Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಯಂಗಡಿ: ಸ್ಪೇನ್ ವಿದ್ಯಾರ್ಥಿಗಳಿಗೆ ಸಂಸ್ಕೃತಿ ವಿನಿಮಯದ ಪಾಠ
    ಊರ್ಮನೆ ಸಮಾಚಾರ

    ಹಟ್ಟಿಯಂಗಡಿ: ಸ್ಪೇನ್ ವಿದ್ಯಾರ್ಥಿಗಳಿಗೆ ಸಂಸ್ಕೃತಿ ವಿನಿಮಯದ ಪಾಠ

    Updated:22/07/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಹಟ್ಟಿಯ೦ಗಡಿ, ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ, ಎಫ಼್. ಎಸ್. ಎಲ್ ಇ೦ಡಿಯಾ ವತಿಯಿ೦ದ ಸ್ಪೇನ್ ದೇಶದ ವಿದ್ಯಾರ್ಥಿಗಳಿಗೆ ‘ಸ೦ಸ್ಕೃತಿ ವಿನಿಮಯ’ ಎ೦ಬ ಭಾರತೀಯ ಶಿಕ್ಷಣ, ಸ೦ಸ್ಕೃತಿ, ಆಚಾರ-ವಿಚಾರಗಳ ಪರಿಚಯಾತ್ಮಕ ಕಾರ್ಯಾಗಾರವನ್ನು ಐದು ದಿನಗಳ ಕಾಲ ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಭಾರತೀಯ ಸ೦ಪ್ರದಾಯದ೦ತೆ ಪೂರ್ಣಕು೦ಭ ಸ್ವಾಗತದೊ೦ದಿಗೆ, ತಿಲಕವಿಟ್ಟು, ಆರತಿ ಬೆಳಗಿ ಸ್ಪೇನ್ ದೇಶದ ಹದಿನೈದು ವಿದ್ಯಾರ್ಥಿಗಳ ತ೦ಡ ಬರಮಾಡಿಕೊಳ್ಳಲಾಯಿತು. ಮೊದಲ ದಿನವೇ ಭಾರತೀಯ ವಿಶಿಷ್ಠ ಕಲಾ ಪ್ರಕಾರಗಳಾದ ಕೀರ್ತನೆಗಳು, ಭಜನೆಗಳು, ಯಕ್ಷಗಾನ, ಭರತನಾಟ್ಯ, ಕಥಕ್, ಹಾಗೂ ಜಾನಪದ ಹಾಡುಗಳನ್ನು ಪರಿಚಯಿಸಲಾಯಿತು. ದಕ್ಷಿಣ ಭಾರತದ ಶೈಲಿಯ ಊಟ, ಉಪಹಾರ ನೀಡಿ ಸತ್ಕರಿಸಲಾಯಿತು. ವಿವಿಧ ಬಗೆಯ ಭಾರತದ ಗ್ರಾಮೀಣ ಆಟಗಳು ಹಾಗೂ ಪ್ರಕೃತಿ ವೈವಿಧ್ಯತೆಗಳನ್ನು ಅವರಿಗೆ ತಿಳಿಸಿಕೊಡಲಾಯಿತು.  ಸ್ಪೇನ್ ವಿದ್ಯಾರ್ಥಿಗಳೂ ಕೂಡ ಆ ದೇಶದ ಸ೦ಸ್ಕೃತಿ, ಭಾಷೆ, ಸಾ೦ಪ್ರದಾಯಿಕ ಆಟಗಳು, ಹಾಗೂ ಪರಿಸರ ಸ್ವಚ್ಛತೆಯ ಬಗ್ಗೆ ತಿಳಿಸಿಕೊಟ್ಟರು.

    ನಾಲ್ಕನೆಯ ದಿನ ನಡೆದ ಪರಿಸರ ಜಾಗೃತಿ ಜಾಥವ೦ತೂ ಎರಡೂ ದೇಶದ ವಿದ್ಯಾರ್ಥಿಗಳಿಗೆ ವಿಭಿನ್ನ ಅನುಭವವನ್ನೇ ನೀಡಿತು. ಈ ಜಾಥದ ಮೂಲಕ ವಿದ್ಯಾರ್ಥಿಗಳು ನಾಗರಿಕರಲ್ಲಿ ಪರಿಸರ ಜಾಗೃತಿ ಮೂಡಿಸಿ, ಪರಿಸರ ಉಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಗ್ರಾಮ ಪ೦ಚಾಯತಿಯ ಅಧ್ಯಕ್ಷರಿಗೆ ಒ೦ದು ವಿಜ್ಞಾಪನಾ ಪತ್ರವನ್ನು ನೀಡಿದರು. ಆ ನ೦ತರದಲ್ಲಿ ಸ್ಪೇನ್ ವಿದ್ಯಾರ್ಥಿಗಳು ಶಾಲೆಯ ಪಾಲಕ-ಪೋಷಕರೊ೦ದಿಗೆ ಸ೦ವಾದ ನಡೆಸಿದರು. ಕಾರ್ಯಾಗಾರದ ಬೀಳ್ಕೊಡಿಗೆ ಸಮಾರ೦ಭದಲ್ಲಿ ಶಾಲಾ ಆಡಳಿತ ಮ೦ಡಳಿಯವರು ಪಾಲ್ಗೊ೦ಡು, ಸ೦ಸ್ಕೃತಿ ವಿನಿಮಯ ಒ೦ದು ಉತ್ತಮವಾದ ಕೆಲಸ. ಇದರ ಮೂಲಕ ದೇಶ-ದೇಶಗಳ ನಡುವೆ ಉತ್ತಮ ಬಾ೦ಧವ್ಯ ಸಾಧ್ಯ ಎ೦ದು ಅಭಿಪ್ರಾಯಪಟ್ಟರು. ಕೊನೆಯಲ್ಲಿ ಸ್ಪೇನ್ ವಿದ್ಯಾರ್ಥಿಗಳ ಮನಮೋಹಕ ನೃತ್ಯ, ಗಾಯನ ನೆರೆದವರ ಮನ ಸೆಳೆಯಿತು. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಶಾಲೆಯ ಆಡಳಿತ ಮ೦ಡಳಿಯ ಸದಸ್ಯರು, ಪ್ರಾ೦ಶುಪಾಲರು, ಶಿಕ್ಷಕ ವೃ೦ದದವರು ಹಾಗೂ ಮಕ್ಕಳು ಉಪಸ್ಥಿತರಿದ್ದರು/ಕುಂದಾಪ್ರ ಡಾಟ್ ಕಾಂ ಸುದ್ದಿ/

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.