ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಚೈತ್ರ ಶಾನುಭೋಗ್‌ಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: ಇತ್ತೀಚಿಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೇಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಮತ್ತು ರಾಜ್ಯದಲ್ಲಿ ನಾಲ್ಕನೇ ರ‍್ಯಾಂಕ್ ವಿಜೇತೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚೈತ್ರಾ ಶ್ಯಾನುಭಾಗ್ ಅವರನ್ನು ಶ್ರೀ ಬಸವೇಶ್ವರ ದೇವಸ್ಥಾನ ಮೇಲ್‌ಗಂಗೊಳ್ಳಿ, ಓಂ ಶ್ರೀ ಮಾತೃ ಮಂಡಳಿ ಮೇಲ್‌ಗಂಗೊಳ್ಳಿ ಗಂಗೊಳ್ಳಿ ಇವರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Call us

Click Here

ಗುಜ್ಜಾಡಿಯ ಅವರ ಸ್ವಗೃಹದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನ ಮೇಲ್‌ಗಂಗೊಳ್ಳಿ, ಓಂ ಶ್ರೀ ಮಾತೃ ಮಂಡಳಿ ಮೇಲ್‌ಗಂಗೊಳ್ಳಿ ಗಂಗೊಳ್ಳಿ ಇವರ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

ಯು. ರವೀಂದ್ರ ಶ್ಯಾನುಭಾಗ್, ಗೀತಾ ಆರ್.ಶ್ಯಾನುಭಾಗ್, ಮಾಜಿ ಮಂಡಳ ಪ್ರಧಾನ ಬಿ.ಸದಾನಂದ ಶೆಣೈ, ಸಮಾಜಸೇವಕ ಜಿ.ಗಣಪತಿ ಶಿಪಾ, ದೇವಸ್ಥಾನದ ಪ್ರಧಾನ ಅರ್ಚಕ ಜಗದೀಶ ಎಂ.ಜಿ., ದೇವಸ್ಥಾನದ ಅಧ್ಯಕ್ಷ ಶ್ರೀಧರ ಎನ್, ಕಾರ್ಯದರ್ಶಿ ಶಂಕರ ಎಂ.ಜಿ., ಮಾತೃ ಮಂಡಳಿ ಅಧ್ಯಕ್ಷೆ ಭೂದೇವಿ, ಗೌರವಾಧ್ಯಕ್ಷೆ ಪದ್ಮಾವತಿ, ಈಶ್ವರ ಜಿ. ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply