Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯ ವೃತ್ತಿಪರ ಶಿಕ್ಷಣ ಪದವೀಧರರ ಸಂಘ ರಾಜ್ಯ ಸಮಾವೇಶ ಉದ್ಘಾಟನೆ
    Uncategorized

    ರಾಜ್ಯ ವೃತ್ತಿಪರ ಶಿಕ್ಷಣ ಪದವೀಧರರ ಸಂಘ ರಾಜ್ಯ ಸಮಾವೇಶ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಪದವೀಧರರ ಬೇಡಿಕೆ ಈಡೇರಿಕೆಗೆ ಪ್ರಯತ್ನ: ಸಚಿವ ಕಿಮ್ಮನೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಶಿವಮೊಗ್ಗ: ಕರ್ನಾಟಕ ರಾಜ್ಯದಲ್ಲಿನ ಡಿ.ಇಡಿ., ಬಿ.ಇಡಿ., ಬಿ.ಪಿ.ಇಡಿ., ಎಂ.ಇಡಿ. ಎಂ.ಪಿ.ಇಡಿ. ಮುಂತಾದ ಶಿಕ್ಷಣ ಪದವೀಧರರ ನಿರುದ್ಯೋಗ ಮತ್ತು ಅಭದ್ರತೆ ನಿವಾರಣೆಗೆ ಕ್ರಮ, ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕ ಹುದ್ದೆ ಭರ್ತಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕ ಹುದ್ದೆ ಭರ್ತಿ, ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ರಾಜ್ಯ ಸರಕಾರದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ನೇಮಿಸಿಕೊಂಡ ೩೦ ಸಾವಿರ ಅತಿಥಿ ಶಿಕ್ಷಕರಿಗೆ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ರೂ. ೧೩೬೫೦ ವೇತನ ಮತ್ತು ಪಿ.ಎಫ್. ಹಾಗೂ ಇ.ಎಸ್.ಐ. ವ್ಯವಸ್ಥೆ ಜಾರಿ, ಖಾಸಗಿ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸರಕಾರದ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆ, ಡಿ.ಇಡಿ., ಬಿ.ಇಡಿ. ಹಾಗೂ ಎಂ.ಇಡಿ. ಪದವೀಧರ ಶಿಕ್ಷಕರಿಗೆ ಉದ್ಯೋಗ ಭದ್ರತೆ ಅಥವಾ ನಿರುದ್ಯೋಗ ಭತ್ಯೆ ನೀಡಿಕೆ ಸೇರಿದಂತೆ ಹಲವು ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಾಗೂ ರಾಜ್ಯದ ಪದವೀಧರರ ಸರ್ವಾಂಗೀಣ ಅಭ್ಯುದಯದ ಧ್ಯೇಯದೊಂದಿಗೆ ಹುಟ್ಟಿಕೊಂಡ ಕರ್ನಾಟಕ ರಾಜ್ಯ ವೃತ್ತಿಪರ ಶಿಕ್ಷಣ ಪದವೀಧರರ ಸಂಘ (ರಿ.) ಇದರ ಪ್ರಥಮ ಸಂಸ್ಥಾಪನಾ ರಾಜ್ಯ ಸಮಾವೇಶ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜರಗಿತು.

    ಸಮಾವೇಶವನ್ನು ಉದ್ಘಾಟಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು, ವೃತ್ತಿಪರ ಶಿಕ್ಷಣ ಪದವೀಧರರ ಬೇಡಿಕೆಗಳ ಕುರಿತಾದ ಮನವಿಯನ್ನು ಸ್ವೀಕರಿಸಿ ಮಾತನಾಡಿ ರಾಜ್ಯದ ವೃತ್ತಿಪರ ಶಿಕ್ಷಣ ಪದವೀಧರರ ಬೇಡಿಕೆ ಹಾಗೂ ಸಮಸ್ಯೆಗಳಿಗೆ ಸರಕಾರ ಪ್ರಾಮಾಣಿಕವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಯವರೊಂದಿಗೆ ಸೂಕ್ತ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.

