Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ರಾಮಕ್ಷತ್ರಿಯ ಸಮಾಜದ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಪನ್ನ
    ಊರ್ಮನೆ ಸಮಾಚಾರ

    ಬೈಂದೂರು: ರಾಮಕ್ಷತ್ರಿಯ ಸಮಾಜದ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಪನ್ನ

    Updated:09/06/2016No Comments
    Facebook Twitter Pinterest LinkedIn WhatsApp Reddit Tumblr Email
    R
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಧರ್ಮದ ಕೇಂದ್ರವಾದ ಕುಟುಂಬವು ನಿಜವಾದ ವ್ಯವಸ್ಥೆಯ ಹೆಬ್ಬಾಗಿಲು. ಗ್ರಹಸ್ಥ ಜೀವನದಲ್ಲಿ ಧರ್ಮದ ಮೂಲಕ ಸಾಗಿದಾಗ ಸುಖ, ಶಾಂತಿ ಹಾಗೂ ನೆಮ್ಮದಿ
    ಶಾಶ್ವತವಾಗಿರುತ್ತದೆ. ಪತಿ-ಪತ್ನಿಯರ ಸಂಬಂಧ ಪಾವಿತ್ರತೆಯ ಭಾವವಿದ್ದು, ಮೌಲ್ಯಾಧಾರಿತವಾಗಿದೆ. ವಿವಾಹ ಇಲ್ಲದಿದ್ದರೆ ಕುಟುಂಬ ಕಳಚುವ ಸಾಧ್ಯತೆಗಳಿದೆ ಎಂದು ಸ್ವರ್ಣವಲ್ಲಿ
    ಮಠಾಧೀಶ ಶ್ರೀ ಗಂಗಾಧರೇಂದ್ರ ಸ್ವಾಮೀಜಿ ಹೇಳಿದರು.

    Click Here

    Call us

    Click Here

    ಬೈಂದೂರು ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಬೈಂದೂರು ರಾಮಕ್ಷತ್ರಿಯ ಸಮಾಜದ ೧೧ನೇ ವರ್ಷದ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ
    ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಭಗವಂತನ ಕಲ್ಯಾಣೋತ್ಸದಲ್ಲಿ ಹಲವಾರು ರೀತಿಯ ಪ್ರಯೋಜನಗಳಿದ್ದರೂ, ಸಮಾಜ ಸುಭೀಕ್ಷೆಯಾಗುತ್ತದೆ. ಅದರಿಂದ ನಾವು
    ನಮ್ಮ ಜೀವನದಲ್ಲಿ ಆದರ್ಶ, ತತ್ವ ಹಾಗೂ ಉತ್ತಮ ಚಿಂತನೆಗಳನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗುತ್ತದೆ. ಇದೊಂದು ಪುಣ್ಯದ ಕಾರ್ಯವಾಗಿದ್ದರಿಂದ ಮಂಗಳಕಾರ್ಯ,
    ಶುಭವಿವಾಹವೆಂದು ಸಂಭೋಧಿಸುತ್ತಾರೆ. ವಿವಾಹವೆಂಬುದು ಧರ್ಮ, ಅರ್ಥ, ಕಾಮಗಳನ್ನು ಅತಿಕ್ರಮಿಸಿ ಹೊಗುವುದಿಲ್ಲ ಎಂಬ ನೆಲೆಯಲ್ಲಿ ಸಂದೇಶ ಸಾರುವ ಪವಿತ್ರಬಂಧನವಾಗಿದೆ.
    ಆದರೆ ಇತ್ತೀಚಿಗೆ ಸಮಸ್ತ ಹಿಂದು ಸಮಾಜ ನಾಲ್ಕು ಅಂಶಗಳಲ್ಲಿ ತಪ್ಪು ಹೆಜ್ಜೆ ಇಡುತ್ತಿದೆ. ಸೂಕ್ತ ವಯಸ್ಸಿನಲ್ಲಿ ವಿವಾಹ ಆಗದಿರುವುದು, ವಿಚ್ಛೇದನ ಹೆಚ್ಚುತ್ತಿರುವುದು,
    ಭ್ರೂಣಹತ್ಯೆಯಂತಹ ಮಹಾಪಾಪದ ಕೆಲಸಕ್ಕೆ ಮನ ಮಾಡುತ್ತಿರುವುದು ಹಾಗೂ ಸಂತತಿ ನಿಯಂತ್ರಣಕ್ಕೆ ಆದ್ಯತೆ ನೀಡುತ್ತಿರುವುದು ಧರ್ಮವಲ್ಲ ಎಂದರು.

