Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎ.10-12: ’ಕೊಂಕಣಿ ರಂಗರತ್ನ’ ಪ್ರಶಸ್ತಿ ಪ್ರದಾನ
    ಎಲ್ಲಿ ಏನು

    ಎ.10-12: ’ಕೊಂಕಣಿ ರಂಗರತ್ನ’ ಪ್ರಶಸ್ತಿ ಪ್ರದಾನ

    Updated:09/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಕೊಂಕಣಿ ಭಾಷಾ ರಂಗ ಸಾಧಕರನ್ನು ಗೌರವಿಸಿ ತನ್ಮೂಲಕ ಕೊಂಕಣಿ ರಂಗ ಭೂಮಿ ಚಟುವಟಿಕೆಯನ್ನು ಹುರಿದುಂಬಿಸುವ ಉದ್ದೇಶಕ್ಕಾಗಿ ಉಪ್ಪುಂದದ ರಂಗತರಂಗ ಸಂಸ್ಥೆ ಆರಂಬಿಸಿರುವ ’ಕೊಂಕಣಿ ರಂಗರತ್ನ ಪ್ರಶಸ್ತಿ’ಗೆ ರಾಜ್ಯದ 9 ಕಲಾವಿದರನ್ನು ಆಯ್ಕೆಮಾಡಲಾಗಿದ್ದು ಏಪ್ರಿಲ್ 10, 11 ಹಾಗೂ 12ರಂದು ಕಂಬದಕೋಣೆ ನಿರ್ಮಲಾ ಸಭಾ ಭವನದಲ್ಲಿ ಜರಗುವ ಕೊಂಕಣಿ ರಂಗೋತ್ಸವದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಜರುಗಲಿದೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ನಡೆಯುವ ಈ ಉತ್ಸವವನ್ನು ಏ 10 ರಂದು ಸಂಜೆ 5:30ಕ್ಕೆ ಮಾನ್ಯ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಲಿದ್ದು ಶಾಸಕ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.

    Click Here

    Call us

    Click Here

    ರಂಗ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದು ಕೊಂಕಣಿ ಭಾಷೆಗೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ನೀಡಲಾಗುವ ಈ ಗೌರವಕ್ಕೆ ರಂಗನಟ ನಿರ್ದೇಶಕ ಸತೀಶ್ ಬಾಲಕೃಷ್ಣ ಪೈ ಕುಂದಾಪುರ, ಯಕ್ಷಗಾನ ಕಲಾವಿದೆ ಕಿರಣ ಪೈ, ಹಾಸ್ಯ ಸಾಹಿತಿ ಸಂಧ್ಯಾ ಶೆಣೈ, ಸಂಗೀತ ಹಾಗೂ ರಂಗಭೂಮಿ ನಿರ್ದೇಶಕ ಶ್ರೀನಿವಾಸ ಪ್ರಭು ಉಪ್ಪುಂದ, ನಿರ್ದೇಶಕ ರಂಗ ನಟ ಅಲ್ವೀನ್ ಅಂದ್ರಾದೆ ಸಾಸ್ತಾನ, ಲೇಖಕಿ ನಟಿ ಮಮತಾ ಕಾಮತ್ ಮೈಸೂರು, ನಿರ್ದೇಶಕ ನಟ ರವೀಂದ್ರ ಕೃಷ್ಣ ಪ್ರಭು ಶಿರಾಲಿ, ರಂಗನಟ ಪಾಂಡುರಂಗ ಮಡಿವಾಳ ಗಂಗೊಳ್ಳಿ, ರಂಗ ನಟ ನಿರ್ದೇಶಕ ಸಂತೋಷ ಶೆಣೈ ಮಂಗಳೂರು ಪಾತ್ರರಾಗಿದ್ದಾರೆ.
    ಹಲವು ಗಣ್ಯರ ಸಮಕ್ಷಮ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದ ಮೂರೂ ದಿನಗಳಕಾಲ ಕೊಂಕಣಿ ಮಹಿಳಾ ಸಮಾವೇಶ, ಶಿಕ್ಷಣದಲ್ಲಿ ನಮ್ಮ ಪಾತ್ರ ವಿಚಾರ ಗೋಷ್ಥಿ, ನಾಟಕ, ಯಕ್ಷಗಾನವಲ್ಲದೆ ಸ್ಥಳೀಯ ವರಮಹಾಲಕ್ಮೀ ವೃತ ಸೇವಾ ಸಮಿತಿಯವರ ಹಾಡು ನೃತ್ಯದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ ಎಂದು ರಂಗತರಂಗ ಅಧ್ಯಕ್ಷ ಓಂಗಣೇಶ್, ಕಾರ್ಯದರ್ಶಿ ಶಶಿಧರ ಶೆಣೈ, ಸಂಚಾಲಕ ಶ್ರೀಶ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    20/08/2025

    ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ

    23/05/2025

    ಜು.12-13ರಂದು ಬೈಂದೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸಂಚಾರಿ ಮ್ಯೂಸಿಯಂ ಪ್ರದರ್ಶನ

    11/06/2024
    Leave A Reply Cancel Reply

    1 × 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.