು ಸಾಹಿತ್ಯವನ್ನು ಪರಿಚಯಿಸಿ, ಅವುಗಳನ್ನು ಕಲಿಕಾ ಪ್ರಕ್ರಿಯೆಯಲ್ಲಿ ಬಳಸುವ ವಿಧಾನವನ್ನು ತಿಳಿಸಲಾಗುತ್ತದೆ ಎಂದರು.

    ಗಣಪತಿ ಹೋಬಳಿದಾರ್ ಸ್ವಾಗತಿಸಿ, ಸದಾನಂದ ಬೈಂದೂರು ವಂದಿಸಿದರು. ವಿವಿಧ ಕ್ಷೇತ್ರಗಳಲ್ಲಿ ಪರಿಣತರಾಗಿದ್ದುಕೊಂಡು ಶಿಕ್ಷಕರಾಗಿ ದುಡಿಯುತ್ತಿರುವ ಗುಂಡಪ್ಪ ಗೌಡಗೋಳ್, ಗಣಪತಿ ಹೋಬಳಿದಾರ್, ಸತ್ಯನಾರಾಯಣ ಕೊಡೇರಿ, ಸದಾನಂದ ಬೈಂದೂರು, ಪ್ರಜ್ಞಾ ಹೆಗಡೆ, ಬ್ಲೇಜ್ ಜೋಸೆಫ್, ಆತ್ರೇಯಿ ಡೇ, ಎಸ್. ಕಲಾಧರ, ಮನು ಶಂಕರ್ ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026
    Leave A Reply Cancel Reply

    20 − nineteen =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.