Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೃತ್ಯ, ಭರತನಾಟ್ಯದ ಅಪ್ರತಿಮ ಬಾಲ ಪ್ರತಿಭೆ ಪ್ರೇರಣಾ ಪೈ
    ಮಹಿಳಾಮಣಿ

    ನೃತ್ಯ, ಭರತನಾಟ್ಯದ ಅಪ್ರತಿಮ ಬಾಲ ಪ್ರತಿಭೆ ಪ್ರೇರಣಾ ಪೈ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ
    ಕುಂದಾಪುರ: ತನ್ನ ಐದನೆಯ ವಯಸ್ಸಿನಲ್ಲಿಯೇ ನೃತ್ಯ ಅಭ್ಯಾಸದಲ್ಲಿ ತೊಡಗಿಕೊಂಡು ಪರಿಪಕ್ವ ಹೆಜ್ಜೆಗಳನಿಟ್ಟು ಇದೀಗ ಭರತನಾಟ್ಯದಲ್ಲಿಯೂ ಪರಿಪೂರ್ಣತೆಯನ್ನು ಪಡೆದು ರಂಗಪ್ರವೇಶಕ್ಕೆ ಸಿದ್ಧಳಾಗಿದ್ದಾಳೆ ಅರಬ್ ಸಂಯುಕ್ತ ರಾಷ್ಟ್ರದ ಶಾರ್ಜಾ ಡೆಲ್ಲಿ ಪ್ರೈವೇಟ್ ಸ್ಕೂಲ್ ಗ್ರೇಡ್ 9 ವಿದ್ಯಾರ್ಥಿನಿ ಪ್ರೇರಣಾ ಪೈ.

    Click Here

    Call us

    Click Here

    ಮಣಿಪಾಲದ ನಿವಾಸಿ ಶಾರದಾ ಮತ್ತು ಬಾಂಡ್ಯ ಸಂಜೀವ ಪೈ ಇವರ ಮೊಮ್ಮಗಳಾಗಿರುವ ಶಾರ್ಜಾ ನಿವಾಸಿ ರಾಗಿಣಿ ಪೈ ಮತ್ತು ಬಾಂಡ್ಯ ಹರೀಶ್ ಪೈ ದಂಪತಿಯ ಪುತ್ರಿಯಾಗಿರುವ ಪ್ರೇರಣಾ ಇವಳು ತನ್ನ ಐದನೆಯ ವಯಸ್ಸಿನಿಂದಲೇ ನೃತ್ಯ ಅಭ್ಯಾಸದಿಂದ ಪರಿಪಕ್ವ ಹೆಜ್ಜೆಗಳನಿಟ್ಟು ಇದೀಗ ಭರತನಾಟ್ಯದಲ್ಲಿ ಪರಿಪೂರ್ಣತೆಯನ್ನು ಪಡೆದಿದ್ದಾಳೆ.

    ಪ್ರೇರಣಾ ಪೈ ತನ್ನ ಐದನೇಯ ವಯಸ್ಸಿನಲ್ಲಿ 2007ರಲ್ಲಿ ಶಾರ್ಜಾ ಕೈರಳಿ ಕಲಾ ಕೇಂದ್ರಮ್‌ನಲ್ಲಿ ಗುರು ಮುರಳಿ ಅವರಿಂದ ಪ್ರಾರಂಭವಾದ ಪ್ರಥಮ ಹಂತದ ತರಬೇತಿಯನ್ನು ಪಡೆದು ನಂತರ 2013ರಿಂದ ಶಾರ್ಜಾದ ಪ್ರಸಿದ್ಧ ಕಲಾ ಸಂಸ್ಥೆ ಕ್ಲಾಸಿಕಲ್ ರಿದಂಸ್ ಇದರ ಸ್ಥಾಪಕ ನಿರ್ದೇಶಕಿ ವಿದೂಷಿ ರೋಹಿಣಿ ಅನಂತ ಅವರ ಶಿಷ್ಯೆಯಾಗಿ ಭರತನಾಟ್ಯದಲ್ಲಿ ಐದು ಹಂತಗಳಲ್ಲಿ ಪರೀಕ್ಷೆ ಮುಗಿಸಿ ಸೀನಿಯರ್ ಡಿಪ್ಲೋಮಾ ಭಾರತದ ಪ್ರಸಿದ್ಧ ಪುರಾತನ ಕಲಾ ಕೇಂದ್ರ ಚಂಡೀಗಢದಲ್ಲಿ ಜೇಷ್ಠತಾ ಶ್ರೇಣಿಯಲ್ಲಿ ಪಡೆದು ಜೊತೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ವಿದೂಷಿ ರಂಗನಾಯಕಿ ರಾಜನ್ ಅವರಿಂದ ಅಭ್ಯಾಸ ಮಾಡುತ್ತಿದ್ದಾಳೆ.

