Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಮಲೇರಿಯಾ ಜಾಗೃತಿ ಜಾಥಾ ಮತ್ತು ಸ್ವಚ್ಚತಾ ಸಪ್ತಾಹ
    ಕುಂದಾಪ್ರದ್ ಸುದ್ಧಿ

    ಕುಂದಾಪುರ: ಮಲೇರಿಯಾ ಜಾಗೃತಿ ಜಾಥಾ ಮತ್ತು ಸ್ವಚ್ಚತಾ ಸಪ್ತಾಹ

    Updated:26/06/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ ಕುಂದಾಪುರ, ರೊಟರಿ ಕ್ಲಬ್ ಕುಂದಾಪುರ ದಕ್ಷಿಣ ಇವುಗಳ ಸಹಯೋಗದಲ್ಲಿ ತಾಲೂಕು ಮಟ್ಟದ ಮಲೇರಿಯಾ ಮಾಸಾಚರಣೆ ಮತ್ತು ಸ್ವಚ್ಚತಾ ಸಪ್ತಾಹ ಇಲ್ಲಿನ ಶಾಸ್ತ್ರಿ ವೃತ್ತದಲ್ಲಿರುವ ಶಾಲೋಮ್ ಸಭಾಗಂಣದಲ್ಲಿ ನಡೆಯಿತು.

    Click Here

    Call us

    Click Here

    ಸಭೆಗೂ ಮುನ್ನ ನಡೆದ ಜಾಗೃತಿ ಜಾಥಾವನ್ನು ಪುರಸಭಾಧ್ಯಕ್ಷೆ ವಸಂತಿ ಮೋಹನ ಸಾರಂಗ್ ಹಸಿರು ಬಾವುಟ ಪ್ರದರ್ಶಿಸಿ ಚಾಲನೆ ನೀಡಿದರು. ಜಾಥಾವು ಶಾಸ್ತ್ರೀ ಸರ್ಕಲ್‌ನಿಂದ ಶಾಲೋಮ್ ಸಭಾಂಗಣದವರೆಗೆ ಸಾಗಿತು.

    ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ರೋಹಿಣಿ, ಸೊಳ್ಳೆಗಳ ಉತ್ಪತ್ತಿಯಾಗುವುದು ಮಳೆಗಾಲದ ಆರಂಭದಲ್ಲಿ ಈ ಸಂದರ್ಭ ಎಲ್ಲಿಯೂ ನೀರು ನಿಲ್ಲದಂತೆ ಜಾಗೃತೆವಹಿಸಬೇಕು, ಕಳೆದೆರಡು ವರ್ಷಗಳಿಂದ ಮಲೇರಿಯಾ ತೊಂದರೆ ಕುಂದಾಪುರದಲ್ಲಿ ಕಡಿಮೇ ಇದೆ ಎಕೆಂದರೆ ಕಟ್ಟಡ ಕಾಮಗಾರಿಗಳು ನಡೆಯುತ್ತಿರುವುದು ಕಡಿಮೇಯಾಗಿದೆ. ಕಳೆದೆರಡು ವರ್ಷಗಳ ಹಿಂದೆ ಕುಂದಾಪುರ ಕಾರ್ಕಳದಲ್ಲಿ ಅಧಿಕ ಪ್ರಮಾಣದಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳು ವರದಿಯಾಗಿದ್ದವು ಎಂದರು. ಕುಂದಾಪುರ ಪುರಸಭೆ ಉಪಾಧ್ಯಕ್ಷ ರಾಜೇಶ್ ಕಾವೇರಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ತಮ್ಮ ಜೀವನ ಕ್ರಮವನ್ನು ಬದಲಾಯಿಸಿಕೊಳ್ಳಬೇಕು. ಇಂದಿನ ಮಕ್ಕಳು ಬೀದಿ ಬದಿಯ ತಿನಿಸುಗಳನ್ನು ಸೇವನೆ ಮಾಡಿ ಆರೋಗ್ಯ ಹಾನಿ ಮಾಡಿಕೊಳ್ಳುತ್ತಿದ್ದಾರೆ. ಬೀದಿ ಬದಿಯ ಆಹಾರಗಳು ತಿನ್ನಲು ರುಚಿ ನೀಡಿದರೂ ಆ ನಂತರ ಆರೋಗ್ಯಕ್ಕೆ ಮಾಡುವ ಹಾನಿ ಭಯಾನಕವಾಗಿದೆ. ಈ ಬಗ್ಗೆ ಮಕ್ಕಳು ಎಚ್ಚೆತ್ತುಕೊಳ್ಳಬೇಕು ಎಂದರು. ಹೋಟೇಲ್‌ಗಳು ಶುಚಿತ್ವ ಕಾಪಾಡುವಲ್ಲಿ ನಿರ್ಲರ್ಕ್ಯವಹಿಸುತ್ತಿದ್ದು. ಆರೋಗ್ಯ ಇಲಾಖೆ ಆಗಾಗ ಹೊಟೆಲ್‌ಗಳಿಗೆ ದಾಳಿ ನಡೆಸಿ, ತಪ್ಪಿತ್ತಸ್ಥರ ವಿರುದ್ದ ಕ್ರಮ ಕೈಗೊಂಡಾಗ ಮಾತ್ರ ಶುಚಿತ್ವ ಆರೋಗ್ಯಕರ ಆಹಾರ ಸಾರ್ವಜನಿಕರಿಗೆ ಲಭ್ಯವಾಗುತ್ತದೆ ಈ ಕುರಿತು ಗಮನಹರಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ರೋಹಿಣಿಯವರಿಗೆ ರಾಜೇಶ್ ಕಾವೇರಿ ಮನವಿ ಮಾಡಿದರು.

    ಪುರಸಭಾಧ್ಯಕ್ಷೆ ವಸಂತಿ ಮೋಹನ ಸಾರಂಗ್ ವಹಿಸಿದ್ದರು. ವೇದಿಕೆಯಲ್ಲಿ ಪುರಸಭಾ ಸದಸ್ಯರಾದ ಪುಷ್ಪಾ ಶೇಟ್, ಗುಣರತ್ನ, ಶಕುಂತಳಾ ಗುಲ್ವಾಡಿ, ಸಿಸಿಲಿಯಾ ಕೋಟ್ಯಾನ್, ರೋಟರಿ ನಿಕಟಪೂರ್ವ ಅಧ್ಯಕ್ಷ ಕೆಪಿ ಭಟ್, ಉದ್ಯಮಿ ಅಬ್ದುಲ್ ಬಶೀರ್, ಸದಾನಂದ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು,ತಾಲೂಕು ಆರೋಗ್ಯಾಧಿಕಾರಿ ಡಾ|ಚಿದಾನಂದ ಸಂಜು ಪ್ರಾಸ್ತಾವಿಕ ಮಾತನ್ನಾಡಿದರು. ಅಜೆಯ್ ಭಂಢಾರ್ಕರ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ನಂತರ ವಿದ್ಯಾರ್ಥಿಗಳಿಗೆ ಡಾ|ಪ್ರೇಮಾನಂದ ಮಲೇರಿಯಾ ಕಾಯಿಲೆಯ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮಕ್ಕೆ ಸ್ಥಳೀಯ ಕಾಲೇಜಿನ ಸುಮಾರು ೨೫೦ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.