ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಮೀಪದ ಕೊಡೇರಿ ಬಂದರು ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾಗಿದ್ದು, ಮೃತರನ್ನು ಕೇರಳ ಮಂಜೇಶ್ವರದ ಸಂತೋಷ್ (43) ಎಂದು ಗುರುತಿಸಲಾಗಿದೆ.
ಕೊಡೇರಿಯ ಕಿನಾರೆಯಲ್ಲಿ ಮೃತದೇಹವನ್ನು ಕಂಡ ಸ್ಥಳೀಯರೋರ್ವರು ಪೊಲೀಸರಿಗೆ ಮಾಹಿತಿ ನೀಡಿದ್ದು ಬೈಂದೂರು ಶವಾಗಾರಕ್ಕೆ ಸಾಗಿಸಲಾಗಿದೆ.