Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಶಿಕ್ಷಣ ಸಂಸ್ಥೆಗಳು
    ವಿಶೇಷ ವರದಿ

    ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಶಿಕ್ಷಣ ಸಂಸ್ಥೆಗಳು

    Updated:09/06/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    BM-Sukumar-Shettyಕುಂದಾಪ್ರ ಡಾಟ್ ಕಾಂ: ಕುಂದಾಪುರ ಪರಿಸರದಲ್ಲಿ ಗುಣಮಟ್ಟದ ಮತ್ತು ಮೌಲ್ಯಪೂರ್ಣ ಶೈಕ್ಷಣಿಕ ಅವಕಾಶಗಳು ವಿಪುಲವಾಗಿ ತೆರೆದುಕೊಳ್ಳದ ಕಾಲಘಟ್ಟದಲ್ಲಿ ಅಂದರೆ 1975ರ ವೇಳೆಗೆ ಹುಟ್ಟಿಕೊಂಡ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ. ಕುಂದಾಪುರದ ಹೃದಯ ಭಾಗದಲ್ಲಿ ತನ್ನ ನೆಲೆಯನ್ನು ಕಂಡುಕೊಂಡ ಈ ಸೊಸೈಟಿ ಮೊದಲು ಆರಂಭಿಸಿದ್ದು ನರ್ಸರಿ ತರಗತಿಯನ್ನು. ಇಂದು ಅದು ಪದವಿ ಶಿಕ್ಷಣದ ವರೆಗೆ ಬೆಳೆದು ನಿಂತು ರಾಜ್ಯದಾದ್ಯಂತ ತನ್ನ ಕೀರ್ತಿಯನ್ನು ಪಸರಿಸುತ್ತಿದೆ. ಕುಂದಾಪುರ ತಾಲೂಕಿನ ವಿಭಿನ್ನ ಗ್ರಾಮೀಣ ಪ್ರದೇಶಗಳ ಬಡಕುಟುಂಬಗಳನ್ನು ಪ್ರತಿನಿಧಿಸುವ ಪ್ರತಿ ಮಗುವಿಗೂ ಆಂಗ್ಲ ಮಾಧ್ಯಮ ಶಿಕ್ಷಣದ ಅವಕಾಶಗಳನ್ನು ತೆರೆದಿಡಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಜನ್ಮ ತಾಳಿದ ಈ ಸಂಸ್ಥೆ ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಸಾಮಾಜಿಕ ಬದ್ಧತೆಯೊಂದಿಗೆ ನಾಲ್ಕು ಶಿಕ್ಷಣ ಸಂಸ್ಥೆಗಳ ಮೂಲಕ ಶೈಕ್ಷಣಿಕ ಕ್ರಾಂತಿಯೊಂದಕ್ಕೆ ಕಾರಣವಾಗಿದೆ. ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ವಿದ್ಯಾರ್ಥಿಗಳ ಭಾಗವಹಿಸುವಿಕೆಗೆ ಸಂಸ್ಥೆಗಳಲ್ಲಿ ವಿಪುಲವಾದ ಅವಕಾಶಗಳಿದ್ದು, ಎಲ್ಲಾ ರಂಗದಲ್ಲಿಯೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಂಸ್ಥೆಯು ಗುರುತಿಸಿಕೊಂಡು ಎಲ್ಲರ ಗಮನ ಸೆಳೆದಿದೆ. ಕುಂದಾಪ್ರ ಡಾಟ್ ಕಾಂ.

    Click Here

    Call us

    Click Here

    ಶಿಕ್ಷಣ ಕ್ರಾಂತಿಯ ರೂವಾರಿ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ:
    ಕುಂದಾಪುರ ಎಜುಕೇಶನ್ ಸೊಸೈಟಿಯ ಯಶಸ್ಸಿನ ಹಿಂದಿನ ರೂವಾರಿ ಅದರ ಅಧ್ಯಕ್ಷರು ಹಾಗೂ ಸಂಚಾಲಕರಾದ ಶ್ರೀ ಬಿ. ಎಂ ಸುಕುಮಾರ ಶೆಟ್ಟಿಯವರು. ಕುಂದಾಪುರ ಎಜುಕೇಶನ್ ಸೊಸೈಟಿಯ ವ್ಯಾಪ್ತಿಯಲ್ಲಿ ಬರುವ ನಾಲ್ಕು ಸಂಸ್ಥೆಗಳನ್ನು ನಾಡಿನ ಮಾದರಿ ಸಂಸ್ಥೆಯಾಗಿ ರೂಪಿಸಿದ ಹೆಗ್ಗಳಿಕೆ ಇವರದ್ದು. ಸಮಾಜದ ಕಟ್ಟಕಡೆಯ ಮಗುವನ್ನೂ ವಿದ್ಯಾವಂತನನ್ನಾಗಿಸಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಹಗಲಿರುಳೂ ಶಿಕ್ಷಣ ಸಂಸ್ಥೆಗಳ ಏಳಿಗೆಗಾಗಿ ಶ್ರಮಿಸುತ್ತಿರು ಇವರ ಇಚ್ಛಾಶಕ್ತಿ ಜನಮೆಚ್ಚುಗೆಗೆ ಪಾತ್ರವಾಗಿದೆ. ಶಿಕ್ಷಣದ ಬಗ್ಗೆ ಅಪಾರ ಕಾಳಜಿ, ಕಳಕಳಿ ಹೊಂದಿರುವ ಶ್ರೀಯುತರು ತಮ್ಮ ಯೋಚನೆ, ಯೋಜನೆಗಳನ್ನು ಕಾರ್ಯರೂಪಕ್ಕಿಳಿಸಿ ಶಿಕ್ಷಣ ಸಂಸ್ಥೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದಾರೆ. ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ರೂಪಿಸಿದ ಈ ಸಂಸ್ಥೆಯಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವುದೇ ಶ್ರೀಯುತರ ದಕ್ಷ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಈ ಎಲ್ಲಾ ಸಂಸ್ಥೆಗಳನ್ನು ಕರ್ನಾಟಕ ರಾಜ್ಯದಲ್ಲಿಯೇ ಮಾದರಿ ಸಂಸ್ಥೆಯನ್ನಾಗಿ ರೂಪಿಸಬೇಕೆಂಬ ಉತ್ಕಟ ಹಂಬಲವನ್ನು ಅವರು ಹೊಂದಿದ್ದಾರೆ/ಕುಂದಾಪ್ರ ಡಾಟ್ ಕಾಂ/

    ಸಂಪರ್ಕಿಸಿ:

    • ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ 08254 231292
    • ವಿ.ಕೆ.ಆರ್.ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಪ್ರೌಢ ಶಾಲೆ 08254 231406
    • ಆರ್.ಎನ್. ಶೆಟ್ಟಿ. ಪಿ.ಯು. ಕಾಲೇಜು 08254 231501
    • ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು 08254 235588

    Like this:

    Like Loading...

    Related

    B.M Sukumar Shetty Coondapur Edication Society Dr. BB Hegde First grade college Kundapura H.M.M English medium School kundapura R.N Shetty PU College Kundapura V.K.R Acharya English medium School Kundapur
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d