Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿದಿಸೆಯಿಂದಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ: ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜ
    ಕುಂದಾಪ್ರದ್ ಸುದ್ಧಿ

    ವಿದ್ಯಾರ್ಥಿದಿಸೆಯಿಂದಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ: ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಜನಸಂಖ್ಯೆಯಲ್ಲಿ ವಿಶ್ವದ ಎರಡನೇ ಸ್ಥಾನದಲ್ಲಿರುವ ಭಾರತ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ವಿಶ್ವದ ಮುಂಚೂಣಿ ಸ್ಥಾನದಲ್ಲಿದೆ. ಪ್ರಜಾಪ್ರಭುತ್ವದ ಸಫಲತೆಗೆ ದೇಶದ ಜನಸಾಮಾನ್ಯರಲ್ಲಿನ ನಾಯಕತ್ವ ಕಾರಣವಾಗಿದೆ. ವಿದ್ಯಾರ್ಥಿದಿಸೆಯಿಂದಲೇ ನಾಯಕತ್ವ ಗುಣಗಳು ಬೆಳೆಯಬೇಕು. ಅದಕ್ಕೆ ಶಾಲಾ ಸಂಸತ್ತುಗಳು ಪೂರಕವಾಗಬೇಕು ಎಂದು ಕರ್ನಾಟಕ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರದ ಸೆಂಟ್ ಮೇರಿಸ್ ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸರಕಾರವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಸ್ವಾತಂತ್ರ್ಯ, ಸಂವಿಧಾನದ ರಕ್ಷಣೆ ಪ್ರತಿಯೋಬ್ಬರ ಆದ್ಯ ಕರ್ತವ್ಯವಾಗಿರುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆ, ಶಾಸಕಾಂಗ ವ್ಯವಸ್ಥೆಯ ಅರಿವನ್ನು ವಿದ್ಯಾರ್ಥಿಗಳು ಹೊಂದಬೇಕು. ಒಂದು ಮತವೂ ಕೂಡಾ ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮುಖ್ಯ ಹಾಗೂ ನಿರ್ಣಯಕವಾಗಿರುತ್ತದೆ ಎಂದರು.

    ವಿದ್ಯಾರ್ಥಿಗಳಲ್ಲಿ ಛಲ ಇರಬೇಕು. ನಿರ್ದಿಷ್ಟ ಗುರಿ ಹೊಂದಬೇಕು, ಗುರಿಗಾಗಿ ತುಡಿಯುವ ಮನಸ್ಸು ಇರಬೇಕು. ನಾಯಕತ್ವ ಗುಣವನ್ನು ಬಾಲ್ಯದಿಂದಲೇ ಬೆಳೆಸಿಕೊಳ್ಳಬೇಕು. ಸತ್ಪ್ರಜೆಗಳಾಗಿ ದೇಶಕ್ಕೆ ಅಮೂಲ್ಯ ಕೊಡುಗೆ ನೀಡಬೇಕು ಎಂದು ಹೇಳಿದರು.

    ಸಂಚಾರ ಪೊಲೀಸ್ ಠಾಣೆಯ ಎಎಸ್‌ಐ ಕೆ.ಜಯಣ್ಣ ಅವರು ಸಂಚಾರ ನಿಯಮಗಳ ಬಗ್ಗೆ ಮಾಹಿತಿ ನೀಡಿ, ಸಂಚಾರ ನಿಯಮಗಳನ್ನು ಪ್ರಾಮಾಣಿಕವಾಗಿ ಪಾಲಿಸುವುದರಿಂದ ಅಪಘಾತದಿಂದ ಮುಕ್ತರಾಗಲು ಸಾಧ್ಯ ಎಂದರು.

    ವಿಧ್ಯಾರ್ಥಿ ಸರಕಾರದ ಅಧ್ಯಕ್ಷರಾಗಿ ರೇವಿನಾ ಎರಲ್ಡ್ ಡಿಸೋಜ ಕಾರ್ಯದರ್ಶಿಯಾಗಿ ರಚನಾ ಪೈ ಹಾಗೂ ಮಂತ್ರಿ ಮಂಡಲದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಹೋಲಿ ರೋಜರಿ ಚರ್ಚ್‌ನ ಧರ್ಮಗುರುಗಳಾದ ಫಾ|ಅನಿಲ್ ಡಿಸೋಜ ಪ್ರಮಾಣ ವಚನ ಭೋದಿಸಿ, ಶುಭ ಹಾರೈಸಿದರು. ಕುಂದಾಪುರದ ವೃತ್ತ ನಿರೀಕ್ಷಕರಾದ ದಿವಾಕರ್, ಕಾಲೇಜಿನ ಪ್ರಾಂಶುಪಾಲರಾದ ಪ್ರವೀಣ್ ಅಮೃತ್ ಮಾರ್ಟಿಸ್, ಉಪಪ್ರಾಂಶುಪಾಲರಾದ ಮಂಜುಳಾ ನಾಯರ್, ಹಾಗೂ ರವಿ ಶೆಟ್ಟಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ಆಯಯ್ಕೆಗೊಂಡ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿನಿ ವಿಲ್ಮಾ ಫೆರ್ನಾಂಡೀಸ್ ಕಾರ್ಯಕ್ರಮ ನಿರ್ವಹಿಸಿ, ಕನ್ನಡ ಉಪನ್ಯಾಸಕ ನಾಗರಾಜ ಸನ್ಮಾನಿತರ ಪರಿಚಯಿಸಿ, ವಿದ್ಯಾರ್ಥಿ ಸಂಸತ್ ಕಾರ್ಯದರ್ಶಿ ರಚನಾ ಪೈ ವಂದಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಟದ ಪಂಚವರ್ಣದಿಂದ ಸಾಲುಮರದ ತಿಮ್ಮಕ್ಕನಿಗೆ ನುಡಿನಮನ
    • ಸರಸ್ವತಿ ವಿದ್ಯಾಲಯದಲ್ಲಿ ಸಿ.ಎ ಪ್ರಶಿಕ್ಷಣಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮ 
    • ಕುಂದಾಪುರ ಆರ್.ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ
    • ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಸಂಭ್ರಮ
    • ವಿದ್ಯಾರ್ಥಿಗಳು ಸಂಸ್ಕಾರಯುತ ಬದುಕು ರೂಪಿಸಿಕೊಳ್ಳಿ: ಆರ್‌ಜೆ ನಯನಾ ಶೆಟ್ಟಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d