Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನಸೇವೆಯಿಂದ ಮಾತ್ರ ಜನತೆಯ ವಿಶ್ವಾಸ ಗಳಿಸಲು ಸಾಧ್ಯ: ಸಚಿವ ಪ್ರಮೋದ್ ಮಧ್ವರಾಜ್
    ಊರ್ಮನೆ ಸಮಾಚಾರ

    ಜನಸೇವೆಯಿಂದ ಮಾತ್ರ ಜನತೆಯ ವಿಶ್ವಾಸ ಗಳಿಸಲು ಸಾಧ್ಯ: ಸಚಿವ ಪ್ರಮೋದ್ ಮಧ್ವರಾಜ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರಿನಲ್ಲಿ ಸಚಿವ ಪ್ರಮೋದ್ ಮಧ್ಯರಾಜ್‌ಗೆ ಅಭಿನಂದನೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಅಧಿಕಾರ ಹಿಡಿಯಲು ಹವಣಿಸುವವರು ಮೊದಲು ಜನಸೇವೆ ಮಾಡಿ ಜನರ ಹೃದಯವನ್ನು ಗೆಲ್ಲವಂತಾಗಬೇಕು. ಸೇವೆಯ ಮೂಲಕ ಮಾತ್ರ ಜನರ ವಿಶ್ವಾಸವನ್ನು ಪಡೆದುಕೊಳ್ಳಲು ಸಾಧ್ಯವಿದೆ ಎಂದು ರಾಜ್ಯ ಮೀನುಗಾರಿಕಾ, ಕ್ರೀಡಾ ಮತ್ತು ಯುವಜನಸೇವಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

    ಬ್ಲಾಕ್ ಕಾಂಗ್ರೆಸ್ ಸಮಿತಿ ಬೈಂದೂರು ಹಾಗೂ ವಂಡ್ಸೆ ಇಲ್ಲಿನ ರೋಟರಿ ಭವನದಲ್ಲಿ ಜಂಟಿಯಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಸ್ವಾತಂತ್ರೋತ್ತರ ಭಾರತವನ್ನು ಅಭಿವೃದ್ಧಿಯೆಡೆಗೆ ಕೊಂಡೊಯ್ದ ಏಕೈಕ ಪಕ್ಷ ಕಾಂಗ್ರೆಸ್. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರೂ ಅದು ಪ್ರಚಾರಕ್ಕೆ ಬಾರದ ಕಾರಣದಿಂದಾಗಿ ಜನರ ಗಮನಕ್ಕೆ ಬರಲು ವಿಳಂಬವಾಗುತ್ತಿದೆ. ಪಕ್ಷದ ಕಾರ್ಯಕರ್ತರು ಪಕ್ಷವನ್ನು ಸಂಘಟಿಸುವಲ್ಲಿ ನಾಯರೊಂದಿಗೆ ಕೈಜೋಡಿಸುವುದಲ್ಲದೇ, ತಮ್ಮ ತಮ್ಮ ಊರಿನ ಪ್ರತಿ ಮನೆಗೂ ತೆರಳಿ ಜನರ ಕಷ್ಟವನ್ನು ಆಲಿಸುವ ಪ್ರವೃತ್ತಿ ಬೆಳೆಸಿಕೊಂಡು ಜನಸೇವೆಯಲ್ಲಿ ತೊಡಗಿಕೊಳ್ಳಿ ಎಂದು ಕರೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೈಂದೂರು ಕ್ಷೇತ್ರದ ಶಾಸಕ ಗೋಪಾಲ ಪೂಜಾರಿ ಮಾತನಾಡಿ ಜನರಿಗೆ ಅನುಕೂಲವಾಗುವ ದೃಷ್ಠಿಯಲ್ಲಿ ತೆರೆಯಲಾಗಿರುವ ಬಾಪುಜಿ ಸೇವಾ ಕೇಂದ್ರದಿಂದ ಹಲವು ಸರಕಾರಿ ಸೇವೆಗಳು ಗ್ರಾಮ ಪಂಚಾಯತಿಯಲ್ಲಿಯೇ ದೊರೆಯಲಿದೆ. ಕುಮ್ಕಿ ಹಕ್ಕು, 94ಸಿ ಮುಂತಾದವುಗಳ ಫಲಾನುಭವಿಗಳಿಗೂ ಶೀಘ್ರ ಹಕ್ಕುಪತ್ರ ನೀಡುವ ಕಾರ್ಯ ಪ್ರಗತಿಯಲ್ಲಿದೆ ಎಂದ ಅವರು ಕ್ಷೇತ್ರದ ಅಭಿವೃದ್ಧಿಯೊಂದಿಗೆ ಮುಂದಿನ ದಿನದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು ಎಂದರು.

    ಕೆಪಿಸಿಸಿ ಸದಸ್ಯರುಗಳಾದ ರಘುರಾಮ ಶೆಟ್ಟಿ, ಆಲೂರು ಮಂಜಯ್ಯ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಗೌರಿ ದೇವಾಡಿಗ, ಜ್ಯೋತಿ ನಾಯ್ಕ್, ಕಾಂಗ್ರೆಸ್ ಮುಖಂಡರುಗಳಾದ ವಾಸುದೇವ ಯಡಿಯಾಳ್, ಮದನಕುಮಾರ್, ರಿಯಾಜ್ ಅಹಮ್ಮದ್, ಎನ್‌ಎಸ್‌ಯುಐ ಅಧ್ಯಕ್ಷ ಸುಬ್ರಹ್ಮಣ್ಯ ಕಾಲ್ತೋಡು ಮೊದಲಾದವರು ಉಪಸ್ಥಿತಿರದ್ದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಂಡ್ಸೆ ಬ್ಲಾಕ್ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ ಸ್ವಾಗತಿಸಿದರು. ನ್ಯಾಯವಾದಿ ಪ್ರಸನ್ನಕುಮಾರ್ ನಿರೂಪಿಸಿದರು.

    Click here

    Click here

    Click here

    Call us

    Call us

    Byndoor, vandse block congress honored Minister Pramod madwaraj (3) Byndoor, vandse block congress honored Minister Pramod madwaraj (4) Byndoor, vandse block congress honored Minister Pramod madwaraj (5) Byndoor, vandse block congress honored Minister Pramod madwaraj (6)Byndoor, vandse block congress honored Minister Pramod madwaraj (2) Byndoor, vandse block congress honored Minister Pramod madwaraj (6) Byndoor, vandse block congress honored Minister Pramod madwaraj (7) Byndoor, vandse block congress honored Minister Pramod madwaraj (8) Byndoor, vandse block congress honored Minister Pramod madwaraj (9) Byndoor, vandse block congress honored Minister Pramod madwaraj (10)Byndoor, vandse block congress honored Minister Pramod madwaraj (1)

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.