Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೂ.24: ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ
    Uncategorized

    ಜೂ.24: ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ

    Updated:24/07/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ
    ಬ್ರಹ್ಮಾವರ: ಬ್ರಹ್ಮಾವರ ವಲಯ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜುಲೈ ೨೪ರ ಆದಿತ್ಯವಾರ ಬ್ರಹ್ಮಾವರ ಬಸ್ ನಿಲ್ದಾಣ ಸಮೀಪದಲ್ಲಿರುವ ಬಂಟರ ಭವನದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಶೇಷವಾಗಿ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಭಾಗವಹಿಸಲಿದ್ದು, ರಾಜ್ಯದ ಹೆಸರಾಂತ ಪತ್ರಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
    ಭಾನುವಾರ ಬೆಳಿಗ್ಗೆ ಸಮಾರಂಭ ಆರಂಭಗೊಳ್ಳಲಿದ್ದು ಸಮಾರಂಭದ ಅಧ್ಯಕ್ಷತೆಯನ್ನು ಬ್ರಹ್ಮಾವರ ವಲಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ವಹಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ.ಮೋಹನ್ ಆಳ್ವಾ ಕಾರ್ಯಕಮವನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ವಡ್ಡರ್ಸೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್, ಬೆಳಗಾವಿಯ ಉದ್ಯಮಿ ರತ್ನಾಕರ ಶೆಟ್ಟಿ ಯರಗಟ್ಟಿ, ಮುಂಬೈನ ಉದ್ಯಮಿ ಜೆ. ರತ್ನಾಕರ ಶೆಟ್ಟಿ, ಬ್ರಹ್ಮಾವರ ಬಂಟರ ಸಂಘದ ಕಟ್ಟಡ ಸಮಿತಿಯ ಸಂಚಾಲಕ ಬಿ.ಭುಜಂಗ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ.

    Click Here

    Call us

    Click Here

    ನಂತರ ವಡ್ಡರ್ಸೆ ದೃಷ್ಟಿಕೋನದಲ್ಲಿ ಪತ್ರಿಕೋದ್ಯಮ ವಿಚಾರ ಸಂಕಿರಣ ನಡೆಯಲಿದ್ದು, ಬ್ರಹ್ಮಾವರದ ಚಿಂತಕ ಜ್ಞಾನ ವಸಂತ ಶೆಟ್ಟಿ, ವಡ್ಡರ್ಸೆಯವರ ಒಡನಾಡಿ ಡಾ.ಪುಟ್ಟಸ್ವಾಮಿ ಬೆಂಗಳೂರು, ಪತ್ರಕರ್ತ ಚಿದಂಬರ ಬೈಕಂಪಾಡಿ, ಜೈ ಭಾರ್ಗವ ಬಳಗದ ರಾಜ್ಯಾಧ್ಯಕ್ಷ ಅಜಿತ್ ಶೆಟ್ಟಿ ಕಿರಾಡಿ ಭಾಗವಹಿಸಲಿದ್ದಾರೆ. ಮಧ್ಯಾಹ್ನದ ನಂತರ ಪ್ರಸಕ್ತ ಕಾಲದಲ್ಲಿ ಪತ್ರಿಕೋಧ್ಯಮ ವಿಚಾರ ಸಂಕಿರಣ ನಡೆಯಲಿದ್ದು, ಕುಂದಾಪುರದ ಕುಂದಪ್ರಭ ವಾರಪತ್ರಿಕೆಯ ಸಂಪಾದಕ ಯು.ಎಸ್.ಶೆಣೈ, ಕೊಪ್ಪದ ರೈತ ಸಂಗಾತಿ ಪತ್ರಿಕೆಯ ಸಂಪಾದಕ ಸುಧೀರ್‌ಕುಮಾರ್ ಮುರೋಳ್ಳಿ, ಕರಾವಳಿ ಮುಂಜಾವು ಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಭಾಗವಹಿಸಲಿದ್ದಾರೆ. ಬಳಿಕ ಕವರ್ ಸ್ಟೋರಿ ಖ್ಯಾತಿಯ ವಿಜಯಲಕ್ಷ್ಮೀ ಶಿಬರೂರು ಅವರು ವಿದ್ಯಾರ್ಥಿಗಳು, ಸಾರ್ವಜನಿಕರು ಜೊತೆಯಲ್ಲಿ ಸಂವಾದ ನಡೆಸಲಿದ್ದಾರೆ.

    ಸಮಾರೋಪ ಸಮಾರಂಭದಲ್ಲಿ ಕವರ್ ಸ್ಟೋರಿ ಖ್ಯಾತಿಯ ವಿಜಯಲಕ್ಷ್ಮೀ ಶಿಬರೂರು ಅವರನ್ನು ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋಧ್ಯಮ ಪ್ರಶಸ್ತಿ ೨೦೧೬ ಪ್ರದಾನ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ, ಹಿರಿಯ ಪತ್ರಕರ್ತ ಈಶ್ವರ ದೈತೋಟ, ತುಳು ಸಾಹಿತ್ಯ ಅಕಾಡಮೆ ಅಧ್ಯಕ್ಷೆ ಶ್ರೀಮತಿ ಜಾನಕಿ ಬ್ರಹ್ಮಾವರ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಯಕರ ಸುವರ್ಣ ಭಾಗವಹಿಸಲಿದ್ದಾರೆ.
    ನಂತರ ಬಡಗುತಿಟ್ಟಿನ ಐದು ಮಂದಿ ಯಕ್ಷಗಾನ ಭಾಗವತರ ಗಾನ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷರು ವಿನಂತಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್

    17/12/2025

    ಕೋಟೇಶ್ವರ: ಬಿಜೆಪಿಯಿಂದ ಸಮಗ್ರ ಮತದಾರ ಪಟ್ಟಿ ಪರಿಷ್ಕರಣಿಯ ಕಾರ್ಯಗಾರ

    15/12/2025

    ಕೋಟ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಚಾಲನೆ

    15/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.