Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರಿನಲ್ಲಿ ದೇವಾಡಿಗ ವೈಭವ-2016ಕ್ಕೆ ಚಾಲನೆ
    ಊರ್ಮನೆ ಸಮಾಚಾರ

    ಬೈಂದೂರಿನಲ್ಲಿ ದೇವಾಡಿಗ ವೈಭವ-2016ಕ್ಕೆ ಚಾಲನೆ

    Updated:21/05/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು.ಮೇ21: ದೇವಾಡಿಗರು ಸಂಘಟಿತರಾದರೆ ಮಾತ್ರ ಈ ಸಮಾಜದ ಶಕ್ತಿ, ಸಾಮರ್ಥ್ಯದ ಬಗೆಗೆ ಭರವಸೆ ಮೂಡಲು ಸಾಧ್ಯ. ಸಂಘಟಿತರಾಗುವುದರೊಂದಿಗೆ ಸಮಾಜದ ಬಡವರು, ಪ್ರತಿಭಾನ್ವಿತರನ್ನು ಗುರುತಿಸಿ ಮೇಲೆತ್ತುವ ಕಾರ್ಯವಾಗಬೇಕು. ನಮ್ಮ ಒಗ್ಗಟ್ಟು ಜನಪ್ರತಿನಿಧಿಗಳು ಹಾಗೂ ಸರಕಾರದ ಕಣ್ಣು ತೆರೆಸುವಂತಾಗಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಮಹಾಮಂಡಲದ ಅಧ್ಯಕ್ಷ ರಘುರಾಮ್ ದೇವಾಡಿಗ ಹೇಳಿದರು.

    Click Here

    Call us

    Click Here

    ಅವರು ಶನಿವಾರ ದೇವಾಡಿಗ ವೈಭವ ಕಲ್ಚರಲ್ ಕ್ಲಬ್ ರಿ ಸಾರಥ್ಯದಲ್ಲಿ ದೇವಾಡಿಗರ ಒಕ್ಕೂಟ ರಿ. ಬೈಂದೂರು ಹಾಗೂ ಮುಂಬೈ ದೇವಾಡಿಗ ವೆಲ್‌ಫೇರ್ ಅಸೋಸಿಯೇಶನ್ ರಿ. ಸಹಯೋಗದೊಂದಿಗೆ ಇಲ್ಲಿನ ಜೆ.ಎನ್.ಆರ್. ಕಲಾಮಂದಿರದಲ್ಲಿ ಆಯೋಜಿಸಲಾದ ದೇವಾಡಿಗ ವೈಭವ 2016 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇವಾಡಿಗ ಸಮಾಜದಲ್ಲಿ ಈಡೇರಬೇಕಾದ ಹತ್ತಾರು ಬೇಡಿಕೆಗಳಿದ್ದು ಸಂಘಟಿತರಾಗಿ ಬೇಡಿಕೆಯಿಟ್ಟಾಗ ಮಾತ್ರ ಅವುಗಳಿಗೊಂದು ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ ಎಂದರು.

    ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಯಾವುದೇ ಸಮುದಾಯ ಮುಂಚೂಣಿಗೆ ಬರಬೇಕಾದರೇ ಆ ಸಮುದಾಯದವರು ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸದೃಢರಾಗಿಬೇಕು. ಅಂತಹ ವಾತಾವರಣ ನಿರ್ಮಿಸುವ ಕೆಲಸ ಸಮುದಾಯದ ನಾಯಕರುಗಳಿಂದ ಆಗಬೇಕಿದೆ ಎಂದರು.

    ಕುಂದಾಪುರದಲ್ಲಿ ದೇವಾಡಿಗ ಸಮುದಾಯ ಭವನ ನಿರ್ಮಾಣಕ್ಕೆ ಈಗಾಗಲೇ ಸರಕಾರದ ಸ್ಥಳ ಗುರುತು ಕಾರ್ಯ ನಡೆಯುತ್ತಿದೆ. ಭವನ ನಿರ್ಮಿಸುವ ಸಂದರ್ಭದಲ್ಲಿ ಒಂದು ಕೋಟಿ ಅನುದಾನ ನೀಡುವುದಾಗಿ ಭರವಸೆ ಇತ್ತರು. ಹೇನುಬೇರು ಪ್ರದೇಶದಲ್ಲಿ ಈಗಾಗಲೇ ರಸ್ತೆ, ವಿದ್ಯುತ್‌ದೀಪ ಸೌಲಭ್ಯಗಳನ್ನು ಒದಗಿಸಲಾಗಿದೆ. ಬಸ್ ರೂಟ್ ಕೂಡ ತಯಾರಾಗಿದ್ದು ಒಂದೊಂದೇ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲಾಗುವುದು ಎಂದವರು ತಿಳಿಸಿದರು.

