Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಅಳಿವೆ ಹೂಳೆತ್ತಲು ಕೂಡಿಬಂತು ಕಾಲ
    Uncategorized

    ಗಂಗೊಳ್ಳಿ ಅಳಿವೆ ಹೂಳೆತ್ತಲು ಕೂಡಿಬಂತು ಕಾಲ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    Call us

    Click Here

    ಗಂಗೊಳ್ಳಿ: ಗಂಗೊಳ್ಳಿಯ ಮೀನುಗಾರರ ಬಹುಕಾಲದ ಬೇಡಿಕೆ ಕೊನೆಗೂ ಈಡೇರುವ ದಿನ ಸನ್ನಿಹಿತವಾಗಿದೆ. ಅನೇಕ ಬಾರಿ ಅವಘಡಗಳು ಸಂಭವಿಸಿದ ಮೇಲೆ ಮೀನುಗಾರರ ಹೋರಾಟದ ನಿರಂತರ ಫಲವಾಗಿ ಎಚ್ಚೆತ್ತುಕೊಂಡ ಸರಕಾರಗಳು, ಗಂಗೊಳ್ಳಿ ಅಳಿವೆಯಲ್ಲಿ ಹೂಳೆತ್ತುವ ಕಾರ್ಯಕ್ಕೆ ಅನುಮೋದನೆ ನೀಡಿದೆ. ಈಗಾಗಲೇ ಹೂಳೆತ್ತಲು ಬೃಹತ್  ಯಂತ್ರಗಳು ಗಂಗೊಳ್ಳಿ ಬಂದರುವಿನಲ್ಲಿ ಲಂಗರು ಹಾಕಿದ್ದು ಎಪ್ರಿಲ್ 5ರಿಂದ ಕೆಲಸ ಆರಂಭಿಸುವ ಲಕ್ಷಣಗಳು ಗೋಚರಿಸುತ್ತಿದೆ.

    1972ರಲ್ಲಿ ಹೂಳೆತ್ತಿದ್ದರು:

          ಗಂಗೊಳ್ಳಿ ಅಳಿವೆಯಲ್ಲಿ ಡ್ರೆಜ್ಜಿಂಗ್ ಸಮಸ್ಯೆ ಇಂದು ನಿನ್ನೆಯದಲ್ಲ. 1972ರಲ್ಲಿ ಮ್ಯಾಂಗನೀಸ್ ಅದಿರನ್ನು ಸಾಗುಸುವ ಸಂದರ್ಭದಲ್ಲಿ ಹೂಳು ತೆಗೆಯಲಾಗಿತ್ತು. ಆನಂತರದಲ್ಲಿ  ಹೂಳು ತೆಗೆಯಬೇಕೆಂಬ ಬೇಡಿಕೆಯನ್ನು  ಹಲವು ಬಾರಿ ಸರಕಾರದ ಮುಂದೆ ಇಟ್ಟಿದ್ದರಾದರೂ ಸ್ಪಂದನವಿರಲಿಲ್ಲ. ಮೂರು ವರ್ಷಗಳ ಹಿಂದೆ  ರಾಜ್ಯ ಹಾಗೂ ಕೇಂದ್ರ ಸರಕಾರದ ಅನುದಾನದಲ್ಲಿ ಬ್ರೇಕ್ ವಾಟರ್ ನಿರ್ಮಾಣದ ಯೋಜನೆ ಕೈಗೆತ್ತಿಕೊಂಡಿದ್ದರಿಂದ ಹೂಳೆತ್ತುವ ವಿಚಾರ ಮರೆಮಾಚುವಂತಾಗಿತ್ತು. ಆದರೆ ಬಂದರು ಹಾಗೂ ಅಳಿವೆ ಭಾಗದಲ್ಲಿ ಹೂಳು ವರ್ಷದಿಂದ ವರ್ಷಕ್ಕೆ ಜಾಸ್ತಿಯಾಗುತ್ತಿದ್ದ ಕಾರಣ ಬೋಟುಗಳು ಅಪಘಾತಕ್ಕೆ ತುತ್ತಾಗುತ್ತಿದ್ದವು. ಅದು ಕೆಲವು ಮೀನುಗಾರರು ಜೀವವನ್ನೂ ಬಲಿ ತೆಗೆದುಕೊಂಡಿತು. ಹೂಳೆತ್ತುವ ಮನವಿಗೆ ಸರಕಾರ ಸರಿಯಾದ ಸ್ಪಂದಿಸದಿದ್ದಾಗ ಮತ್ತೆ ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದರು. ಎಲ್ಲದರ ಫಲವಾಗಿ 2012ರಲ್ಲಿ ಸರಕಾರ ಅನುಮೋದನೆ ನೀಡಿತ್ತಾದರೂ ಕಾಮಗಾರಿಯ ಗುತ್ತಿಗೆ ಪಡೆಯುತ್ತಿದ್ದ ಕಂಪೆನಿಗಳ ನಡುವಿನ ಕಿತ್ತಾಟದಿಂದ ಹೂಳು ಅಳಿವೆಯಲ್ಲಿಯೇ ಉಳಿಯುವಂತಾಗಿ ಬಂದರಿಗೆ ಬಂದಿದ್ದ ಯಂತ್ರಗಳು ಹಿಂದಿರುಗಿದ್ದವು..