    ರಾಜ್ಯದಲ್ಲಿ ಡಿ.ಇಡಿ., ಬಿ.ಇಡಿ., ಬಿ.ಪಿ.ಇಡಿ., ಎಂ.ಇಡಿ. ಎಂ.ಪಿ.ಇಡಿ. ಸೇರಿದಂತೆ 8 ಲಕ್ಷಕ್ಕೂ ಹೆಚ್ಚು ಪದವೀಧರರಿದ್ದು, ಅವರೆಲ್ಲರಿಗೂ ಉದ್ಯೋಗ ಕಲ್ಪಿಸುವುದು ಅಸಾಧ್ಯ. ಸರಕಾರದ ಆರ್ಥಿಕ ಮಿತಿಯಲ್ಲಿ ಇದು ಸಾಧ್ಯವಿಲ್ಲದ ಮಾತು. ಪ್ರಸ್ತುತ ೬ ಲಕ್ಷ ಸರಕಾರಿ ನೌಕರರ ಸಂಬಳ, ಸಾರಿಗೆ ಮತ್ತು ಭತ್ಯೆಗೆ ರಾಜ್ಯದ ಆದಾಯದಲ್ಲಿ ಶೇ. ೪೦ರ40ಷ್ಟು ಹೋಗುತ್ತದೆ. ರಾಜ್ಯದಲ್ಲಿ ಎಲ್ಲ ಇಲಾಖೆಗಳಲ್ಲಿ ಖಾಲಿಯಿರುವ 2.30 ಲಕ್ಷ ಹುದ್ದೆಗಳನ್ನು ತುಂಬಲು ಹೋದರೆ ಸರಕಾರಕ್ಕೆ ಆರ್ಥಿಕ ಹೊರೆಯಾಗುತ್ತದೆ. ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ಅಂದಾಜು 1 ಲಕ್ಷ ಹುದ್ದೆ ಖಾಲಿ ಇದ್ದು, ಏಕಕಾಲಕ್ಕೆ ಎಲ್ಲ ಹುದ್ದೆಗಳಿಗೂ ನೇಮಕಾತಿ ಕಷ್ಟ ಎಂದರು. ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಜವಾನರ ಹುದ್ದೆಯಲ್ಲಿರುವವರು ನಿವೃತ್ತರಾದ ಬಳಿಕ ಆ ಹುದ್ದೆಗಳು ಭರ್ತಿಯಾಗಿಲ್ಲ. ಪ್ರಸ್ತುತ 1ರಿಂದ 12ನೇ ತರಗತಿವರೆಗೆ ೩೦ ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದೆ. ಈಗ 12 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ ಸಚಿವರು, ಸಂಘದ ಪದಾಧಿಕಾರಿಗಳು ನಿಖರವಾದ ಬೇಡಿಕೆಗಳನ್ನು ಸಿದ್ಧಪಡಿಸಿ ಸಚಿವರ ಕಚೇರಿಗೆ ಬಂದರೆ ಇಲಾಖಾ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಲು ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

    ೨೦೧೫-೧೬ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿ ಹಾಗೂ ರ‍್ಯಾಂಕ್ ಪಡೆದ ಪ್ರತಿಭಾನ್ವಿತರನ್ನು ಸಚಿವ ಕಿಮ್ಮನೆ ಅವರು ಈ ಸಂದರ್ಭದಲ್ಲಿ ಸಮ್ಮಾನಿಸಿದರು. ಸಂಘದ ಪರವಾಗಿ ಕಿಮ್ಮನೆ ಅವರನ್ನು ಈ ಸಮ್ಮಾನಿಸಿ ಗೌರವಿಸಲಾಯಿತು. ಸಂಘದ ಗೌರವಾಧ್ಯಕ್ಷ ರಾಜಶೇಖರಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಸಾಹಿತಿ ನಾ. ಡಿಸೋಜ, ರೈತ ಮುಖಂಡ ಕಡಿದಾಳು ಶಾಮಣ್ಣ, ಸಂಘದ ಅಧ್ಯಕ್ಷ ಯಲ್ಲಪ್ಪ ಎಂ., ಪ್ರಧಾನ ಕಾರ್ಯದರ್ಶಿ ಶ್ಯಾಮಸುಂದರ್, ಡಾ. ಕೆ. ಎಂ. ಸುರೇಶ್, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ, ಸಂಘದ ಪದಾಧಿಕಾರಿಗಳಾದ ನಾರಾಯಣಸ್ವಾಮಿ ಎಂ. ಎನ್., ನೀಲಕಂಠ ಸಿ. ಹಿರೇಮಠ, ಪದ್ಮಾ ಎನ್. ಸಿ., ರವಿಕುಮಾರ್ ಎಚ್. ಎಸ್., ದಾವುಲಮುನ್ನಿ ಇ. ಕಿಲ್ಲೇದಾರ್, ಹನುಮಂತಪ್ಪ, ಮಮತಾರಾಣಿ ಎಸ್., ಎಂ. ರಂಗಸ್ವಾಮಿ, ವೀರೇಶ್ ಎಸ್. ಬಣಕಾರ್, ಆರತಿ ಎ. ಘಟಕಾಂಬ್ಳೆ, ಕೆ. ಆರ್. ಸ್ನೇಹಾ, ಕೃಷ್ಣಾ ಪಿ. ಮಾಳಗಿಮನಿ, ದೇವಿ ಎ., ಮಂಜಮ್ಮ, ಸುರೇಶ್ ಎಂ. ಮಾಲೂರು ಮೊದಲಾದವರು ಉಪಸ್ಥಿತರಿದ್ದರು. ಸಂಘದ ಜಂಟಿ ಕಾರ್ಯದರ್ಶಿ ಚಂದ್ರ ಕೆ. ಹೆಮ್ಮಾಡಿ ಅವರು ಪ್ರಾರ್ಥಿಸಿದರು. ಶರಣಪ್ಪ ಕೆ. ಅವರು ಸ್ವಾಗತಿಸಿದರು. ಯಲ್ಲಪ್ಪ ಎಂ. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕೊಟ್ರೋಜಿ ರಾವ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ಬಿ. ಬಸವರಾಜ್ ಅವರು ವಂದಿಸಿದರು.

    Click here

    Click here

    Click here

    Call us

    Call us

    ಚಿತ್ರ ವರದಿ: ಚಂದ್ರ ಕೆ. ಹೆಮ್ಮಾಡಿ

    news kspeg13 news kspeg12

    Like this:

    Like Loading...

    Related

    Chandra K Hemmady
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d