ಬೈಂದೂರು : ಜೀವವಿಮಾ ಪ್ರತಿನಿಧಿ ಬಳಗದಿಂದ ಕೆ. ಕರುಣಾಕರ ಶೆಟ್ಟಿಯವರಿಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ಜೀವವಿಮಾ ನಿಗಮ ಕುಂದಾಪುರ ಶಾಖೆಯ ಹಿರಿಯ ಅಭಿವೃದ್ಧಿ ಅಧಿಕಾರಿ ಕೆ. ಕರುಣಾಕರ ಶೆಟ್ಟಿಯವರು ನಿವೃತ್ತ ಜೀವನಕ್ಕೆ ಪಾದಾರ್ಪಣೆ ಮಡುತ್ತಿರುವ ಸಂದರ್ಭದಲ್ಲಿ ಬೈಂದೂರಿನ ರೋಟರಿ ಭವನದಲ್ಲಿ ಜೀವವಿಮಾ ಪ್ರತಿನಿಧಿ ಬಳಗದ ವತಿಯಿಂದ ಬೀಳ್ಕೋಡುಗೆ ಸಮಾರಂಭ ನಡೆಯಿತು.

Call us

Click Here

ಭಾರತೀಯ ಜೀವವಿಮಾ ನಿಗಮದಲ್ಲಿ ಅಭಿವೃದ್ಧಿ ಅದಿಕಾರಿಯಾಗಿ ಸುಮಾರು 30 ವರ್ಷಗಳ ಕಾಲ ಸಲ್ಲಿಸಿದ ಅನುಪಮ ಸೇವೆಯನ್ನು ಸ್ಮರಿಸಿಕೊಂಡು, ಅವರ ಕಾರ್ಯವೈಖರಿಯನ್ನು ಪ್ರಶಂಸಿಸಿ, ಮುಂದಿನ ನಿವೃತ್ತ ಜೀವನವು ಶುಭದಾಯಕವಾಗಿರಲಿ ಎಂದು ಕೆ. ಕರುಣಾಕರ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಭಾರತೀಯ ಜೀವವಿಮಾ ನಿಗಮ ಕುಂದಾಪುರ ಶಾಖೆಯ ಹಿರಿಯ ಶಾಖಾಧಿಕಾರಿ ಕೆ.ವಿ. ಕುಲಕರ್ಣಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ಸಂಪರ್ಕ ಶಾಖೆಯ ಶಾಖಾಧಿಕಾರಿ ಜಿ. ಶಶಿಧರ ಹೆಗ್ಡೆ, ಕುಂದಾಪುರ ಶಾಖೆಯ ಉಪ ಶಾಖಾಧಿಕಾರಿ ಗುರುರಾಜ್ ಉಪಸ್ಥಿತರಿದ್ದರು. ಚಿತ್ತೂರು ಪ್ರಕಾಶ್ಚಂದ್ರ ಶೆಟ್ಟಿ ಸನ್ಮಾನಪತ್ರ ವಾಚಿಸಿದರು. ಬಿ.ಸೋಮಶೇಖರ ಶೆಟ್ಟಿ ಪರಿಚಯಿಸಿದರು. ಅಭಿವೃದ್ಧಿ ಅಧಿಕಾರಿಗಳಾದ ಡಿ.ಸತೀಶ್, ಸೋಮನಾಥನ್, ಸುರೇಶ್ ಪೂಜಾರಿ, ಮಾರ್ಟಿನ್ ಡಯಾಸ್, ಚಿತ್ತೂರು ಪ್ರಕಾಶ್ಚಂದ್ರ ಶೆಟ್ಟಿ ನಿವೃತ್ತರ ಸೇವೆಯನ್ನು ಶ್ಲಾಘಿಸಿದರು. ಮಂಜುನಾಥ ಮಹಾಲೆ ಕಾರ್ಯಕ್ರಮ ನಿರ್ವಹಿಸಿ, ಬಿ. ಲಕ್ಷ್ಮೀಕಾಂತ ಮಡಿವಾಳ ವಂದಿಸಿದರು.

Leave a Reply