    Click here

    Click here

    Click here

    Call us

    Call us

         ಇದೀಗ ಮತ್ತೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ದೊರೆತಿದೆ. ಸುಮಾರು 1.77 ಕೋಟಿ ರೂ. ವೆಚ್ಚದಲ್ಲಿ ಡ್ರೆಜ್ಜಿಂಗ್ ಕಾಮಗಾರಿಯನ್ನು ಗಂಗೊಳ್ಳಿ ಅಳಿವೆ, ಗಂಗೊಳ್ಳಿಯ ಹೊಸ ಮೀನುಗಾರಿಕಾ ಜೆಟ್ಟಿ ಪ್ರದೇಶ ಹಾಗೂ ಕೋಡಿಯ ಜೆಟ್ಟಿ ಪ್ರದೇಶದಲ್ಲಿ ಕೈಗೆತ್ತಿಕೊಂಡು ಪೂರ್ಣಗೊಳಿಸಿಕೊಡಲು ಸೀ ಈಗಲ್ ಕಂಪೆನಿಯು ಗುತ್ತಿಗೆ ಪಡೆದುಕೊಂಡಿದೆ. ಮೀನುಗಾರಿಕೆಯ ತೊಂದರೆಯಾಗದ ಹಾಗೆ ಹೂಳೆತ್ತುವ ಕೆಲಸವನ್ನು ನಡೆಯಲಿದ್ದು, ಈ ಬಗ್ಗೆ ಅಧಿಕಾರಿಗಳು ಮೀನುಗಾರ ಮುಖಂಡರುಗಳೊಂದಿಗೆ ಸಮಾಲೋಚಿಸಿ ಅವರ ಸಹಕಾರವನ್ನೂ ಕೋರಿದ್ದಾರೆ.

           ಗಂಗೊಳ್ಳಿಯಲ್ಲಿ ಡ್ರೆಜ್ಜಿಂಗ್ ಕಾಮಗಾರಿಯ ಬಳಿಕ, ಬ್ರೇಕ್ ವಾಟರ್ ಕಾಮಾರಿಯನ್ನು ಪೂರ್ಣಗೊಳಿಸುವುದು, ಬೋಟುಗಳು ಲಂಗರು ಹಾಕಲು ಸರಿಯಾದ ವ್ಯವಸ್ಥೆ ಕಲ್ಪಿಸುವುದು, ಬಂದರಿಗೆ ತೆರಳುವ ರಸ್ತೆಗಳನ್ನು ಅಭಿವೃದ್ಧಿ ಪಡಿಸುವುದು ಅಗತ್ಯ. ಆ ಮೂಲಕ ಮೀನುಗಾರಿಕೆಗೆ ಅಗತ್ಯವಾದ ಮೂಲಸೌಕರ್ಯವನ್ನು ಒದಗಿಸುವಂತಾಗಬೇಕು. ಈ ನಿಟ್ಟಿನಲ್ಲಿ ಕೆಲವು ಕಾಮಗಾರಿಗೆ ಸರಕಾರ ಅನುಮೋದನೆ ನೀಡಿದೆ ಎಂಬುದು ಸಂತಸದ ವಿಚಾರ. ಒಟ್ಟಿನಲ್ಲಿ ನಿಶ್ಚಿಂತೆಯಿಂದ ಮೀನುಗಾರಿಕೆಗೆ ತೆರಳುವಂತಾದರೆ ಸಾಕು ಎನ್ನುತ್ತಾರೆ ಮೀನುಗಾರರು.

    ಕುಂದಾಪ್ರ ಡಾಟ್ ಕಾಂ- editor@kundapra.com

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಲಿ: ಡಾ. ಕೃಷ್ಣ ಕಾಂಚನ್

    18/12/2025

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಲಿ: ಡಾ. ಕೃಷ್ಣ ಕಾಂಚನ್
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.