Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಾಣಿಗ ಸೇವಾ ಸಂಘ ಉಪ್ಪುಂದ ಘಟಕದ ತೃತೀಯ ವಾರ್ಷಿಕೋತ್ಸವ
    Uncategorized

    ಗಾಣಿಗ ಸೇವಾ ಸಂಘ ಉಪ್ಪುಂದ ಘಟಕದ ತೃತೀಯ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಸಮುದಾಯದ ಸಂಘಟನೆಗಳು ತಮ್ಮ ಸದಸ್ಯರಲ್ಲಿ ಧಾರ್ಮಿಕ ಹಾಗೂ ಸಂಘಟನಾ ಮನೋಧರ್ಮ ನಶಿಸದಂತೆ ಮಾಡಲು ಆಗಾಗ ಪೂರಕ ಕಾರ್ಯಕ್ರಮಗಳನ್ನು
    ಹಮ್ಮಿಕೊಳ್ಳಬೇಕು. ಹಣ ಸಂಗ್ರಹಿಸಿ ಅದ್ದೂರಿಯ ಸಮಾರಂಭಗಳನ್ನು ಮಾಡುವುದರ ಬದಲಿಗೆ ಜನರನ್ನು ಒಗ್ಗೂಡಿಸುವ, ದುರ್ಬಲರ ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಬೇಕು ಎಂದು
    ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಮಾಜಿ ಅಧ್ಯಕ್ಷ ಕೊಲ್ಲೂರು ರಮೇಶ ಗಾಣಿಗ ಹೇಳಿದರು.

    Click Here

    Call us

    Click Here

    ಉಪ್ಪುಂದ ಸಮೃದ್ಧ್ ಸಭಾಭವನದಲ್ಲಿ ನಡೆದ ಉಪ್ಪುಂದ, ಬಿಜೂರು, ನಂದನವನ ಹಾಗೂ ಕೆರ್ಗಾಲ್ ಗ್ರಾಮ ವ್ಯಾಪ್ತಿಯ ಗಾಣಿಗ ಸೇವಾ ಸಂಘ ಉಪ್ಪುಂದ ಘಟಕದ ತೃತೀಯ
    ವಾರ್ಷಿಕೋತ್ಸವ, ಶ್ರೀ ಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಸಮುದಾಯದ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣಾ ಸಮಾರಂಭ ಉದ್ಘಾಟಿಸಿ
    ಮಾತನಾಡಿದರು.
    ಸಮಾಜದ ಒಳಿತಿಗಾಗಿ ಯೋಚಿಸಿ, ದೊರೆತ ಅವಕಾಶವನ್ನು ಒಳ್ಳೆಯ ಉದ್ದೇಶಕ್ಕಾಗಿ ಸದುಪಯೋಗ ಪಡಿಸಿಕೊಂಡು ಸತ್ಕಾರ್ಯಗಳನ್ನು ಮಾಡಬೇಕು ಎಂದು ಸಂಘದ ಸದಸ್ಯರಿಗೆ
    ಸಲಹೆ ನೀಡಿದರು.

    ಉಪ್ಪುಂದ ಘಟಕದ ಅಧ್ಯಕ್ಷ ಗಣಪಯ್ಯ ಗಾಣಿಗ ಅಧ್ಯಕ್ಷತೆವಹಿಸಿದ್ದರು. ಬಿಎಸ್‌ಎನ್‌ಎಲ್ ನಿವೃತ್ತ ಉದ್ಯೋಗಿ ಮಹಾಬಲ ಗಾಣಿಗ, ಹಿರಿಯ ನಾಗರಿಕ ಮೊಗೇರಿ ನಾಗಮ್ಮ ಗಾಣಿಗ, ಯುವ
    ಉದ್ಯಮಿ ಶಿವಾನಂದ ಗಾಣಿಗ, ನಾಟಿವೈದ್ಯ ನಾಗಯ್ಯ ಗಾಣಿಗ ಪೂಜಾರಡಿ ಇವರನ್ನು ಸನ್ಮಾನಿಸಲಾಯಿತು. ಸಮಾಜದ ವಿವಿಧ ದಾನಿಗಳ ನೆರವಿನಿಂದ 2016ರ ಎಸ್‌ಎಸ್‌ಎಲ್‌ಸಿ
    ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಹಾಗೂ ಸಮುದಾಯದ ಎಲ್ಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ
    ವಿತರಿಸಲಾಯಿತು.

    ಘಟಕದ ಗೌರವಾಧ್ಯಕ್ಷ ಯು. ಅನಂತ ಗಾಣಿಗ, ಕೋಶಾಧಿಕಾರಿ ಗೋವಿಂದ ಗಾಣಿಗ, ಹಂಗಾರಕಟ್ಟೆ ಚೇತನಾ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಣೇಶ ಚಲ್ಲೆಮಕ್ಕಿ, ಬೆಂಗಳೂರಿನ
    ಉದ್ಯಮಿ ಕೃಷ್ಣಮೂರ್ತಿ ಸಕ್ರೆಬೆಟ್ಟು, ಶಿವಮೊಗ್ಗ ಉದ್ಯಮಿ ರಾಮಚಂದ್ರ ಗಾಣಿಗ ಜಡ್ಡಿನಹಿತ್ಲು ಉಪಸ್ಥಿತರಿದ್ದರು. ಕಾರ್ಯದರ್ಶಿ ಆನಂದ ಗಾಣಿಗ ಪ್ರಾಸ್ತಾವಿಸಿ, ಬಾಬು ಗಾಣಿಗ
    ಸ್ವಾಗತಿಸಿದರು. ಸುಬ್ರಹ್ಮಣ್ಯ ಗಾಣಿಗ ನಿರೂಪಿಸಿ, ಗೋಪಾಲಕೃಷ್ಣ ಗಾಣಿಗ ವಂದಿಸಿದರು. ಬೆಳಿಗ್ಗೆ ಘಂಟೆ ೮ಕ್ಕೆ ಸಮಾಜ ಬಾಂಧವರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಪೂಜೆ
    ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    6 + 9 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.