ಜೇಸಿಐ ಮಧ್ಯಂತರ ಸಮ್ಮೇಳನ ರಜತ ದೀವಿಗೆಯಲ್ಲಿ ಕುಂದಾಪುರ ಸಿಟಿ ಜೆಸಿಐಗೆ ಹಲವು ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜೇಸಿಐ ಕಾಪು ಸಾರಥ್ಯದಲ್ಲಿ ನಡೆದ ಜೇಸೀ ವಲಯ 15ರ ಮಧ್ಯಂತರ ಸಮ್ಮೇಳನ ರಜತ ದೀವಿಗೆ-2016ರಲ್ಲಿ ಕುಂದಾಪುರ ಸಿಟಿ ಜೆಸಿಐ ಅತ್ಯುತ್ತಮ ಘಟಕ ಅಧ್ಯಕ್ಷ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಗೌರವಗಳನ್ನು ಮುಡಿಗೇರಿಸಿಕೊಂಡಿದೆ.

Call us

Click Here

ಕಾಪು ಕಳತ್ತೂರಿನ ಕುಶಲ ಶೇಖರ ಶೆಟ್ಟಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ, ಅತ್ಯುತ್ತಮ ವಿಶೇಷ ಕಾರ್ಯಕ್ರಮ ಸಂಯೋಜನೆ ಪ್ರಶಸ್ತಿ ಮತ್ತು ವಿವಿಧ ವಿಭಾಗಗಳ ಹಲವು ಗೌರವಗಳಿಗೆ ಪಾತ್ರವಾಗಿದೆ. ಜೆಸಿಐ ವಲಯಾಧ್ಯಕ್ಷ ಸಂದೀಪ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ವಲಯ ಉಪಾಧ್ಯಕ್ಷ ನಿತೀನ್ ಅವಭೃತ್, ಮಾಜಿ ವಲಯಾಧ್ಯಕ್ಷ ಕೃಷ್ಣ ಮೋಹನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

ಕುಂದಾಪುರ ಸಿಟಿ ಜೆಸಿಐ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ ಹಾಗೂ ರಾಘು ಕೆ.ಸಿ., ಹರ್ಷ ಶೇಟ್, ಅನಂತ ನಾವಡ, ಕಾರ್ತಿಕ್, ಅನುಷಾ ಗಂಗೊಳ್ಳಿ, ಮೊದಲಾದವರು ಕುಂದಾಪುರ ಸಿಟಿ ಜೆಸಿಐ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು /ಕುಂದಾಪ್ರ ಡಾಟ್ ಕಾಂ ಸುದ್ದಿ/

JCI Kundapura city got many awards in Rajata divige 2016 kapu (2)

Leave a Reply