Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಅಕ್ಷಯ ರಾವ್
    Photo news

    ಕುಂದಾಪುರ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಅಕ್ಷಯ ರಾವ್

    Updated:25/05/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ವಿದ್ಯಾರ್ಥಿ ಅಕ್ಷಯ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ
    ಕುಂದಾಪುರ: ಟ್ಯೂಷನ್‌ಗೆ ತೆರಳಿಲ್ಲ. ಓದಲು ಟೈಮ್ ಟೇಬಲ್ ಕೂಡ ಹಾಕಿಕೊಂಡಿಲ್ಲ. ಆದರೇನಂತೆ ನಿಷ್ಠೆಯಿಂದಲೇ ಓದಿ ಶೇ.98.83 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾನೆ ಕುಂದಾಪುರ ಎಜುಕೇಶ್‌ನ ಟ್ರಸ್ಟ್ ಆಡಳಿತಕ್ಕೊಳಪಟ್ಟ ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಕ್ಷಯ ಜಿ. ರಾವ್

    ಸಿದ್ದಾಪುರ ಜನ್ಸಾಲೆಯ ವಕೀಲಿ ವೃತ್ತಿಯಲ್ಲಿರುವ ಗುರುಮೂರ್ತಿ ರಾವ್ ಹಾಗೂ ಗೀತಾ ದಂಪತಿಗಳ ದ್ವಿತೀಯ ಪುತ್ರನಾದ ಅಕ್ಷಯ ಜಿ. ರಾವ್, 593 ಅಂಕ ಗಳಿಸಿ ರಾಜ್ಯಕ್ಕೇ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾನೆ. ಆಕ್ಷಯ್ ಅವರ ಸಹೋದರಿ ಆಶ್ರೀತಾ ರಾವ್, ಆರ್.ಎನ್. ಶೆಟ್ಟಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚಿಕ್ಕಂದಿನಂದಲೂ ಓದಿನಲ್ಲಿ ನಿಪುಣನಾಗರುವ ಅಕ್ಷಯ ಎಸ್.ಎಸ್‌ಎಲ್.ಸಿಯಲ್ಲಿಯೂ 96% ಅಂಕಗಳಿದ್ದನು. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿಯೂ 96% ಅಂಕಗಳಿಸಿ ಉತ್ತಮ ಸಾಧನೆಗೈಯುವ ಭರವಸೆ ಹುಟ್ಟುಹಾಕಿದ್ದ. ಇದೀಗ ದ್ವಿತೀಯ ಪಿಯುಸಿಯಲ್ಲಿ ಟ್ಯೂಷನ್ ಪಡೆಯದೇ, ಸ್ವಂತ ಪರಿಶ್ರಮದಿಂದ ಅತಿ ಹೆಚ್ಚು ಅಂಕಗಳಿಸಿ ಮಾದರಿಯಾಗಿದ್ದಾನೆ. ಸಬ್ಜೆಕ್ಟ್ ಓದಿನೊಂದಿಗೆ ಸಂಗೀತ, ಇತರೇ ಓದಿನಲ್ಲಿ ಆಸಕ್ತಿ ಹೊಂದಿರುವ ಅಕ್ಷಯ ಸಂಗೀತದಲ್ಲಿ ಪ್ರಾಥಮಿಕ ಕಲಿಕೆಯನ್ನೂ ಮುಗಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ

    ನಿರೀಕ್ಷೆಯ ಅಂಕಗಳಿಸಿರುವುದು ಖುಷಿ ನೀಡಿದೆ. ಪೋಷಕರ ಸಹಕಾರ ಹಾಗೂ ಆರ್‌ಎನ್‌ಎಸ್ ಕಾಲೇಜಿನ ಉಪನ್ಯಾಸಕರುಗಳ ಮಾರ್ಗದರ್ಶನದಿಂದಾಗಿ ಈ ಸಾಧನೆಗೈಯಲು ಸಾಧ್ಯವಾಗಿದೆ. ಪ್ರತಿದಿನವೂ ಇಂತಿಷ್ಟೇ ಹೊತ್ತು ಓದಬೇಕೆಂದು ಟೈಮ್ ಟೇಬಲ್ ಹಾಕಿಕೊಂಡಿರಲಿಲ್ಲ. ಆದರೆ ನಿಯಮಬದ್ದವಾಗಿ ಓದುತ್ತಿದ್ದೆ. ಎಂದು ಹೇಳಿಕೊಂಡಿರುವ ಅಕ್ಷಯ್, ಮುಂದೆ ಇಂಜಿನಿಯರಿಂಗ್ ಪದವಿಯಲ್ಲಿ ಇ&ಸಿ ವಿಭಾಗವನ್ನು ಆಯ್ದುಕೊಳ್ಳುವುದಾಗಿ ತಿಳಿಸಿದ್ದಾನೆ.

    ತನ್ನ ಮಗ ನಿರೀಕ್ಷೆಗಿಂತ ಹೆಚ್ಚು ಅಂಕಗಳಿಸಿರುವುದು ಆಚ್ಚರಿಯನ್ನುಂಟುಮಾಡಿದೆ. ಆತನಿಗೆ ಮನೆಯಲ್ಲಿ ಓದಬೇಕೆಂಬ ಒತ್ತಡ ಹೇರುತ್ತಿರಲಿಲ್ಲ. ಕಾಲೇಜಿಗೆ ಹೋಗಿ ಬರುವ ಎರಡು ಗಂಟೆ ಪ್ರಯಾಣದ ಹೊರತಾಗಿ ಸಮಯ ಹೊಂದಿಸಿಕೊಂಡು ಆಸಕ್ತಿಯಿಂದ ಓದುತ್ತಿದ್ದ. ಅವನ ಶ್ರಮಕ್ಕೆ ಪ್ರತಿಫಲ ಸಿಕ್ಕಂತಾಗಿದೆ ಎಂದು ಆತನ ತಂದೆ ಗುರುಮೂರ್ತಿ ರಾವ್ ಹರ್ಷ ವ್ಯಕ್ತಪಡಿಸಿದ್ದಾರೆ. / ಕುಂದಾಪ್ರ ಡಾಟ್ ಕಾಂ ವರದಿ/

    Click here

    Click here

    Click here

    Call us

    Call us

    [quote font_size=”16″ bgcolor=”#ffffff” bcolor=”#dd3333″ arrow=”yes”]ಕುಂದಾಪುರ ಎಜುಕೇಶನ್ ಸೊಸೈಟಿಯ ಆಡಳಿತಕ್ಕೊಳಪಟ್ಟ ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ವಿಜ್ಞಾನ ವಿದ್ಯಾರ್ಥಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿರುವುದು ಹೆಮ್ಮೆ ತಂದಿದೆ. ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಸತತವಾಗಿ ಪಿಯುಸಿಯಲ್ಲಿ ಸಾಧನೆಗೈಯುತ್ತಿದ್ದಾರೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾದ ವಾತಾವರಣ ಕಲ್ಪಸಿರುವುದು ಸಾಧನೆಗೆ ಸಹಕಾರಿಯಾಗಿದೆ. – ಬಿ.ಎಂ ಸುಕುಮಾರ್ ಶೆಟ್ಟಿ, ಅಧ್ಯಕ್ಷರು ಕುಂದಾಪುರ ಎಜುಕೇಶನ್ ಸೊಸೈಟಿ[/quote]

    Akshay-g-rao

    Like this:

    Like Loading...

    Related

    R.N Shetty PU College Kundapura RNS science student Akshay G Rao got 4th place in state
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d