    ವರ್ಷದಿಂದ ವರ್ಷಕ್ಕೆ ಹಿಂದುಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಸ್ವಾಮೀಜಿ ಇದು ಒಳ್ಳೆ ಬೆಳವಣಿಗೆಯಲ್ಲ ಎಂದು ವಿಷಾದಿಸಿದರು. ಸರಕಾರದ ಜನಸಂಖ್ಯಾ
    ನಿಯಂತ್ರಣದ ಆದೇಶಗಳು ಕೇವಲ ಹಿಂದುಗಳಿಗಲ್ಲ. ಅನ್ಯ ಧರ್ಮಿಯರಿಗೂ ಅನ್ವಯಿಸುತ್ತದೆ. ಆದರೆ ಇವರು ಇಂತಹ ಯಾವುದು ಉದ್ದೇಶ ನಮ್ಮ ಧರ್ಮದಲ್ಲಿಲ್ಲ ಎಂದು
    ಪ್ರತಿಪಾದಿಸುತ್ತಾ ಬಂದಿದ್ದಾರೆ. ಇದು ಹೀಗೆ ಮುಂದುವರಿದರೆ ಹಿಂದುಸ್ಥಾನದಲ್ಲಿ ಹಿಂದುಗಳು ಅಲ್ಪಸಂಖ್ಯಾತರಾಗಬಹುದು. ಹೀಗಾಗಿ ಪ್ರತೀ ಕುಟುಂಬಗಳು ಕನಿಷ್ಟ ಮೂರು ಮಕ್ಕಳನ್ನು
    ಸಮಾಜಕ್ಕೆ ನೀಡುವಂತಾಗಬೇಕು ಎಂದರು.

    ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಅಧ್ಯಕ್ಷತೆವಹಿಸಿದ್ದರು. ನಿವೃತ್ತ ಕರ್ನಲ್ ಡಿ.ಕೆ. ನರಸಿಂಹ ನಾಯಕ್, ಧಾರ್ಮಿಕ, ಸಾಮಾಜಿಕ ಮುಖಂಡ ಬಿ. ರಾಮಕೃಷ್ಣ ಶೇರೆಗಾರ್, ಬೈಂದೂರು
    ರಾಮಕ್ಷತ್ರಿಯ ಸಮಾಜದ ಅಧ್ಯಕ್ಷ ಬಿ. ಗೋಪಾಲ್ ನಾಯಕ್, ಮಂಗಳೂರು ಉದ್ಯಮಿ ರಾಮಚಂದ್ರ ಕೆ. ಎಸ್., ತಾಪಂ ಸದಸ್ಯೆ ಮಾಲಿನಿ ಕೆ ಉಪಸ್ಥಿತರಿದ್ದರು.

    ಕೇಶವ ನಾಯಕ್ ಸ್ವಾಗತಿಸಿ, ಗಣಪತಿ ಎಸ್. ವಂದಿಸಿದರು. ಗಣಪತಿ ಹೋಬಳಿದಾರ್ ನಿರೂಪಿಸಿದರು. ಬೆಳಿಗ್ಗೆ ಕಟ್ಟೆ ಪರಮೇಶ್ವರ ಭಟ್ಟರ ನೇತೃತ್ವದಲ್ಲಿ ೧೦.೪೫ಕ್ಕೆ ಕರ್ಕಾಟಕ ಲಗ್ನ
    ಸುಮುಹೂರ್ತದಲ್ಲಿ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಜರುಗಿತು. ಶಶಿಕಲಾ ಮತ್ತು ಬಿ. ಗೋಪಾಲ್ ನಾಯಕ್ ಹಾಗೂ ವಿನೋದಿನಿ ಮಂಜುನಾಥ ದುಬಾರಿ ದಂಪತಿಗಳು
    ಸೇವಾಕರ್ತರಾಗಿ ಕಾರ್ಯ ನಿರ್ವಹಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    19 − 3 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.