    ಬೈಂದೂರು ದೇವಾಡಿಗ ಒಕ್ಕೂಟದ ಅಧ್ಯಕ್ಷ ಕೆ.ಜಿ. ಸುಬ್ಬ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಶಂಕರ ಪೂಜಾರಿ, ತಾಪಂ ಸದಸ್ಯರಾದ ರಾಜು ದೇವಾಡಿಗ, ಸುಜಾತ ದೇವಾಡಿಗ, ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ, ರಾಜ್ಯ ರೈತಮೋರ್ಚಾ ಉಪಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕರ್ನಾಟಕ ರಾಜ್ಯ ದೇವಾಡಿಗ ಸಂಘದ ಅಧ್ಯಕ್ಷ ವಾಮನ್ ಮುರೋಳಿ, ಮಂಗಳೂರು ಎಸ್.ಡಿಎಂ ಪಿ.ಜಿ ಸೆಂಟರ್ ನಿರ್ದೇಶಕ ಡಾ. ಕೆ. ದೇವರಾಜ್, ಏಕನಾಥೇಶ್ವರಿ ದೇವಸ್ಥಾನ ನಿರ್ಮಾಣ ಸಮಿತಿ ಅಧ್ಯಕ್ಷ ಅಣ್ಣಯ್ಯ ಶೇರಿಗಾರ್, ಪ್ರಗತಿ ಸೌಹಾರ್ದ ಕೋ ಆಪರೇಟಿವ್‌ನ ಲಕ್ಷೀಕಾಂತ ಬೆಸ್ಕೂರು, ಪ್ರಿಯದರ್ಶಿನಿ ಬೆಸ್ಕೂರು, ಬೈಂದೂರು ದೇವಾಡಿಗ ಒಕ್ಕೂಟದ ಗೌರವಾಧ್ಯಕ್ಷ ನಾರಾಯಣ ದೇವಾಡಿಗ, ಬೆಂಗಳೂರು ದೇವಾಡಿಗ ನವೋದಯ ಸಂಘದ ಅಧ್ಯಕ್ಷ ಹರಿ ದೇವಾಡಿಗ, ಬೈಂದೂರು ದೇವಾಡಿಗ ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ದೇವಾಡಿಗ, ಉಡುಪಿ ನಾದಶ್ರೀ ಕ್ರೆಡಿಕ್ ಕೋ-ಆಪರೇಟಿವ್ ಅಧ್ಯಕ್ಷ ಚಂದ್ರಕಾಂತ್ ದೇವಾಡಿಗ, ಉದ್ಯಮಿ ನರಸಿಂಹ ದೇವಾಡಿಗ, ನಾವುಂದ ಗ್ರಾಪಂ ಅಧ್ಯಕ್ಷ ನರಸಿಂಹ ದೇವಾಡಿಗ, ಬಿಜೂರು ಗ್ರಾಪಂ ಅಧ್ಯಕ್ಷೆ ಲೋಲಾಕ್ಷಿ ದೇವಾಡಿಗ, ಖಂಬದಕೋಣೆ ಗ್ರಾಪಂ ಅಧ್ಯಕ್ಷ ರಾಜೇಶ್ ದೇವಾಡಿಗ, ಕುಂದಾಪುರ ದೇವಾಡಿಗ ಸೇವಾ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ, ಉಪ್ಪುಂದ ದೇವಾಡಿಗ ಸಂಘದ ಅಧ್ಯಕ್ಷ ಮಂಜು ದೇವಾಡಿಗ, ಕಿರಿಮಂಜೇಶ್ವರ ಗ್ರಾಪಂ ಸದಸ್ಯ ಈಶ್ವರ ದೇವಾಡಿಗ, ಭಟ್ಕಳ ದೇವಾಡಿಗ ಸಂಘದ ಅಧ್ಯಕ್ಷ ಪರಮೇಶ್ವರ ದೇವಾಡಿಗ, ಎನ್‌ಎಂ ದೇವಾಡಿಗ, ಮಾಧವ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಬೆಳ್ಮಣ್ಣು ದೇವಾಡಿಗ ಸೇವಾ ಸಂಘದ ಸ್ಥಾಪಕಾಧ್ಯಕ್ಷ ವಸಂತಕುಮಾರ್ ನಿಟ್ಟೆ ದಿಕ್ಸೂಚಿ ಭಾಷಣ ಮಾಡಿದರು. ರಂಗನಟ ಗಿರೀಶ್ ಬೈಂದೂರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ದೇವಾಡಿಗ ವೈಭವದ ಜೊತೆ ಕಾರ್ಯದರ್ಶಿ ಅವಿನಾಶ್ ಬಿ. ದೇವಾಡಿಗ ಸ್ವಾಗತಿಸಿದರು. ಪ್ರವೀಣ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

    Byndoor Devadiga Vaibhava 2016 - Devadiga vaibhava cultural club (1) Byndoor Devadiga Vaibhava 2016 - Devadiga vaibhava cultural club (2) Byndoor Devadiga Vaibhava 2016 - Devadiga vaibhava cultural club (3) Byndoor Devadiga Vaibhava 2016 - Devadiga vaibhava cultural club (4) Byndoor Devadiga Vaibhava 2016 - Devadiga vaibhava cultural club (5)

    Like this:

    Like Loading...

    Related

    B.M Sukumar Shetty Byndoor MLA News Charan Byndoor Devadiga Devadiga Vaibhava 2016
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d