ಮಲ್ಯರಮಠ ಶ್ರೀ ವೆಂಕಟರಮಣ ದೇವರಿಗೆ ವಜ್ರದ ಕಿರೀಟ ಸಮರ್ಪಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀದೇವರಿಗೆ ಶ್ರೀದೇವರ ಭಕ್ತರೊಬ್ಬರು ಸೇವಾರೂಪದಲ್ಲಿ ಶ್ರೀದೇವರಿಗೆ ವಜ್ರದ ಕಿರೀಟವನ್ನು ಸಮರ್ಪಿಸಿದರು.

Call us

Click Here

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ನೂತನ ವಜ್ರದ ಕಿರೀಟವನ್ನು ಶ್ರೀ
ದೇವರಿಗೆ ಸಮರ್ಪಿಸಿ ಆಶೀರ್ವದಿಸಿದರು. ತಾನು ಮಾಡಿದ ಸಂಪಾದನೆಯಲ್ಲಿ ಸ್ವಲ್ಪ ಭಾಗವನ್ನು ಶ್ರೀದೇವರ ಸೇವೆಗೆ ಮೀಸಲಿರಿಸಬೇಕು. ದೇವರ ಸೇವೆಯನ್ನು ನಿತ್ಯ ನಿರಂತರವಾಗಿ ಮಾಡುವುದರಿಂದ ಜೀವನದಲ್ಲಿ  ಅಭಿವೃದ್ಧಿಯಾಗುತ್ತದೆ. ದೇವರಿಗೆ ವಜ್ರದ ಕಿರೀಟವನ್ನು ಸಮರ್ಪಿಸಿದ ಭಕ್ತರ ಜೀವನರ ವಜ್ರದಂತೆ ಬೆಳಗಲಿ ಎಂದು ಶ್ರೀಗಳು ಹರಸಿದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ವೇದಮೂರ್ತಿ ಜಿ.ವೇದವ್ಯಾಸ ಆಚಾರ್ಯ, ಜಿ.ವೆಂಕಟೇಶ
ನಾಯಕ್, ಎಂ.ಭಾಸ್ಕರ ಪೈ, ರಾಧಿಕಾ ರಾಮಕೃಷ್ಣ ಪೈ, ವೈದಿಕರು, ಪುರೋಹಿತರು, ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಭಜಕರು, ಜಿಎಸ್‌ಬಿ ಸಮಾಜ
ಬಾಂಧವರು ಉಪಸ್ಥಿತರಿದ್ದರು.

Leave a Reply