Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂಪುಟದಲ್ಲಿ ಸಚಿವಸ್ಥಾನ ನೀಡಿಲ್ಲ. ಶಾಸಕ ಗೋಪಾಲ ಪೂಜಾರಿ ಅಸಮಾಧಾನ
    ಊರ್ಮನೆ ಸಮಾಚಾರ

    ಸಂಪುಟದಲ್ಲಿ ಸಚಿವಸ್ಥಾನ ನೀಡಿಲ್ಲ. ಶಾಸಕ ಗೋಪಾಲ ಪೂಜಾರಿ ಅಸಮಾಧಾನ

    Updated:27/06/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಸಂಪುಟ ಪುನಾರಚನೆ ಆಗುತ್ತಿದ್ದಂತೆ ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರಿಂದ ಬಹಿರಂಗ ಆಕ್ರೋಶ ವ್ಯಕ್ತವಾಗುತ್ತಿದೆ. ಮಂತ್ರಿಮಂಡಲದಲ್ಲಿ ತನಗೆ ಅವಕಾಶ ನೀಡದಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯವನ್ನು ಪಡೆದು ಮುಂದಿನ ನಿಲುವೇನೆಂದು ಪ್ರಕಟಿಸಲಿದ್ದೇನೆ ಎಂದಿದ್ದಾರೆ.

    Click Here

    Call us

    Click Here

    ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಸತತ ನಾಲ್ಕನೇ ಬಾರಿ ಶಾಸಕನಾಗಿ ಆಯ್ಕೆಯಾಗಿರುವ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿರುವ ನನಗೆ ಸಂಪುಟದಲ್ಲಿ ಅವಕಾಶ ನೀಡದೇ ಇರುವುದು ಬೇಸರ ಮೂಡಿಸಿದೆ ಎಂದಿದ್ದಾರೆ.

    ದಿ| ದೇವರಾಜ ಅರಸು ಅವರ ಕಾಲದಿಂದಲೂ ಈಡಿಗ ಹಾಗೂ ಬಿಲ್ಲವ ಸಮಾಜಕ್ಕೆ ಸಂಪುಟದಲ್ಲಿ ಪ್ರತ್ಯೇಕ ಸ್ಥಾನ ನೀಡಲಾಗುತ್ತಿದ್ದು ಜಿಲ್ಲೆಯಲ್ಲಿ ವಿನಯಕುಮಾರ್ ಸೊರಕೆ ಅವರ ತೆರವಾದ ಸ್ಥಾನವನ್ನು ಹಿರಿಯ ಶಾಸಕರಾದ ವಸಂತ ಬಂಗೇರ ಅಥವಾ ನನಗೆ ನೀಡಬೇಕಿತ್ತು. ಪ್ರಮೋದ್ಗೆ ಸಚಿವ ಪದವಿ ನೀಡಿರುವಲ್ಲಿ ನನ್ನ ಆಕ್ಷೇಪ ಇಲ್ಲ ಎಂದ ಅವರು, ಈ ಭಾಗದಲ್ಲಿ ಸಮಸ್ತ ಬಿಲ್ಲವ ಸಮಾಜವನ್ನು ಅವಗಣಿಸಿರುವುದರಿಂದ ಪಕ್ಷದಿಂದ ಸಾಮಾಜಿಕ ನ್ಯಾಯ ದೊರಕದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಗೋಪಾಲ ಪೂಜಾರಿ ಅವರಿಗೆ ಸಚಿವ ಸ್ಥಾನ ಕೈತಪ್ಪಿ ಹೋಗಿರುವ ಬಗ್ಗೆ ಬೈಂದೂರು ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಭಾರೀ ಬೇಸರ ಹಾಗೂ ಅಸಮಾಧಾನ ಕಂಡುಬಂದಿದೆ. ಜಿಲ್ಲೆಯ ಕಾಂಗ್ರೆಸ್ನ ಹಿರಿಯ ನಾಯಕರು ಗೋಪಾಲ ಪೂಜಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಹಾಗೂ ರಾಷ್ಟ್ರದ ನಾಯಕರಲ್ಲಿ ಒತ್ತಡ ಹೇರಲಿಲ್ಲ ಎನ್ನುವುದು ಕಾರ್ಯಕರ್ತರ ಅಸಮಾಧಾನವಾಗಿದೆ. ಈ ಹಿನ್ನಲೆಯಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.