ಕುಂದಾಪುರ ಸಿಟಿ ಲಯನ್ಸ್ ಕ್ಲಬ್-ಲಯನೆಸ್‌ ಕ್ಲಬ್ ಅಧ್ಯಕ್ಷರಾಗಿ ಸತೀಶ್ ಕುಮಾರ್, ಮಾಲಿನಿ ಸತೀಶ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಲಯನ್ಸ್ ಕ್ಲಬ್ ಹಾಗೂ ಲಯನೆಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್ ಇದರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಕೋಟೇಶ್ವರದ ಸುಮುಖ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಲಯನ್. ವಿ.ಜಿ.ಶೆಟ್ಟಿಯವರು ನೂತನ ಅಧ್ಯಕ್ಷ ಲಯನ್ ಸತೀಶ್‌ಕುಮಾರ್, ಕಾರ್ಯದರ್ಶಿ ಲಯನ್ ಅನಿಲ್ ಶೆಣೈ ಹಾಗೂ ಖಜಾಂಚಿಯಾಗಿ ಲಯನ್ ನಿತಿನ್‌ಕುಮಾರ್ ಹಾಗೂ ಲಯನೆಸ್ ವಿಭಾಗದ ಅಧ್ಯಕ್ಷೆಯಾಗಿ ಲಯನೆಸ್ ಮಾಲಿನಿ ಸತೀಶ್, ಕಾರ್ಯದರ್ಶಿಯಾಗಿ ಲಯನೆಸ್ ಅನೂಷಾ ಶೆಣೈ, ಖಜಾಂಚಿಯಾಗಿ ಶೀಜಾ ಸಾಲಿಯಾನ್‌ರವರ ಪದಪ್ರದಾನ ಮಾಡಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

Call us

Click Here

ಬಳಿಕ ಮಾತನಾಡಿದ ಅವರು, ಲಯನ್ಸ್ ಒಂದು ಸೇವಾ ಸಂಸ್ಥೆ ಇದರಲ್ಲಿ ಸೇವೆ ಮಾಡುವುದೇ ನಮ್ಮ ಧರ್ಮ, ನಮ್ಮ ಗಳಿಕೆಯ ಒಂದು ಪಾಲನ್ನು ಸಮಾಜದಅಶಕ್ತರಿಗೆ, ದೀನದಲಿತರಿಗೆ ಮೀಸಲಾಗಿಡೋಣ ಎಂದು ಕರೆ ನೀಡಿದರು. ನೂತನ ಸದಸ್ಯರ ಸೇರ್ಪಡೆಗೊಳಿಸಲಾಯಿತು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಲಯನ್ ಕಿರಣ್, ಪ್ರಾಂತೀಯ ಕಾರ್ಯದರ್ಶಿ ಲಯನ್ ನಿರಂಜನ್, ಪ್ರಾಂತೀಯ ಅಧ್ಯಕ್ಷ ಲಯನ್ ರತ್ನಾಕರ ಶೆಟ್ಟಿ, ಕೋರ್ ಕಮಿಟಿ ಸದಸ್ಯ ಲಯನ್ ಪ್ರಕಾಶ್ ಬೆಟ್ಟಿನ್ ಉಪಸ್ಥಿತರಿದ್ದರು.

Leave a Reply