Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಪಾರು ದಿನೇಶ್ ವೈದ್ಯ ಅವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ
    ವಿಶೇಷ ವರದಿ

    ಅಂಪಾರು ದಿನೇಶ್ ವೈದ್ಯ ಅವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ

    Updated:17/05/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಆರ್ಯಭಟ ಸಾಂಸ್ಕೃತಿಕ ಸಂಘಟನೆ ನೀಡಲಾಗುತ್ತಿರುವ 2015ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಬೆಂಗಳೂರಿನ ಉದ್ಯಮಿ, ಸಮಾಜ ಸೇವಕ ದಿನೇಶ್ ವೈದ್ಯ ಅಂಪಾರು ಅವರಿಗೆ ಲಭಿಸಿದೆ. ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವುದನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.

    Click Here

    Call us

    Click Here

    ಯಶಸ್ವಿ ಉದ್ಯಮಿ
    ಕುಂದಾಪುರ ತಾಲೂಕಿನ ಅಂಪಾರಿನ ದಿನೇಶ್ ವೈದ್ಯ ಅವರು ಬೆಂಗಳೂರಿನಲ್ಲಿ ನೆಲೆನಿಂತು ಸ್ವಂತ ಉದ್ಯಮದಲ್ಲಿ ತೊಡಗಿಕೊಂಡು ಇಂದು ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡವರಲ್ಲದೇ, ಸಾಮಾಜಿಕ ಕಾರ್ಯಗಳಲ್ಲಿಯೂ ನಿರಂತರವಾಗಿ ತೊಡಗಿಸಿಕೊಂಡು ಸಾಮಾಜಿಕ ಬದುಕಿನಲ್ಲಿ ಹಲವರಿಗೆ ಬೆಳಕಾದವರು. ಕಳೆದ ಒಂದೂವರೆ ದಶಕಗಳ ಹಿಂದೆ ಹೊಟ್ಟೆಪಾಡಿಗಾಗಿ ಬೆಂಗಳೂರು ನಗರಿಗೆ ತೆರಳಿದ್ದ ದಿನೇಶ್ ವೈದ್ಯ ಅವರು ಹೋಟೆಲ್ ಮುಂತಾದೆಡೆ ಕಾರ್ಯನಿರ್ವಹಿಸಿ ಮುಂದೆ 2002ರಲ್ಲಿ ಇನ್ನಿಬ್ಬರು ಸಹವರ್ತಿಗಳೊಂದಿಗೆ ‘ಬರಕೆ ಶೋಕೇಸ್ ಇಂಕ್’ ಸಂಸ್ಥೆಯನ್ನು ಹುಟ್ಟುಹಾಕಿ ಸ್ವಂತ ಉದ್ಯಮವನ್ನು ಆರಂಭಿಸಿದರು. ಮುಂದೆ ಅದು ಏನ್’ಸೈನ್ ಇಕ್ವಿಪ್ಮೆಂಟ್ ಪ್ರೈವೇಟ್ ಲಿಮಿಟೆಡ್ ಎಂದು ಮರುನಾಮಕರಣಗೊಂಡ ಬಳಿಕ 2012ರಲ್ಲಿ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಾದರು. ಕುಂದಾಪುರದಲ್ಲಿ ಫ್ಯಾಶನ್ ಲೋಕ, ಬೆಂಗಳೂರಿನಲ್ಲಿ ಕಾಫಿಪಾಯಿಂಟ್ ಇಂಡಿಯಾ ಎಂಬೆರಡು ಸಂಸ್ಥೆಯನ್ನು ಹುಟ್ಟುಹಾಕಿ ಉದ್ಯಮ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆದವರು.
    ಕುಂದಾಪ್ರ ಡಾಟ್ ಕಾಂ ವರದಿ.

