Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ : ಜ್ಯುವೆಲರ್ ದರೋಡೆ ಪ್ರಕರಣ ಓರ್ವ ಆರೋಪಿ ಬಂಧನ
    ಅಪಘಾತ-ಅಪರಾಧ ಸುದ್ದಿ

    ಕೋಟ : ಜ್ಯುವೆಲರ್ ದರೋಡೆ ಪ್ರಕರಣ ಓರ್ವ ಆರೋಪಿ ಬಂಧನ

    Updated:27/06/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕೋಟ: ಕೋಟದ ಮುಖ್ಯ ಪೇಟೆಯೊಂದರ ಜ್ಯುವೆಲರ್ಗೆ ನುಗ್ಗಿ ಮಾಲೀಕನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬುಧವಾರ ಕೋಟ ಪೊಲೀಸರು ಗೋವಾದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಕರೆತಂದಿದ್ದಾರೆ.

    Click Here

    Call us

    Click Here

    ಗೋವಾ ಮೂಲದ ಚಂದ್ರಕಾಂತ ಬಂಧಿತ ಆರೋಪಿ. ಪ್ರಕರಣದಲ್ಲಿ ಮೂರು ಮಂದಿ ಭಾಗಿಯಾಗಿದ್ದು ಇನ್ನೋರ್ವ ಆರೋಪಿ ಪ್ರಥಮೇಶ್‌ ಕುರಿತು ಮಾಹಿತಿ ದೊರೆತಿದೆ ಎನ್ನಲಾಗಿದೆ ಹಾಗೂ ಮತ್ತೋರ್ವ ತಲೆ ಮರೆಸಿಕೊಂಡಿದ್ದಾನೆ.

    ಪ್ರಕರಣದ ವಿವರ: ಕೋಟದ ದುರ್ಗಾ ಜ್ಯುವೆಲರ್ಗೆ ಮೇ21ರಂದು ಗ್ರಾಹಕರ ಸೋಗಿನಲ್ಲಿ ಬಂದ ಮೂರು ಮಂದಿ ಯುವಕರು ಅಂಗಡಿಯ ಬಾಗಿಲನ್ನು ಮುಚ್ಚಿ ಮಾಲೀಕ ರವಿಯವರಿಗೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ದೋಚಲಾಗಿತ್ತು. ಹಲ್ಲೆ ನಡೆಯುತ್ತಿದ್ದಾಗ ರವಿಯವರು ಸಹಾಯಕ್ಕಾಗಿ ಕೂಗಿಕೊಂಡಿದ್ದು ಪಕ್ಕದ ಅಂಗಡಿಯವರು ಬಾಗಿಲು ತೆರದು ರಕ್ಷಣೆಗೆ ಮುಂದಾಗಿದ್ದರು. ಈ ಸಂದರ್ಭ ಇಬ್ಬರು ಆರೋಪಿಗಳು ಬೈಕ್‌ನಲ್ಲಿ ಪರಾರಿಯಾಗಿದ್ದು, ಮತ್ತೋರ್ವ ಬೈಕ್‌ ಬಿಟ್ಟು ಪಕ್ಕದ ಬೀದಿಯಲ್ಲಿ ಓಡಿ ಹೋಗಿದ್ದ. ಅನಂತರ ಗಂಭೀರವಾಗಿ ಗಾಯಗೊಂಡ ಜ್ಯುವೆಲರ್ನ ಮಾಲೀಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

    ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿ: ಆರೋಪಿಗಳು ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಗೋವ ಸೇರಿದಂತೆ ಹಲವು ಕಡೆ ಇವರ ಮೇಲೆ ಪ್ರಕರಣಗಳಿದೆ ಎನ್ನಲಾಗಿದೆ. ಇವರು ದುಷ್ಕೃತ್ಯದ ಅನಂತರ ಸಾಕಷ್ಟು ಬುದ್ಧಿವಂತಿಕೆ ಪ್ರದರ್ಶಿಸುತ್ತಿದ್ದರು ಹಾಗೂ ಮೊಬೈಲ್‌ ಬಳಕೆ ಮಾಡದೆ ಒಂದು ಕಡೆ ನಿಲ್ಲದೆ ಪ್ರಯಾಣ ಬೆಳೆಸುತ್ತಿದ್ದರು ಎನ್ನಲಾಗಿದೆ.

    ಕೋಟ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಸಾಕಷ್ಟು ಶ್ರಮ ವಹಿಸಿದ್ದಾರೆ. ಆರೋಪಿಗಳು ಕೋಟದಲ್ಲಿ ದುಷ್ಕೃತ್ಯ ನಡೆಸಿದ ಮೇಲೆ ಕೇರಳಕ್ಕೆ ತೆರಳಿ ಮತ್ತೆ ಅಲ್ಲಿಂದ ಗೋವಾಕ್ಕೆ ಹೋಗಿದ್ದರು. ಈ ಸಂದರ್ಭ ಹಳೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗೋವಾದ ಪೊಲೀಸರು ಇವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
    ಬೈಕ್‌ನ ಸಹಾಯಧನ ಆರೋಪಿಗಳ ಪತ್ತೆ : ಪೊಲೀಸರಿಗೆ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಕೋಟದಲ್ಲಿ ಅವರು ಬಿಟ್ಟು ಹೋದ ಒಂದು ಬೈಕ್‌ ಮತ್ತು ಸಿಸಿ ಕ್ಯಾಮರ ದಾಖಲೆಗಳು ಸಹಾಯವಾಯಿತು ಎನ್ನಲಾಗಿದೆ. ಇದೀಗ ಗೋವಾ ನ್ಯಾಯಾಲಯದ ಒಪ್ಪಿಗೆ ಮೇರೆಗೆ ವಿಚಾರಣೆಗಾಗಿ ಓರ್ವನನ್ನು ವಶಕ್ಕೆ ಪಡೆದಿದ್ದು. ಇನ್ನೋರ್ವ ಆರೋಪಿಯನ್ನು ವಶಕ್ಕೆ ನೀಡಲಾಗುತ್ತದೆ ಎನ್ನಲಾಗಿದೆ ಮತ್ತು ತಲೆಮರೆಸಿಕೊಂಡ ಆರೋಪಿಗೆ ಶೀಘ್ರ ಶೋಧ ನಡೆದಿದೆ.

    Click here

    Click here

    Click here

    Call us

    Call us

    ಪ್ರಕರಣ ಭೇದಿಸಿದ ತಂಡ : ಬ್ರಹ್ಮಾವರ ವೃತ್ತ ನಿರೀಕ್ಷಕ ಅರುಣ್‌ ಬಿ.ನಾಯಕ್‌ ರವರ ಮಾರ್ಗದರ್ಶನದಂತೆ, ಕೋಟ ಠಾಣಾಧಿಕಾರಿ ಕಬ್ಟಾಳ್‌ರಾಜ್‌ ಅವರು ತನ್ನ ತಂಡದೊಂದಿಗೆ ಪ್ರಕರಣ ಭೇದಿಸಿದ್ದಾರೆ. ಕೋಟ ಠಾಣೆಯ ಸಿಬಂದಿಗಳಾದ ಸಂತೋಷ, ಸುರೇಶ, ಜಯಂತ್‌, ಸತೀಶ್‌, ವಿಶ್ವನಾಥ ಮುಂತಾದವರು ತಂಡದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಘಟನೆ ನಡೆದು ಒಂದು ತಿಂಗಳೊಳಗೆ ಪ್ರಕರಣವನ್ನು ಭೇದಿಸಿದ ಕುರಿತು ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d