Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಸಾಪ ವಂಡ್ಸೆ ಹೋಬಳಿ ಘಟಕ ಉದ್ಘಾಟನೆ
    ಊರ್ಮನೆ ಸಮಾಚಾರ

    ಕಸಾಪ ವಂಡ್ಸೆ ಹೋಬಳಿ ಘಟಕ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಮಾತೃಭಾಷೆಯು ಹೃದಯದ ಭಾಷೆ. ನಿರಂತರವಾಗಿ ಬಳಸುವುದರಿಂದ ಭಾಷೆ ಉಳಿಯಬಲ್ಲುದು. ನಾಡು-ನುಡಿ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಒಲವು ಮತ್ತು ಅಭಿಮಾನವನ್ನು ಹೆಚ್ಚಿಸುವ ಕಾರ್ಯ ಇಂದಿನ ಅಗತ್ಯವಾಗಿದೆ ಎಂದು ಉಡುಪಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಪ್ರೊ. ಸಿ. ಉಪೇಂದ್ರ ಸೋಮಯಾಜಿ ಅವರು ಹೇಳಿದರು.

    Click Here

    Call us

    Click Here

    ವಂಡ್ಸೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಮಧ್ಯಾಹ್ನ ಜರಗಿದ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನೂತನ ವಂಡ್ಸೆ ಹೋಬಳಿ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ, ಸಾಹಿತ್ಯದಿಂದ ಮಾನವೀಯ ಮನಸ್ಸುಗಳು ಹೆಚ್ಚಬೇಕು. ಅಂತರಂಗದ ಪ್ರೇರಣೆಯಿಂದ ಪ್ರತಿಭೆ ಹೊರಬರುತ್ತದೆ. ಪ್ರತಿಭೆಯನ್ನು ಉತ್ತೇಜಿಸಲು ಓದು, ಉಪನ್ಯಾಸ, ಸಾಹಿತ್ಯ ಮತ್ತು ಕಲಾ ಚಟುವಟಿಕೆಗಳ ನೆರವು ಪಡೆಯಬೇಕು. ಅಂದಿನ ಜಾನಪದ ಇಂದಿಗೂ ತನ್ನದೇ ಆದ ಸತ್ವಯುತವಾದ ಸಂತೋಷವನ್ನು ಕೊಡುವಂತೆ ಯಾಂತ್ರಿಕತೆಯನ್ನು ಬಿಟ್ಟು ಪ್ರಕೃತಿದತ್ತ ಪ್ರೀತಿಯನ್ನು ಪಡೆಯಲು ಸಾಹಿತ್ಯ, ಸಂಸ್ಕ್ರತಿಯನ್ನು ಆಶ್ರಯಿಸಬೇಕು ಎಂದರು.

    ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ನೂತನ ಹೋಬಳಿ ಘಟಕದ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಪ್ರತೀಜ್ಞಾವಿಧಿಯನ್ನು ಬೋಧಿಸಿ ಆಶಯದ ಮಾತುಗಳನ್ನಾಡಿ, ಕನ್ನಡಕ್ಕಾಗಿ ಪ್ರಜ್ಞಾವಂತರಾಗಬೇಕು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಳಕಳಿ ನಮ್ಮೆಲ್ಲರ ಹೃದಯದಿಂದ ಹುಟ್ಟಿಬರಬೇಕು ಎಂದರು. ಕಸಾಪ ವಂಡ್ಸೆ ಹೋಬಳಿ ಘಟಕದ ಅಧ್ಯಕ್ಷ ಚಂದ್ರ ಕೆ. ಹೆಮ್ಮಾಡಿ ಅಧ್ಯಕ್ಷತೆ ವಹಿಸಿದ್ದರು.

    ಕಸಾಪ ಕುಂದಾಪುರ ತಾಲೂಕು ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಅವರು ಹೋಬಳಿ ಘಟಕದ ಅಧ್ಯಕ್ಷರಿಗೆ ಧ್ವಜವನ್ನು ಹಸ್ತಾಂತರಿಸಿದರು. ಮುಖ್ಯ ಅತಿಥಿ ವಂಡ್ಸೆ ಕಾಲೇಜು ಹಿರಿಯ ಉಪನ್ಯಾಸಕ ಜಿ. ಕೆ. ಹಾಲಪ್ಪ, ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ರಾಜೀವ ಶೆಟ್ಟಿ, ಕುಂದಾಪುರ ತಾಲೂಕು ಆಯುಷ್ ಘಟಕದ ಅಧ್ಯಕ್ಷ ಡಾ. ರಾಜೇಶ್ ಬಾಯಿರಿ ಶುಭಹಾರೈಸಿದರು.

    ಹೋಬಳಿ ಘಟಕದ ಗೌರವ ಕಾರ್ಯದರ್ಶಿ ಕೆ. ಗೋಪಾಲಕೃಷ್ಣ ನಾಡ ಸ್ವಾಗತಿಸಿದರು. ಉಪನ್ಯಾಸಕ ಮಂಜುನಾಥ ಎಂ. ಚಂದನ್ ನೆಂಪು ಕಾರ್ಯಕ್ರಮ ನಿರ್ವಹಿಸಿದರು. ಎಚ್. ಮಂಜುನಾಥ ಭಟ್ ಹರೆಗೋಡು ವಂದಿಸಿದರು.

    Click here

    Click here

    Click here

    Call us

    Call us

    news kasapa vandse hobali udghatanae 1 news kasapa vandse hobali udghatanae

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.