    ಸಮಾಜ ಸೇವೆಯಲ್ಲಿ ನಿರಂತರ
    ಉದ್ಯಮ ಕ್ಷೇತ್ರದ ಬಿಡುವಿರದ ಕೆಲಸಕಾರ್ಯಗಳ ನಡುವೆಯೂ ಸಮಾಜ ಸೇವೆಯಲ್ಲಿಯೂ ನಿರಂತರವಾಗಿ ತೊಡಗಿಸಿಕೊಂಡು ಸಮಾಜದ ಸ್ವಾಸ್ಥ್ಯಕ್ಕೆ ತನ್ನ ಕೊಡುಗೆಯಿತ್ತವರು ಈ ವೈದ್ದರು. ಅಂಗವಿಕಲರಿಗೆ ಕೃತಕ ಕಾಲಿನ ಜೋಡಣೆ ಶಿಬಿರ, ಅಂಪಾರಿನ ಸರಕಾರಿ ಶಾಲೆಗೆ ಶೈಕ್ಷಣಿಕ ಸಾಮಗ್ರಿಗಳನ್ನು ಪೂರೈಕೆ, ಬಡ ಯಕ್ಷಗಾನ ಕಲಾವಿದರಿಗೆ ಹಣಕಾಸಿನ ನೆರವು, ಗ್ರಾಮೀಣ ಶಾಲೆಗಳಿಗೆ ಗಣಕ ಯಂತ್ರ ಕೊಡುಗೆ, ಶಾಲೆಗಳಿಗೆ ಕುಡಿಯುವ ನೀರು ಹಾಗು ಸಮವಸ್ತ್ರ ಪೂರೈಗೆ ನೆರವು, ಅಂಪಾರಿನ ಶಾಲೆಯ ಭೋಜನ ಗೃಹದ ನಿರ್ಮಾಣಕ್ಕೆ ನೆರವು, ಗಂಗೊಳ್ಳಿಯ ಸರಕಾರಿ ಶಾಲೆಗೆ ಅಡುಗೆ ತಯಾರಿಯ ಪರಿಕರ, ನೆಲ್ಲಿಕಟ್ಟೆಯ ಸರಕಾರಿ ಶಾಲೆಯ ಆಟದ ಮೈದಾನದ ನಿರ್ಮಾಣಕ್ಕೆ ಹಣಕಾಸು ನೆರವು, ಸ್ವಚ್ಚ ಭಾರತ ಆಂದೋಲನದಲ್ಲಿ ಸಕ್ರಿಯ ಭಾಗವಹಿಸುವಿಕೆ ಸೇರಿದಂತೆ ಹತ್ತಾರು ಕಾರ್ಯಗಳಲ್ಲಿ ತೊಡಗಿಸಿಕೊಂಡವರು. /ಕುಂದಾಪ್ರ ಡಾಟ್ ಕಾಂ/ ಭವಿಷ್ಯದಲ್ಲಿ ಅವರ ಅಜ್ಜ ಅಜ್ಜಿಯ ಹೆಸರಿನಲ್ಲಿ ಸಾಂಸ್ಕೃತಿಕ ಟ್ರಸ್ಟ್ ಕಟ್ಟಿ ಸಾಮಾಜಿಕ ಹಾಗು ಸಾಂಸ್ಕೃತಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುಬೇಕೆಂಬ ಬಯಕೆ ಅವರದ್ದು. ಕುಂದಾಪ್ರ ಡಾಟ್ ಕಾಂ ವರದಿ.

    ಸಾಧಕನಿಗೆ ಪ್ರಶಸ್ತಿಯ ಮುಕುಟ
    ಸಮಾಜಸೇವೆಯಲ್ಲಿ ನಿರಂತವಾಗಿ ತೊಡಗಿಸಿಕೊಂಡಿರುವ ದಿನೇಶ್ ವೈದ್ಯ ಅವರಿಗೆ 2012ರಲ್ಲಿ ಯುವ ವಿಪ್ರ ವೇದಿಕೆಯಿಂದ “ವಿಪ್ರ ಮಣಿ” ಪುರಸ್ಕಾರ, 2014ರಲ್ಲಿ ಶೃಂಗೇರಿ ಭಾರತೀತೀರ್ಥ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ “ಕಲಾಪೋಷಕ” ಪ್ರಶಸ್ತಿ, 2015ರಲ್ಲಿ ‘ಸಾಧಕ ರತ್ನ’, ಯಕ್ಷಕಲಾ ಸಂಘಟಕರು ಬೆಂಗಳೂರು ವತಿಯಿಂದ ‘ಸಮಾಜ ಸೇವಾ ರತ್ನ’ ಪ್ರಶಸ್ತಿ ಸೇರಿದಂತೆ ಹಲವಾರು ಶೈಕ್ಷಣಿಕ ಸಂಸ್ಥೆಗಳು ಹಾಗು ಸಾಂಸ್ಕೃತಿಕ ಸಂಘಗಳು ಗೌರವಿಸಿವೆ. ಮೇ.18ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಿತ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಕುಂದಾಪ್ರ ಡಾಟ್ ಕಾಂ ವರದಿ.

    ಅಂಪಾರಿನ ಕುವರ
    ಅಂಪಾರಿನ ಸುಕುಮಾರ ವೈದ್ಯ ಮತ್ತು ಶೈಲಜಾ ವೈದ್ಯ ಅವರ ಪುತ್ರರಾದ ದಿನೇಶ್ ವೈದ್ಯ ಅವರು ಅಂಪಾರು, ನೆಲ್ಲಿಕಟ್ಟೆಯಲ್ಲಿ ಪ್ರೌಢಶಾಲೆವರೆಗಿನ ಶಿಕ್ಷಣವನ್ನು, ಭಂಡಾರ‍್ಸ್‌ಕಾರ‍್ಸ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು, ಮಂಗಳೂರು ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಟೋಮೊಬೈಲ್ ಡಿಪ್ಲೋಮಾ ಹಾಗೂ ಬೆಂಗಳೂರು ಕ್ಯಾಡ್ ಶಿಕ್ಷಣ ಕೇಂದ್ರ ಅಟೋ ಕ್ಯಾಡ್ ಮತ್ತು ಎಮ್ ಡಿಟಿ ಪದವಿ ಪಡೆದಿದ್ದಾರೆ. ಬೆಂಗಳೂರಿನಲ್ಲಿ ಮಡದಿ ಪ್ರಾಂಜಲಿ ವೈದ್ಯ ಹಾಗೂ ಮಕ್ಕಳಾದ ಅಮೋಘ್ ವೈದ್ಯ ಅನುಷ್ಕಾ ವೈದ್ಯ ಸುಖಿ ಸಂಸಾರ ನಡೆಸುತ್ತಿದ್ದಾರೆ. / ಕುಂದಾಪ್ರ ಡಾಟ್ ಕಾಂ ವರದಿ./

    Click here

    Click here

    Click here

    Call us

    Call us

    Like this:

    Like Loading...

    Related

    Amparu dinesh vaidya Aryabhata International Award
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d