Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಹೋಬಳಿ ಮಟ್ಟದ ಕೃಷಿ ಅಭಿಯಾನ
    Uncategorized

    ಬೈಂದೂರು ಹೋಬಳಿ ಮಟ್ಟದ ಕೃಷಿ ಅಭಿಯಾನ

    Updated:25/06/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ದೇಶದಲ್ಲಿ ಜನಸಂಖ್ಯೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಹಾರ ಭದ್ರತೆ ನೀಡಲು ಸಾಗುವಳಿ ಜಮೀನಿನಲ್ಲಿ ಗರಿಷ್ಟ ಕೃಷಿ ಆಹಾರ ಉತ್ಪಾದನೆಯ ಅಗತ್ಯವಿದೆ. ರೈತರು ಕೇವಲ ಒಂದೇ ಬೆಳೆಯನ್ನು ನಂಬಿಕೊಳ್ಳದೇ ಸಮಗ್ರ ಕೃಷಿಗೆ ಪೂರಕವಾದ ಉಪಕಸಬುಗಳನ್ನು ಅಳವಡಿಸಿಕೊಳ್ಳುವ ಅನಿವಾರ್ಯತೆಯಿದೆ. ಈಗಾಗಲೇ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಮಟ್ಟಕ್ಕೆ ಅಧಿಸೂಚನೆ ನೀಡಲಾಗಿದೆ ಎಂದು ಜಿಪಂ ಸದಸ್ಯ ಶಂಕರ ಪೂಜಾರಿ ಹೇಳಿದರು.

    Click Here

    Call us

    Click Here

    ಗೋಳಿಹೊಳೆ ಶ್ರೀ ಮಹಿಷಮರ್ಧಿನಿ ಸಭಾಭವನದಲ್ಲಿ ಉಡುಪಿ ಜಿಪಂ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖಾ ಸಹಯೋಗದಲ್ಲಿ ಬೈಂದೂರು ಹೋಬಳಿ ಮಟ್ಟದಲ್ಲಿ ನಡೆದ ಕೃಷಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಇಂದಿನ ಕಾಲಘಟ್ಟದಲ್ಲಿ ರೈತರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಒಂದೆಡೆ ಕಾಡುಪ್ರಾಣಿಗಳ ಹಾವಳಿ, ಕೃಷಿ ಕಾರ್ಮಿಕರ ಕೊರತೆಯಿದ್ದರೆ ಇನ್ನೊಂದೆಡೆ ತಮ್ಮ ಬೆಳೆಗೆ ಸೂಕ್ತವಾದ ಮಾರುಕಟ್ಟೆ ಮತ್ತು ಬೆಲೆ ಪಡೆಯಲು ಹರಸಾಹಸ ಪಡೆಯುವ ಸ್ಥಿತಿಯಲ್ಲಿದ್ದಾರೆ. ಈ ನೆಲೆಯಲ್ಲಿ ಕೃಷಿ ಸಂಬಂಧಿತ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೃಷಿಯ ಕುರಿತಾದ ಸಮಗ್ರ ಮಾಹಿತಿ, ಸರಕಾರದ ಯೋಜನೆಗಳನ್ನು ರೈತರಿಗೆ ಮನವರಿಕೆ ಮಾಡುವುದರ ಮೂಲಕ ಅವರಿಗೆ ಸ್ಪಂದಿಸಬೇಕು. ಬೆಳೆವಿಮೆ, ಬೆಳೆ ನಷ್ಟಕ್ಕೆ ಪರಿಹಾರ ತ್ವರಿತವಾಗಿ ಸಿಗುವ ಹಾಗೆ ನೆರವಾಗಬೇಕು. ನಮ್ಮಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಕೂಡಾ ಕೃಷಿಯನ್ನು ಉಳಿಸಿಕೊಳ್ಳುವ ಅನಿವಾರ್ಯತೆಯಿದೆ. ಹೊಸ ಆವಿಷ್ಕಾರಗಳ ಮೂಲಕ ಯೋಜನೆ ಹಾಗೂ ಪೂರಕ ಅಂಶಗಳಿಂದ ಕೃಷಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಬಹುದು. ಆಗ ಮಾತ್ರ ಯುವ ಪೀಳಿಗೆ ಕೃಷಿಯಿಂದ ವಿಮುಖರಾಗದಂತೆ ತಡೆಯಬಹುದು ಎಂದರು.

