ಕುಂದಾಪುರ: ಕಡಲ್ಕೊರೆತದ ಪ್ರದೇಶಗಳಿಗೆ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಗಂಗೊಳ್ಳಿ, ಮರವಂತೆ ಹಾಗೂ ಕಿರಿಮಂಜೇಶ್ವರದ ಹೊಸಹಕ್ಲು ಸೇರಿದಂತೆ ತೀವ್ರ ಕಡಲ ಕೊರೆತ ಉಂಟಾದ ಪ್ರದೇಶಗಳಿಗೆ ರಾಜ್ಯ ಮೀನುಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ಮಾತನಾಡಿ ಮಳೆಗಾಲದಲ್ಲಿ ಕಡಲಕೊರೆತದಿಂದ ತೀರ ಪ್ರದೇಶದ ಜನರಿಗುಂಟಾಗುವ ತೊಂದರೆಯ ಬಗ್ಗೆ ಅರಿವಿದ್ದು ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆಯಿತ್ತರು.

Call us

Click Here

ಕಳೆದ ನಾಲ್ಕು ದಿನಗಳ ಹಿಂದೆ ಬಿರುಗಾಳಿಯಿಂದಾಗಿ ನೆಲಸಮಗೊಂಡಿದ್ದ ಮನೆಯವರಿಗೆ ಪರಿಹಾರವಾಗಿ 95,000ರೂ. ಚೆಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ, ತಾಪಂ ಸದಸ್ಯ ರಾಜು ದೇವಾಡಿಗ, ತಹಶೀಲ್ದಾರ್ ಕಿರಣ ಗೌರಯ್ಯ ಹಾಗೂ ಇತರ ಜನಪ್ರತಿನಿಧಿಗಳು, ಅಧಿಕಾರಿಗಳು ಜೊತೆಗಿದ್ದರು.

Leave a Reply