Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಕುಂದಾಪುರ ಸನ್‌ರೈಸ್ ಪದಪ್ರದಾನ ಸಮಾರಂಭ
    ಕುಂದಾಪ್ರದ್ ಸುದ್ಧಿ

    ರೋಟರಿ ಕುಂದಾಪುರ ಸನ್‌ರೈಸ್ ಪದಪ್ರದಾನ ಸಮಾರಂಭ

    Updated:06/07/2016No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ರೋಟರಿ ತತ್ವಗಳು ಮೌಲ್ಯಯುತವಾದ ಮನುಜ ಧರ್ಮವನ್ನು ಪ್ರತಿಪಾದಿಸುತ್ತದೆ : ರವಿ ಹೆಗ್ಡೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ವಿಶ್ವವನ್ನೇ ಒಂದು ಮನೆಯಂತೆ ನೋಡುವ ಅಂತರಾಷ್ಟ್ರೀಯ ರೋಟರಿ ನಮ್ಮ ಸನಾತನ ಸಂಸ್ಕೃತಿಯ ವಸುಧೈವ ಕುಟುಂಬಕಮ್ ನೀತಿಗನುಗುಣವಾಗಿಯೇ ಇದೆ. ರೋಟರಿಯ ಸ್ವಾರ್ಥ ಮೀರಿದ ಸೇವೆ ಧ್ಯೇಯವು ನಮ್ಮ ಸಿರಿ ಸಂಪನ್ನ ಪರಂಪರೆಯ ಪರೋಪಕಾರಕ್ಕಾಗಿಯೇ ಮನುಜ ಶರೀರರವು ಉಕ್ತಿಯೇ ಆಗಿದೆ. ವಿಶ್ವದಾದ್ಯಂತ ಒಂದೇ ಮಾದರಿಯಾಗಿರುವ ರೋಟರಿ ಸಂವಿಧಾನ ಮತ್ತದರ ತತ್ವಗಳು ಮೌಲ್ಯಯುತವಾದ ಮನುಜ ಧರ್ಮವನ್ನೇ ಪ್ರತಿಪಾದಿಸುತ್ತದೆ. ರೋಟರಿಯ ಈ ಎಲ್ಲಾ ಮೌಲ್ಯಗಳನ್ನು ಅಳವಡಿಸಿಕೊಂಡಲ್ಲಿ ಸದಸ್ಯರ ಜನುಮ ಸಾರ್ಥಕವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುವುದಾಗಿ ರೋಟರಿ ಜಿಲ್ಲೆ 3170 ಇದರ ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ರವಿ ಹೆಗಡೆ ಹೇಳಿದರು.

    ಅವರು ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ನ ಆಶ್ರಯದಲ್ಲಿ ಕೋಟೇಶ್ವರದ ಸಹನಾ ಕನ್‌ವೆನ್ಶನ್ ಸೆಂಟರ್‌ನ ಕೃಷ್ಣ ಸಭಾಂಗಣದಲ್ಲಿ ನಡೆದ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಪದಪ್ರದಾನ ನೆರವೇರಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಕೆ. ನರಸಿಂಹ ಹೊಳ್ಳ, ಕಾರ್ಯದರ್ಶಿಯಾಗಿ ನಾಗೇಶ್ ನಾವಡ ಅಧಿಕಾರ ಸ್ವೀಕರಿಸಿದರು. ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಭೋದಿಸಲಾಯಿತು. ನಿಕಟಪೂರ್ವ ಅಸಿಸ್ಟೆಂಟ್ ಗವರ್ನರ್ ಸತೀಶ್ ಎನ್. ಶೇರೆಗಾರ್ ಅವರನ್ನು ಸನ್ಮಾನಿಸಲಾಯಿತು. ರೋಟರಿ ವಲಯ 1ರ ಅಸಿಸ್ಟೆಂಟ್ ಗವರ್ನರ್ ಮಧುಕರ ಹೆಗ್ಡೆ ಬುಲೆಟಿನ್ ಬಿಡುಗಡೆಗೊಳಿಸಿದರು. ಜೋನಲ್ ಲೆಪ್ಟಿನೆಂಟ್ ಅಬುಶೇಖ್ ಸಾಹೇಬ್ ಶುಭಹಾರೈಸಿದರು. ನಿಕಟಪೂರ್ವ ಅಧ್ಯಕ್ಷ ಕೆ. ದಿನಕರ ಪಟೇಲ್ ಸ್ವಾಗತಿಸಿದರು.

    ನೂತನ ಅಧ್ಯಕ್ಷ ಕೆ. ನರಸಿಂಹ ಹೊಳ್ಳ ಮಾತನಾಡಿ ರೋಟರಿ ತತ್ವವನ್ನು ಅಳವಡಿಸಿಕೊಂಡು ಮುನ್ನಡೆಯಲು ಸರ್ವಸದಸ್ಯರ ಸಹಕಾರ ಅಗತ್ಯ. ಎಲ್ಲರೊಳಗೊಂದಾಗಿ ಕ್ಲಬ್‌ನ ಚುಕ್ಕಾಣಿ ಹಿಡಿದು ಮುನ್ನಡೆಯುವ ಪ್ರಯತ್ನ ಮಾಡುತ್ತೇನೆ ಎಂದರು. ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ಗೆ ನೂತನ ಸದಸ್ಯರನ್ನಾಗಿ ಮನೋಹರ, ಡುಂಡಿರಾಜ್, ಜಯಂತ್ ಪೂಜಾರಿ, ಕೆ.ಎಸ್. ಮಂಜುನಾಥ ಅವರನ್ನು ಸೇರ್ಪಡೆಗೊಳಿಸಲಾಯಿತು. ರೋಟರಿ ಸನ್‌ರೈಸ್ ಸ್ಥಾಪಕಾಧ್ಯಕ್ಷ ದಿನಕರ ಶೆಟ್ಟಿ, ನ್ಯಾಯವಾದಿ ಪ್ರಕಾಶ್ಚಂದ್ರ ಹೆಗ್ಡೆ, ಅಡಿಟರ್ ರಾಮಕೃಷ್ಣ ಐತಾಳ್ ಪರಿಚಯಿಸಿದರು. ನಿಕಟಪೂರ್ವ ಜತೆ ಕಾರ್ಯದರ್ಶಿ ಸಿ. ಎಚ್. ಗಣೇಶ್ ವರದಿ ವಾಚಿಸಿದರು. ಎಲ್. ಜೆ. ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು. ಪ್ರಾಪ್ತಿ ಹೆಗ್ಡೆ ಸಹಕರಿಸಿದರು. ಕಾರ್ಯದರ್ಶಿ ನಾಗೇಶ ನಾವಡ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    3 × four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.