    ಗೋಳಿಹೊಳೆ ಗ್ರಾಪಂ ಅಧ್ಯಕ್ಷ ರಾಜು ಪೂಜಾರಿ ಅಧ್ಯಕ್ಷತೆವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ, ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿದರು. ಈ ಸಂದರ್ಭ ಸ್ಥಳೀಯ ಪ್ರಗತಿಪರ ರೈತ ತಿಮ್ಮಣ್ಣ ಹೆಗಡೆಯವರನ್ನು ಸನ್ಮಾನಿಸಲಾಯಿತು. ತಾಪಂ ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ ಕಡ್ಕೆ ಕೃಷಿ ಅಭಿಯಾನದ ಸಂಚಾರಿ ಟ್ಯಾಬ್ಲೊ ಉದ್ಘಾಟಿಸಿದರು. ಜಿಪಂ ಸದಸ್ಯರಾದ ಬಟ್ವಾಡಿ ಸುರೇಶ್ ರೈತರಿಗೆ ಮಣ್ಣಿನ ಪ್ರಮಾಣಪತ್ರ ಹಾಗೂ ಗೌರಿ ದೇವಾಡಿಗ ನಾಲ್ಕು ಫಲಾನುಭವಿಗಳಿಗೆ ಟಿಲ್ಲರ್ ವಿತರಿಸಿದರು.

    ತಾಪಂ ಸದಸ್ಯರಾದ ಪುಷ್ಪರಾಜ ಶೆಟ್ಟಿ, ಗಿರಿಜಾ ಖಾರ್ವಿ, ಸುಜಾತಾ ದೇವಾಡಿಗ, ಮಾಲಿನಿ ಕೆ., ಪ್ರಮಿಳಾ ದೇವಾಡಿಗ, ಜಗದೀಶ ದೇವಾಡಿಗ, ಮಹೇಂದ್ರ ಪೂಜಾರಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬ್ರಹ್ಮಾವರ ಕೆ.ವಿ.ಕೆ ಗೃಹ ವಿಜ್ಞಾನ ಸಹಪ್ರಧ್ಯಾಪಕ ಡಾ. ಸತೀಶ್ ಬಿ. ಮತ್ತು ಕಾರ್ಯಕ್ರಮ ಸಂಯೋಜಕ ಡಾ. ಧನಂಜಯ್ ಉಪಸ್ಥಿತರಿದ್ದರು.
    ಜಂಟಿ ಕೃಷಿ ನಿರ್ದೇಶಕ ಚಂದ್ರಶೇಖರ್ ನಾಯ್ಕ್ ಪ್ರಾಸ್ತಾವಿಸಿದರು. ಸಹಾಯಕ ಕೃಷಿ ಅಧಿಕಾರಿಗಳಾದ ಗಾಯತ್ರಿದೇವಿ ಸ್ವಾಗತಿಸಿ, ವಿಠಲ ರಾವ್ ವಂದಿಸಿದರು. ದಿನೇಶ ವಿ ನಿರೂಪಿಸಿದರು. ನಂತರ ರೈತರೊಂದಿಗೆ ಕೃಷಿ ವಿಜ್ಞಾನಿಗಳು ಹಾಗೂ ಕೃಷಿ ಅಧಿಕಾರಿಗಳು ಸಂವಾದ ಕಾರ್ಯಕ್ರಮ ನಡೆಸಿದರು.
    news Agriculture Programme-1 news Agriculture Programme-4

    Gowri Devadiga Malini K Shankar Poojary ZP member Byndoor Shrinivas Poojary Suresh Batwadi
    Share. Facebook Twitter Pinterest LinkedIn Tumblr Telegram Email
    Kundapra.com

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026
    Leave A Reply Cancel Reply

    nine + ten =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.