    ಅರಬ್ ಸಂಯುಕ್ತ ಸಂಸ್ಥಾನದ ಹಲವು ಪ್ರತಿಷ್ಠಿತ ಸಮಾರಂಭಗಳ ವೇದಿಕೆ ಹಾಗೂ ಭಾರತದಲ್ಲಿ ಹಲವಾರು ನೃತ್ಯ ಪ್ರದರ್ಶನ ನೀಡಿ ಜನ ಮೆಚ್ಚುಗೆಯನ್ನು ಪಡೆದಿರುವ ಪ್ರೇರಣಾ ಪೈ ಅಪ್ಪಟ ಬಾಲ ಪ್ರತಿಭೆ. ತನ್ನ ಕಲಾ ತಪಸ್ಸಿನಿಂದ ಕಲಾ ಪ್ರೌಢಿಮೆಯನ್ನು ಪಡೆದು ಈ ಹಂತದವರೆಗೆ ತಲುಪಿರುವುದು ಹೆಮ್ಮೆಯ ವಿಷಯ.

    ಪಾಠದೊಂದಿಗೆ ಪಠ್ಯೇತರ ಚಟುವಟಿಕೆ, ಸಾಮಾಜಿಕ ಚಟುವಟಿಕೆ, ಸಂಶೋಧನಾತ್ಮಕ, ಪ್ರಯೋಗಾತ್ಮಕ, ಪ್ರಬಂಧ, ಹಸ್ತ ಕೌಶಲ್ಯದಲ್ಲಿ ಸದಾ ಹಸನ್ಮುಖಿಯಾಗಿರುವ ಪ್ರೇರಣಾ ಪೈ ಅವರು ಯು.ಎ.ಇ. ಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರತಿಷ್ಠಿತ ರಾಷ್ಟ್ರ ಮಟ್ಟದ ಪ್ರಶಸ್ತಿ ’ಶೇಖ್ ಹಂದಾನ್ ಪ್ರಶಸ್ತಿ’ 2013 ಮತ್ತು 2015ರಲ್ಲಿ ಎರಡು ಬಾರಿ ಪಡೆದು 2015ರಲ್ಲಿ ಶಾರ್ಜಾ ಅವಾರ್ಡ್ ಫಾರ್ ಅಕಾಡೆಮಿಕ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪಡೆದು ಹೆತ್ತವರ, ಶಾಲೆಯ ಹಾಗೂ ಅನಿವಾಸಿ ಕನ್ನಡಿಗರ ಗೌರವವನ್ನು ಹೆಚ್ಚಿಸಿದ್ದಾಳೆ.

    Click here

    Click here

    Click here

    Call us

    Call us

    ಗುರು ವಿದೂಷಿ ರೋಹಿಣಿ ಅನಂತ ಅವರ ಶಿಷ್ಯೆಯಾಗಿರುವ ಪ್ರೇರಣಾ ಪೈ ತನ್ನ ಅವಿರತ ಅಭ್ಯಾಸದ ಮೂಲಕ ಪರಿಣಿತಿಯನ್ನು ಪಡೆದು ಕಲಾದೇವಿಯ ಅನುಗ್ರಹ ಪಡೆದು ಭರತನಾಟ್ಯ ರಂಗಪ್ರವೇಶಕ್ಕೆ ಸಿದ್ಧವಾಗುತ್ತಿದ್ದಾಳೆ.

    ಜುಲೈ 23ಕ್ಕೆ ರಂಗಪ್ರವೇಶ
    ಭರತ ನಾಟ್ಯದಲ್ಲಿ ಕಲಾ ನಿಪುಣತೆಯನ್ನು ಪಡೆದು ಜುಲೈ 23ರಂದು ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ಭರತನಾಟ್ಯದಲ್ಲಿ ರಂಗ ಪ್ರವೇಶ ಮಾಡಲಿದ್ದಾರೆ. ರಂಗ ಪ್ರವೇಶ ಸಮಾರಂಭಕ್ಕೆ ಬೆಂಗಳೂರಿನ ನಟರಾಜ ನೃತ್ಯ ಶಾಲೆಯ ಸ್ಥಾಪಕ ನಿರ್ದೇಶಕ ಜಿ.ಎಸ್.ರಾಜಲಕ್ಷ್ಮೀ, ಸುರತ್ಕಲ್ ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ ಸ್ಥಾಪಕ ನಿರ್ದೇಶಕ ಚಂದ್ರಶೇಖರ ನಾವಡ, ಪ್ರಸಿದ್ಧ ಸಂಗೀತ ನೃತ್ಯ ವಿಮರ್ಶಕ ಡಾ.ಎಂ. ಸೂರ್ಯಪ್ರಸಾದ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d